ಬರ, ಅತಿವೃಷ್ಟಿ ಬೆಳೆ ನಷ್ಟದಿಂದ ಕಳೆದ 10 ತಿಂಗಳಲ್ಲಿ ಹಾವೇರಿ ಜಿಲ್ಲೆಯಲ್ಲಿ 100 ಕ್ಕೂ ಅಧಿಕ ರೈತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವರದಿ ಬೆಳಕಿಗೆ ಬಂದಿದೆ.
ಹಾವೇರಿ ಜಿಲ್ಲೆಯ ರೈತರು ಅತಿವೃಷ್ಟಿ, ಪ್ರವಾಹ, ಬೆಳೆಹಾನಿಯಿಂದ ನಲುಗಿ ಹೋಗಿದ್ದು, ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸುಮಾರು 70 ಸಾವಿರ ಹೆಕ್ಟೇರ್ ಗೂ ಅಧಿಕ ಬೆಳೆಹಾನಿಯಾಗಿದೆ. ನೆರೆ, ಅತಿವೃಷ್ಟಿಯಿಂದ ಮುಂಗಾರು ಬೆಳೆಗಳು ಹಾನಿಯಾಗಿದ್ದು, ಕೃಷಿ, ತೋಟಗಾರಿಕೆ, ತರಕಾರಿ ಬೆಳೆಗಳೂ ಹಾನಿಯಾಗಿವೆ. ಜಿಲ್ಲೆಯ ಬಹುತೇಕ ರೈತರು ಬೆಳೆಹಾನಿ ಹಾಗೂ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವರದಿಯಾಗಿದೆ.
ಹಾವೇರಿ ಜಿಲ್ಲೆಯಲ್ಲಿ 2022 ರ ಜನವರಿಯಲ್ಲಿ 13 ರೈತರು ಆತ್ಮಹತ್ಯೆ ಮಾಡಿಕೊಂಡರೆ, ಫೆಬ್ರವರಿಯಲ್ಲಿ 10, ಮಾರ್ಚ್ 13, ಏಪ್ರಿಲ್ 10, ಮೇ 10, ಜೂನ್ 9, ಜುಲೈ 8, ಆಗಸ್ಟ್ 12, ಸೆಪ್ಟೆಂಬರ್ 20, ಅಕ್ಟೋಬರ್ 7 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸರ್ಕಾರವು ಬೆಳೆ ವಿಮೆಯಂತಹ ಯೋಜನೆ ಮಾಡಿದ್ದರೂ ಕೆಲವು ಜಿಲ್ಲೆಗಳಲ್ಲಿ ಈ ಯೋಜನೆಯ ಮೂಲಕವೂ ರೈತರಿಗೆ ಹಣ ಬಿಡುಗಡೆಯಾಗಿಲ್ಲ ಎಂದು ಕೆಲವು ರೈತರು ಹೇಳಿದ್ದರು. ಹೀಗಾಗಿ ಆರ್ಥಿಕ ಸಂಕಷ್ಟವು ರೈತರನ್ನು ಕಾಡುತ್ತಿರುವುದು ಈ ಸಮಸ್ಯೆಗಳಿಗೆ ಕಾರಣವಾಗಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…