ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಬೆಳೆ ವಿಮೆಯಿಂದ ರೈತರಿಗೆ ಕನಿಷ್ಠ ಪರಿಹಾರ ದೊರಕುತ್ತಿರುವ ಕುರಿತು ರೈತರ ದೂರುಗಳ ಬಗ್ಗೆ ಉನ್ನತ ಮಟ್ಟದ ಸಭೆ ದೆಹಲಿಯಲ್ಲಿ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ಪರಿಹಾರ ಸಂಬಂಧಿಸಿದಂತೆ ಸಾಕಷ್ಟು ದೂರುಗಳನ್ನು ನೀಡುತ್ತಿದ್ದಾರೆ. ಅವುಗಳನ್ನು ಆದ್ಯತೆ ಮೇಲೆ ಪರಿಹರಿಸಬೇಕಿದೆ. ಕೆಲವು ರೈತರು ಅತಿ ಕಡಿಮೆ ಪರಿಹಾರವನ್ನು ಪಡೆಯುತ್ತಿದ್ದಾರೆ. ಇವೆಲ್ಲ ಗಂಭೀರ ವಿಚಾರಗಳಾಗಿವೆ. ಇಂತಹ ಸಮಸ್ಯೆಗಳನ್ನು ಮುಂದುವರಿಯಲು ಬಿಡಬಾರದು ಎಂದರು. ಅಲ್ಲದೆ, ಇಂತಹ ದೂರುಗಳ ಬಗ್ಗೆ ಪರಿಶೀಲನೆ ನಡೆಸಿ ವಿಮಾ ಕಂಪನಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಬೇಕು. ಬೆಳೆ ಪರಿಹಾರ ನಷ್ಟವನ್ನು ಸರಿಯಾದ ಪ್ರಮಾಣದಲ್ಲಿ ಮಾರ್ಗಸೂಚಿಗೆ ಅನುಗುಣವಾಗಿ ನಿಗದಿಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೆಲವು ರಾಜ್ಯಗಳಲ್ಲಿ ರೈತರಿಗೆ ಸಬ್ಸಿಡಿ ನೀಡುವಲ್ಲಿ ವಿಳಂಬವಾಗುತ್ತಿದೆ ಎಂಬುದನ್ನು ಉಲ್ಲೇಖಿಸಿದ ಸಚಿವರು, ಎಲ್ಲ ರಾಜ್ಯಗಳು ಸಮನ್ವಯದೊಂದಿಗೆ ಸಕಾಲದಲ್ಲಿ ತಮ್ಮ ಪಾಲಿನ ಅನುದಾನವನ್ನು ಠೇವಣಿ ಮಾಡಿದರೆ ರೈತರಿಗೆ ನಿಗದಿತ ಸಮಯದಲ್ಲಿ ಸಬ್ಸಿಡಿ ಬಿಡುಗಡೆಗೆ ಅನುಕೂಲವಾಗುತ್ತದೆ ಎಂದರು.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…