Advertisement
ಕೃಷಿ

ಒಂದು ಎಕರೆ ಬದನೆ ತೋಟ – 6 ಲಕ್ಷ ಆದಾಯ | ಯುವ ಕೃಷಿಕನ ಸಾಧನೆ

Share

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಅಶೋಕ ಮಾಸಾಳ ಅವರು ಜಮೀನಿನಲ್ಲಿ ಯುವ ತಂತ್ರಜ್ಞಾನದ ಸಹಾಯದಿಂದ 1083 ತಳಿಯ 2200 ಬದನೆಕಾಯಿ ಸಸಿಗಳನ್ನು ನೆಟ್ಟು ಉತ್ತಮ ಆದಾಯವನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತೊಟ್ಟಿಲು ಮಾದರಿಯ ಸರಿಯಾದ ಅಂತರ ಹಾಗೂ ನೀರಾವರಿ ಕ್ರಮದೊಂದಿಗೆ ಸಸಿಗಳಿಗೆ ಪೋಷಕಾಂಶ ಸಮರ್ಪಕವಾಗಿ ತಲುಪುವಂತೆ ಮಾಡಿದ್ದಾರೆ. ಮಾತ್ರವಲ್ಲ, ಅವರು ರೂ 12,000 ಮೌಲ್ಯದ ಪ್ಲಾಸ್ಟಿಕ್ ಮಲ್ಚಿಂಗ್ ಶೀಟ್‌ ಗಳು ಮತ್ತು ರೂ 9,000 ಮೌಲ್ಯದ ಡ್ರಿಪ್ ನೀರಾವರಿ ವ್ಯವಸ್ಥೆ ಅಳವಡಿಸಿಕೊಂಡಿದ್ದಾರೆ. ಇದರಿಂದ ನೀರಿನ ಉಳಿತಾಯವಾಗಿದ್ದು, ಹುಲ್ಲು ಬೆಳೆಯುವುದನ್ನು ತಡೆದು, ಬೆಳೆ ಆರೋಗ್ಯಕರವಾಗಿ ಬೆಳೆಯುವುದಕ್ಕೂ ಸಹಾಯವಾಗಿದೆ.

ಅಶೋಕ ಮಾಸಾಳರು ಬದನೆಕಾಯಿ ಬೆಳೆಗಳಿಗೆ ಯಾವುದೇ ರೋಗಗಳು ಬರದಂತೆ ಗಮನವಹಿಸಿ 7 ದಿನಗಳ ಅಂತರದಲ್ಲಿ ಪೋಷಕ ದ್ರವ್ಯಗಳ ಸಿಂಪಡಣೆ ಹಾಗೂ 3 ದಿನಗಳ ಅಂತರದಲ್ಲಿ ಹಾನಿಕಾರಕ ಕೀಟ ನಿರ್ವಹಿಸುತ್ತಾರೆ. ಇವರಿಗೆ ಈ ಕೃಷಿಯಿಂದ ಒಟ್ಟು ಉತ್ಪಾದನೆ 18 ರಿಂದ 20 ಟನ್ ಆಗಿದ್ದು, ಪ್ರತಿ ಕಿಲೋಗೆ ರೂ 40 ರಿಂದ ರೂ 50 ದರ ಸಿಕ್ಕಿದೆ. ಹೀಗಾಗಿ ಕೇವಲ ಒಂದು ಎಕರೆ ಬದನೆ ತೋಟದಿಂದಲೇ 6 ಲಕ್ಷದ ವರೆಗೂ ಆದಾಯ ಪಡೆದಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

1 hour ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

8 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

16 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

17 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago