ಬೆಳೆ ನಷ್ಟದಿಂದ ಹಾವೇರಿ ಜಿಲ್ಲೆಯಲ್ಲಿ ಅತೀ ಹೆಚ್ಚು ರೈತರ ಆತ್ಮಹತ್ಯೆ….!

October 21, 2022
11:55 AM

ಬರ, ಅತಿವೃಷ್ಟಿ ಬೆಳೆ ನಷ್ಟದಿಂದ ಕಳೆದ 10 ತಿಂಗಳಲ್ಲಿ  ಹಾವೇರಿ ಜಿಲ್ಲೆಯಲ್ಲಿ 100 ಕ್ಕೂ ಅಧಿಕ ರೈತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವರದಿ ಬೆಳಕಿಗೆ ಬಂದಿದೆ.

Advertisement
Advertisement

ಹಾವೇರಿ ಜಿಲ್ಲೆಯ ರೈತರು ಅತಿವೃಷ್ಟಿ, ಪ್ರವಾಹ, ಬೆಳೆಹಾನಿಯಿಂದ ನಲುಗಿ ಹೋಗಿದ್ದು, ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸುಮಾರು 70 ಸಾವಿರ ಹೆಕ್ಟೇರ್ ಗೂ ಅಧಿಕ ಬೆಳೆಹಾನಿಯಾಗಿದೆ. ನೆರೆ, ಅತಿವೃಷ್ಟಿಯಿಂದ ಮುಂಗಾರು ಬೆಳೆಗಳು ಹಾನಿಯಾಗಿದ್ದು, ಕೃಷಿ, ತೋಟಗಾರಿಕೆ, ತರಕಾರಿ ಬೆಳೆಗಳೂ ಹಾನಿಯಾಗಿವೆ‌. ಜಿಲ್ಲೆಯ ಬಹುತೇಕ ರೈತರು ಬೆಳೆಹಾನಿ ಹಾಗೂ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವರದಿಯಾಗಿದೆ.

ಹಾವೇರಿ ಜಿಲ್ಲೆಯಲ್ಲಿ 2022 ರ ಜನವರಿಯಲ್ಲಿ 13 ರೈತರು ಆತ್ಮಹತ್ಯೆ ಮಾಡಿಕೊಂಡರೆ, ಫೆಬ್ರವರಿಯಲ್ಲಿ 10, ಮಾರ್ಚ್ 13, ಏಪ್ರಿಲ್ 10, ಮೇ 10, ಜೂನ್ 9, ಜುಲೈ 8, ಆಗಸ್ಟ್ 12, ಸೆಪ್ಟೆಂಬರ್ 20, ಅಕ್ಟೋಬರ್ 7 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸರ್ಕಾರವು ಬೆಳೆ ವಿಮೆಯಂತಹ ಯೋಜನೆ ಮಾಡಿದ್ದರೂ ಕೆಲವು ಜಿಲ್ಲೆಗಳಲ್ಲಿ ಈ ಯೋಜನೆಯ ಮೂಲಕವೂ ರೈತರಿಗೆ ಹಣ ಬಿಡುಗಡೆಯಾಗಿಲ್ಲ ಎಂದು ಕೆಲವು ರೈತರು ಹೇಳಿದ್ದರು. ಹೀಗಾಗಿ ಆರ್ಥಿಕ ಸಂಕಷ್ಟವು ರೈತರನ್ನು ಕಾಡುತ್ತಿರುವುದು  ಈ ಸಮಸ್ಯೆಗಳಿಗೆ ಕಾರಣವಾಗಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆ ನಿಷೇಧ ಇಲ್ಲ – ಈಗ ಅಡಿಕೆ ಬಳಕೆಯ ನಿಯಂತ್ರಣದತ್ತ ಫೋಕಸ್
January 30, 2026
10:42 PM
by: ಮಹೇಶ್ ಪುಚ್ಚಪ್ಪಾಡಿ
ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ
January 30, 2026
6:18 PM
by: ವಿಶೇಷ ಪ್ರತಿನಿಧಿ
ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ
January 30, 2026
6:04 PM
by: ದ ರೂರಲ್ ಮಿರರ್.ಕಾಂ
AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ
January 30, 2026
8:10 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror