ಬೆಳೆ ನಷ್ಟದಿಂದ ಹಾವೇರಿ ಜಿಲ್ಲೆಯಲ್ಲಿ ಅತೀ ಹೆಚ್ಚು ರೈತರ ಆತ್ಮಹತ್ಯೆ….!

October 21, 2022
11:55 AM

ಬರ, ಅತಿವೃಷ್ಟಿ ಬೆಳೆ ನಷ್ಟದಿಂದ ಕಳೆದ 10 ತಿಂಗಳಲ್ಲಿ  ಹಾವೇರಿ ಜಿಲ್ಲೆಯಲ್ಲಿ 100 ಕ್ಕೂ ಅಧಿಕ ರೈತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವರದಿ ಬೆಳಕಿಗೆ ಬಂದಿದೆ.

ಹಾವೇರಿ ಜಿಲ್ಲೆಯ ರೈತರು ಅತಿವೃಷ್ಟಿ, ಪ್ರವಾಹ, ಬೆಳೆಹಾನಿಯಿಂದ ನಲುಗಿ ಹೋಗಿದ್ದು, ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸುಮಾರು 70 ಸಾವಿರ ಹೆಕ್ಟೇರ್ ಗೂ ಅಧಿಕ ಬೆಳೆಹಾನಿಯಾಗಿದೆ. ನೆರೆ, ಅತಿವೃಷ್ಟಿಯಿಂದ ಮುಂಗಾರು ಬೆಳೆಗಳು ಹಾನಿಯಾಗಿದ್ದು, ಕೃಷಿ, ತೋಟಗಾರಿಕೆ, ತರಕಾರಿ ಬೆಳೆಗಳೂ ಹಾನಿಯಾಗಿವೆ‌. ಜಿಲ್ಲೆಯ ಬಹುತೇಕ ರೈತರು ಬೆಳೆಹಾನಿ ಹಾಗೂ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವರದಿಯಾಗಿದೆ.

ಹಾವೇರಿ ಜಿಲ್ಲೆಯಲ್ಲಿ 2022 ರ ಜನವರಿಯಲ್ಲಿ 13 ರೈತರು ಆತ್ಮಹತ್ಯೆ ಮಾಡಿಕೊಂಡರೆ, ಫೆಬ್ರವರಿಯಲ್ಲಿ 10, ಮಾರ್ಚ್ 13, ಏಪ್ರಿಲ್ 10, ಮೇ 10, ಜೂನ್ 9, ಜುಲೈ 8, ಆಗಸ್ಟ್ 12, ಸೆಪ್ಟೆಂಬರ್ 20, ಅಕ್ಟೋಬರ್ 7 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸರ್ಕಾರವು ಬೆಳೆ ವಿಮೆಯಂತಹ ಯೋಜನೆ ಮಾಡಿದ್ದರೂ ಕೆಲವು ಜಿಲ್ಲೆಗಳಲ್ಲಿ ಈ ಯೋಜನೆಯ ಮೂಲಕವೂ ರೈತರಿಗೆ ಹಣ ಬಿಡುಗಡೆಯಾಗಿಲ್ಲ ಎಂದು ಕೆಲವು ರೈತರು ಹೇಳಿದ್ದರು. ಹೀಗಾಗಿ ಆರ್ಥಿಕ ಸಂಕಷ್ಟವು ರೈತರನ್ನು ಕಾಡುತ್ತಿರುವುದು  ಈ ಸಮಸ್ಯೆಗಳಿಗೆ ಕಾರಣವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror