ಬೆಳೆ ನಷ್ಟದಿಂದ ಹಾವೇರಿ ಜಿಲ್ಲೆಯಲ್ಲಿ ಅತೀ ಹೆಚ್ಚು ರೈತರ ಆತ್ಮಹತ್ಯೆ….!

October 21, 2022
11:55 AM

ಬರ, ಅತಿವೃಷ್ಟಿ ಬೆಳೆ ನಷ್ಟದಿಂದ ಕಳೆದ 10 ತಿಂಗಳಲ್ಲಿ  ಹಾವೇರಿ ಜಿಲ್ಲೆಯಲ್ಲಿ 100 ಕ್ಕೂ ಅಧಿಕ ರೈತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವರದಿ ಬೆಳಕಿಗೆ ಬಂದಿದೆ.

Advertisement
Advertisement
Advertisement
Advertisement

ಹಾವೇರಿ ಜಿಲ್ಲೆಯ ರೈತರು ಅತಿವೃಷ್ಟಿ, ಪ್ರವಾಹ, ಬೆಳೆಹಾನಿಯಿಂದ ನಲುಗಿ ಹೋಗಿದ್ದು, ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸುಮಾರು 70 ಸಾವಿರ ಹೆಕ್ಟೇರ್ ಗೂ ಅಧಿಕ ಬೆಳೆಹಾನಿಯಾಗಿದೆ. ನೆರೆ, ಅತಿವೃಷ್ಟಿಯಿಂದ ಮುಂಗಾರು ಬೆಳೆಗಳು ಹಾನಿಯಾಗಿದ್ದು, ಕೃಷಿ, ತೋಟಗಾರಿಕೆ, ತರಕಾರಿ ಬೆಳೆಗಳೂ ಹಾನಿಯಾಗಿವೆ‌. ಜಿಲ್ಲೆಯ ಬಹುತೇಕ ರೈತರು ಬೆಳೆಹಾನಿ ಹಾಗೂ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವರದಿಯಾಗಿದೆ.

Advertisement

ಹಾವೇರಿ ಜಿಲ್ಲೆಯಲ್ಲಿ 2022 ರ ಜನವರಿಯಲ್ಲಿ 13 ರೈತರು ಆತ್ಮಹತ್ಯೆ ಮಾಡಿಕೊಂಡರೆ, ಫೆಬ್ರವರಿಯಲ್ಲಿ 10, ಮಾರ್ಚ್ 13, ಏಪ್ರಿಲ್ 10, ಮೇ 10, ಜೂನ್ 9, ಜುಲೈ 8, ಆಗಸ್ಟ್ 12, ಸೆಪ್ಟೆಂಬರ್ 20, ಅಕ್ಟೋಬರ್ 7 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.

Advertisement

ಸರ್ಕಾರವು ಬೆಳೆ ವಿಮೆಯಂತಹ ಯೋಜನೆ ಮಾಡಿದ್ದರೂ ಕೆಲವು ಜಿಲ್ಲೆಗಳಲ್ಲಿ ಈ ಯೋಜನೆಯ ಮೂಲಕವೂ ರೈತರಿಗೆ ಹಣ ಬಿಡುಗಡೆಯಾಗಿಲ್ಲ ಎಂದು ಕೆಲವು ರೈತರು ಹೇಳಿದ್ದರು. ಹೀಗಾಗಿ ಆರ್ಥಿಕ ಸಂಕಷ್ಟವು ರೈತರನ್ನು ಕಾಡುತ್ತಿರುವುದು  ಈ ಸಮಸ್ಯೆಗಳಿಗೆ ಕಾರಣವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 27-02-2025 | ಮಳೆಯ ಸಾಧ್ಯತೆ ಕ್ಷೀಣ | ಒಣ ಹವೆ ಮುಂದುವರಿಕೆ | ಕೆಲವು ಕಡೆ ತುಂತುರು ಮಳೆ ನಿರೀಕ್ಷೆ |
February 27, 2025
10:57 AM
by: ಸಾಯಿಶೇಖರ್ ಕರಿಕಳ
ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆ | ಅಹೋ ರಾತ್ರಿ ಶಿವ ಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ
February 27, 2025
12:10 AM
by: The Rural Mirror ಸುದ್ದಿಜಾಲ
ಈಶಾ ಫೌಂಡೇಷನ್ ನಿಂದ ಶಿವರಾತ್ರಿ | ಆತ್ಮ ಜಾಗೃತಿಯ ರಾತ್ರಿ, ಆತ್ಮಕ್ಕೆ ಮೂಲ ಆಧಾರ
February 26, 2025
11:52 PM
by: The Rural Mirror ಸುದ್ದಿಜಾಲ
ಶಿವರಾತ್ರಿ | ನೇಪಾಳದ ಪಶುಪತಿನಾಥನಿಗೆ ವಿಶೇಷ ಪೂಜೆ- ಲಕ್ಷಾಂತರ ಭಕ್ತಾದಿಗಳಿಂದ ದರ್ಶನ
February 26, 2025
11:45 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror