Advertisement
MIRROR FOCUS

ರೈತ ಯುವಕರಿಗೆ ಮದುವೆಯಾಗಲು ಹೆಣ್ಣಿಲ್ಲ…! | ಸರ್ಕಾರದಿಂದ 5 ಲಕ್ಷ ರೂ. ಪ್ರೋತ್ಸಾಹಧನ ನೀಡಿ | ರೈತ ಸಂಘದಿಂದ ಜಾಗೃತಿ ಆಂದೋಲನ

Share

ರೈತ ಈ ದೇಶದ ಬೆನ್ನೆಲುಬು. ಇಡೀ ಜಗತ್ತಿನ ಜನ ದುಡಿದರೆ, ರೈತ ತಾನು ದುಡಿದು ತನ್ನ ಹೊಟ್ಟೆಯ ತುಂಬುವುದು ಮಾತ್ರವಲ್ಲ ಜಗದ ಜನರ ಹೊಟ್ಟೆ ತುಂಬುತ್ತಿದ್ದಾನೆ. ಆದರೂ ರೈತ ಅದೇನೇ ಕಷ್ಟ ಬಂದರೂ  ಸರಿದೂಗಿಸಿಕೊಂಡು, ಯಾರು ಸಹಾಯ ಮಾಡಲಿ ಬಿಡಲಿ, ತಾನು ಬೆಳೆಯ ಬೇಕಾದ ಬೆಳೆಯನ್ನು ಬೆಳೆಯದೇ ಬಿಡನು. ಅದರಲ್ಲೇ ಸಂತೋಷ ನೆಮ್ಮದಿ ಕಾಣುವನು ಕಾಯಕ ಯೋಗಿ. ಎಲ್ಲವನ್ನೂ ಸಹಿಸಿಕೊಳ್ಳಬಹುದು. ಆದರೆ ಈ ಕಾಯಕಯೋಗಿ, ಜಗದ ಹೊಟ್ಟೆ ತುಂಬಿಸುವ ರೈತ ಯುವಕರಿಗೆ(youth farmers) ಮದುವೆಗೆ(Marriage) ಹೆಣ್ಣು(Girl) ಸಿಕ್ಕಿಲ್ಲ ಅಂದ್ರೆ ಹೇಗೆ..? ಮುಂದೆ ದಾರಿ ಏನು..? ಅನ್ನೋ ಚಿಂತೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ರಾಜ್ಯಾದಾದ್ಯಂತ ಆಂದೋಲನವೇ (Movement) ಆರಂಭವಾಗಿದೆ.

ರೈತನ ಮಕ್ಕಳಿಗೆ 45 ವರ್ಷ ತುಂಬಿದರೂ ಕನ್ಯ ಸಿಗುತ್ತಿಲ್ಲ. ಇದೊಂದು ಸಾಮಾಜಿಕ ಸಮಸ್ಯೆಯಾಗಿ ನಿರ್ಮಾಣಗೊಂಡಿದ್ದು, ಇದರ ಬಗ್ಗೆ ಜಾಗೃತಿ ಮೂಡಿಸಲು ರೈತ ಸಂಘದಿಂದ ಆಂದೋಲನ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ರೈತ ಸಂಘದ ಹಸಿರು ಸೇನೆಯ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ. ರೈತರಿಗೆ ಆಗುವ ಅನ್ಯಾಯದ ವಿರುದ್ಧ ರೈತ ಸಂಘ ಇಲ್ಲಿಯವರೆಗೆ ಹೋರಾಟ ಮಾಡಿಕೊಂಡು ಬರುತ್ತಿದೆ. ಆದರೆ ಯಾರೂ ರೈತರ ಮಕ್ಕಳಿಗೆ ಹಾಗೂ ಯುವ ರೈತರಿಗೆ ಹೆಣ್ಣು ಕೊಡಲು ಮುಂದೆ ಬರುತ್ತಿಲ್ಲ. ಇದೊಂದು ಸಾಮಾಜಿಕ ಸಮಸ್ಯೆಯಾಗಿ ರೈತರನ್ನು ಚಿಂತೆಗೇಡು ಮಾಡಿದೆ. ಮೊದಲ ಬಾರಿಗೆ ರೈತರ ಸಾಮಾಜಿಕ ಸಮಸ್ಯೆಗೆ ಪರಿಹಾರ ಕಂಡುಹಿಡಿಯಲು ರಾಜ್ಯ ರೈತ ಸಂಘ ಹಸಿರು ಸೇನೆ ಜಾಗೃತಿ ಆಂದೋಲನ ಹಮ್ಮಿಕೊಂಡಿದೆ. . ಈ ಆಂದೋಲನದಲ್ಲಿ ರೈತರ ಮಕ್ಕಳಿಗೆ ಹೆಣ್ಣು ಕೊಡಿ ಎಂಬ ವಿಚಾರದ ಬಗ್ಗೆ ಸಾಮಾಜಿಕ ಅರಿವು ಮೂಡಿಸುವ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ.

45 ವರ್ಷ ತುಂಬಿದರೂ ರೈತರ ಮಕ್ಕಳ ಮದುವೆ ಇಲ್ಲ: ರಾಜ್ಯದ ಎಲ್ಲಾ ಕಡೆ ಈ ಸಮಸ್ಯೆ ಇದೆ. ರೈತರಿಗೆ ಹೆಣ್ಣು ಸಿಗದೇ ಇರಲು ಕಾರಣ ಹಳ್ಳಿಗಳಲ್ಲಿ ಮೂಲ ಸೌಲಭ್ಯಗಳ ಕೊರತೆ, ರೈತರಿಗೆ ಆದಾಯ ಖಾತರಿ ಇಲ್ಲ, ಹೆಣ್ಣು ಕೊಟ್ಟರೆ ಗಂಡನ ಮನೆಯವರು ನಾಳೆ ಹೇಗೆ ಸಾಕುತ್ತಾರೆ ಎಂಬ ಚಿಂತೆಯಿಂದ ಪೋಷಕರು ಹೆಣ್ಣು ಕೊಡುತ್ತಿಲ್ಲ. ಇದೊಂದು ಸಾಮಾಜಿಕ ಸಮಸ್ಯೆ, ಸರ್ಕಾರ ಪರಿಗಣಿಸಿ ಪರಿಹಾರ ಒದಗಿಸಬೇಕು. ಈ ಸಮಸ್ಯೆ ನಿವಾರಣೆ ಹಾಗೂ ರೈತರ ಮಕ್ಕಳ ಮದುವೆಗಾಗಿ ಸರ್ಕಾರ ಯೋಜನೆ ಜಾರಿಗೆ ತರಬೇಕು ಎಂದು ಬಡಗಲಪುರ ನಾಗೇಂದ್ರ ಮನವಿ ಮಾಡಿದ್ದಾರೆ.

5 ಲಕ್ಷ ಪ್ರೋತ್ಸಾಹಧನ ಸರ್ಕಾರ ನೀಡಬೇಕು: ನಮ್ಮ ಅಭಿಯಾನದ ಮುಖ್ಯ ಉದ್ದೇಶ ಹೆಣ್ಣು ಮಕ್ಕಳಿಗೆ ಕೃಷಿಯಿಂದ ಬದುಕು ಕಟ್ಟಿಕೊಳ್ಳಬಹುದು ಎಂಬ ಅರಿವು ಮೂಡಿಸುವುದು. ರೈತರ ಮಕ್ಕಳನ್ನು ಮದುವೆ ಆದರೆ ಸರ್ಕಾರ 5 ಲಕ್ಷ ಪ್ರೋತ್ಸಾಹಧನ ನೀಡಬೇಕು. ಕನಿಷ್ಠ 25 ಲಕ್ಷ ರೂ. ಯಾವುದೇ ಗ್ಯಾರಂಟಿ ಇಲ್ಲದೆ ಸರ್ಕಾರ ರೈತರ ಮಕ್ಕಳಿಗೆ ಲೋನ್ ನೀಡುವ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಒತ್ತಾಯಿಸಿ ರಾಜ್ಯಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ಬಡಗಲಪುರ ನಾಗೇಂದ್ರ ಮಾಹಿತಿ ನೀಡಿದ್ದಾರೆ.

ರೈತ ಸಂಘದಿಂದ ಕರಪತ್ರಗಳನ್ನು ಹಂಚಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತೇವೆ. ಅದಕ್ಕಾಗಿ ರೈತರ ಮಕ್ಕಳಿಗೆ ಹೆಣ್ಣು ಕೊಡಿ. ರೈತರ ಮಕ್ಕಳನ್ನು ಮದುವೆಯಾದ್ರೆ 5 ಲಕ್ಷ ಪ್ರೋತ್ಸಾಹ ಧನ ನೀಡಬೇಕೆಂಬ ವಿಚಾರದ ಬಗ್ಗೆ ಚರ್ಚೆ ಮಾಡಲು ಸಮಾವೇಶ ನಡೆಸಲಾಗುವುದೆಂದು ಹೇಳಿದರು. ಅರ್ಜುನನ ಸಾವು ತುಂಬ ನೋವು ತಂದಿತು: ಅರ್ಜುನನ ಸಾವು ನಮಗೆ ಬಹಳ ನೋವು ತಂದಿದೆ. ಗಟ್ಟಿಯಾದ ಸಂಸಾರದಲ್ಲಿ ಒಬ್ಬ ಮನೆಯವರೇ ತೀರಿಕೊಂಡಷ್ಟು ನೋವಾಗಿದೆ. ಚಿನ್ನದ ಅಂಬಾರಿ ಹೊರುತ್ತಿದ್ದ ಆನೆ ಅರ್ಜುನ, ಪುನಃ ಅಂತಹ ಅನೆಯನ್ನ ತಯಾರು ಮಾಡುವುದು ಕಷ್ಟ. ಅರ್ಜುನನ ಪಾವು ಬಹಳ ನೋವಿನ ಸಂಗತಿ ಎಂದು ಬಡಗಲಪುರ ನಾಗೇಂದ್ರ ಬೇಸರ.

Farmer's children don't get virgin even after reaching 45 years of age. State President of Green Sena of State Farmers Association, Badagalpura Nagendra said that this is a social problem and to create awareness about it, farmers association will start a movement. Farmers Union has been fighting till now against the injustice done to the farmers. But no one is coming forward to give daughters to farmers' children and young farmers. This is a social problem that has worried the farmers.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

7 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

9 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

16 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

23 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago