Advertisement
MIRROR FOCUS

ಬೆಳೆ ನಷ್ಟದಿಂದ ಹಾವೇರಿ ಜಿಲ್ಲೆಯಲ್ಲಿ ಅತೀ ಹೆಚ್ಚು ರೈತರ ಆತ್ಮಹತ್ಯೆ….!

Share

ಬರ, ಅತಿವೃಷ್ಟಿ ಬೆಳೆ ನಷ್ಟದಿಂದ ಕಳೆದ 10 ತಿಂಗಳಲ್ಲಿ  ಹಾವೇರಿ ಜಿಲ್ಲೆಯಲ್ಲಿ 100 ಕ್ಕೂ ಅಧಿಕ ರೈತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವರದಿ ಬೆಳಕಿಗೆ ಬಂದಿದೆ.

ಹಾವೇರಿ ಜಿಲ್ಲೆಯ ರೈತರು ಅತಿವೃಷ್ಟಿ, ಪ್ರವಾಹ, ಬೆಳೆಹಾನಿಯಿಂದ ನಲುಗಿ ಹೋಗಿದ್ದು, ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸುಮಾರು 70 ಸಾವಿರ ಹೆಕ್ಟೇರ್ ಗೂ ಅಧಿಕ ಬೆಳೆಹಾನಿಯಾಗಿದೆ. ನೆರೆ, ಅತಿವೃಷ್ಟಿಯಿಂದ ಮುಂಗಾರು ಬೆಳೆಗಳು ಹಾನಿಯಾಗಿದ್ದು, ಕೃಷಿ, ತೋಟಗಾರಿಕೆ, ತರಕಾರಿ ಬೆಳೆಗಳೂ ಹಾನಿಯಾಗಿವೆ‌. ಜಿಲ್ಲೆಯ ಬಹುತೇಕ ರೈತರು ಬೆಳೆಹಾನಿ ಹಾಗೂ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವರದಿಯಾಗಿದೆ.

ಹಾವೇರಿ ಜಿಲ್ಲೆಯಲ್ಲಿ 2022 ರ ಜನವರಿಯಲ್ಲಿ 13 ರೈತರು ಆತ್ಮಹತ್ಯೆ ಮಾಡಿಕೊಂಡರೆ, ಫೆಬ್ರವರಿಯಲ್ಲಿ 10, ಮಾರ್ಚ್ 13, ಏಪ್ರಿಲ್ 10, ಮೇ 10, ಜೂನ್ 9, ಜುಲೈ 8, ಆಗಸ್ಟ್ 12, ಸೆಪ್ಟೆಂಬರ್ 20, ಅಕ್ಟೋಬರ್ 7 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸರ್ಕಾರವು ಬೆಳೆ ವಿಮೆಯಂತಹ ಯೋಜನೆ ಮಾಡಿದ್ದರೂ ಕೆಲವು ಜಿಲ್ಲೆಗಳಲ್ಲಿ ಈ ಯೋಜನೆಯ ಮೂಲಕವೂ ರೈತರಿಗೆ ಹಣ ಬಿಡುಗಡೆಯಾಗಿಲ್ಲ ಎಂದು ಕೆಲವು ರೈತರು ಹೇಳಿದ್ದರು. ಹೀಗಾಗಿ ಆರ್ಥಿಕ ಸಂಕಷ್ಟವು ರೈತರನ್ನು ಕಾಡುತ್ತಿರುವುದು  ಈ ಸಮಸ್ಯೆಗಳಿಗೆ ಕಾರಣವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

3 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

4 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

17 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

21 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

1 day ago