ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಬೆಳೆ ವಿಮೆಯಿಂದ ರೈತರಿಗೆ ಕನಿಷ್ಠ ಪರಿಹಾರ ದೊರಕುತ್ತಿರುವ ಕುರಿತು ರೈತರ ದೂರುಗಳ ಬಗ್ಗೆ ಉನ್ನತ ಮಟ್ಟದ ಸಭೆ ದೆಹಲಿಯಲ್ಲಿ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ಪರಿಹಾರ ಸಂಬಂಧಿಸಿದಂತೆ ಸಾಕಷ್ಟು ದೂರುಗಳನ್ನು ನೀಡುತ್ತಿದ್ದಾರೆ. ಅವುಗಳನ್ನು ಆದ್ಯತೆ ಮೇಲೆ ಪರಿಹರಿಸಬೇಕಿದೆ. ಕೆಲವು ರೈತರು ಅತಿ ಕಡಿಮೆ ಪರಿಹಾರವನ್ನು ಪಡೆಯುತ್ತಿದ್ದಾರೆ. ಇವೆಲ್ಲ ಗಂಭೀರ ವಿಚಾರಗಳಾಗಿವೆ. ಇಂತಹ ಸಮಸ್ಯೆಗಳನ್ನು ಮುಂದುವರಿಯಲು ಬಿಡಬಾರದು ಎಂದರು. ಅಲ್ಲದೆ, ಇಂತಹ ದೂರುಗಳ ಬಗ್ಗೆ ಪರಿಶೀಲನೆ ನಡೆಸಿ ವಿಮಾ ಕಂಪನಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಬೇಕು. ಬೆಳೆ ಪರಿಹಾರ ನಷ್ಟವನ್ನು ಸರಿಯಾದ ಪ್ರಮಾಣದಲ್ಲಿ ಮಾರ್ಗಸೂಚಿಗೆ ಅನುಗುಣವಾಗಿ ನಿಗದಿಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೆಲವು ರಾಜ್ಯಗಳಲ್ಲಿ ರೈತರಿಗೆ ಸಬ್ಸಿಡಿ ನೀಡುವಲ್ಲಿ ವಿಳಂಬವಾಗುತ್ತಿದೆ ಎಂಬುದನ್ನು ಉಲ್ಲೇಖಿಸಿದ ಸಚಿವರು, ಎಲ್ಲ ರಾಜ್ಯಗಳು ಸಮನ್ವಯದೊಂದಿಗೆ ಸಕಾಲದಲ್ಲಿ ತಮ್ಮ ಪಾಲಿನ ಅನುದಾನವನ್ನು ಠೇವಣಿ ಮಾಡಿದರೆ ರೈತರಿಗೆ ನಿಗದಿತ ಸಮಯದಲ್ಲಿ ಸಬ್ಸಿಡಿ ಬಿಡುಗಡೆಗೆ ಅನುಕೂಲವಾಗುತ್ತದೆ ಎಂದರು.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…