ಬರ, ಅತಿವೃಷ್ಟಿ ಬೆಳೆ ನಷ್ಟದಿಂದ ಕಳೆದ 10 ತಿಂಗಳಲ್ಲಿ ಹಾವೇರಿ ಜಿಲ್ಲೆಯಲ್ಲಿ 100 ಕ್ಕೂ ಅಧಿಕ ರೈತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವರದಿ ಬೆಳಕಿಗೆ ಬಂದಿದೆ.
ಹಾವೇರಿ ಜಿಲ್ಲೆಯ ರೈತರು ಅತಿವೃಷ್ಟಿ, ಪ್ರವಾಹ, ಬೆಳೆಹಾನಿಯಿಂದ ನಲುಗಿ ಹೋಗಿದ್ದು, ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸುಮಾರು 70 ಸಾವಿರ ಹೆಕ್ಟೇರ್ ಗೂ ಅಧಿಕ ಬೆಳೆಹಾನಿಯಾಗಿದೆ. ನೆರೆ, ಅತಿವೃಷ್ಟಿಯಿಂದ ಮುಂಗಾರು ಬೆಳೆಗಳು ಹಾನಿಯಾಗಿದ್ದು, ಕೃಷಿ, ತೋಟಗಾರಿಕೆ, ತರಕಾರಿ ಬೆಳೆಗಳೂ ಹಾನಿಯಾಗಿವೆ. ಜಿಲ್ಲೆಯ ಬಹುತೇಕ ರೈತರು ಬೆಳೆಹಾನಿ ಹಾಗೂ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವರದಿಯಾಗಿದೆ.
ಹಾವೇರಿ ಜಿಲ್ಲೆಯಲ್ಲಿ 2022 ರ ಜನವರಿಯಲ್ಲಿ 13 ರೈತರು ಆತ್ಮಹತ್ಯೆ ಮಾಡಿಕೊಂಡರೆ, ಫೆಬ್ರವರಿಯಲ್ಲಿ 10, ಮಾರ್ಚ್ 13, ಏಪ್ರಿಲ್ 10, ಮೇ 10, ಜೂನ್ 9, ಜುಲೈ 8, ಆಗಸ್ಟ್ 12, ಸೆಪ್ಟೆಂಬರ್ 20, ಅಕ್ಟೋಬರ್ 7 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸರ್ಕಾರವು ಬೆಳೆ ವಿಮೆಯಂತಹ ಯೋಜನೆ ಮಾಡಿದ್ದರೂ ಕೆಲವು ಜಿಲ್ಲೆಗಳಲ್ಲಿ ಈ ಯೋಜನೆಯ ಮೂಲಕವೂ ರೈತರಿಗೆ ಹಣ ಬಿಡುಗಡೆಯಾಗಿಲ್ಲ ಎಂದು ಕೆಲವು ರೈತರು ಹೇಳಿದ್ದರು. ಹೀಗಾಗಿ ಆರ್ಥಿಕ ಸಂಕಷ್ಟವು ರೈತರನ್ನು ಕಾಡುತ್ತಿರುವುದು ಈ ಸಮಸ್ಯೆಗಳಿಗೆ ಕಾರಣವಾಗಿದೆ.
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…