ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಬೆಳೆ ವಿಮೆಯಿಂದ ರೈತರಿಗೆ ಕನಿಷ್ಠ ಪರಿಹಾರ ದೊರಕುತ್ತಿರುವ ಕುರಿತು ರೈತರ ದೂರುಗಳ ಬಗ್ಗೆ ಉನ್ನತ ಮಟ್ಟದ ಸಭೆ ದೆಹಲಿಯಲ್ಲಿ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ಪರಿಹಾರ ಸಂಬಂಧಿಸಿದಂತೆ ಸಾಕಷ್ಟು ದೂರುಗಳನ್ನು ನೀಡುತ್ತಿದ್ದಾರೆ. ಅವುಗಳನ್ನು ಆದ್ಯತೆ ಮೇಲೆ ಪರಿಹರಿಸಬೇಕಿದೆ. ಕೆಲವು ರೈತರು ಅತಿ ಕಡಿಮೆ ಪರಿಹಾರವನ್ನು ಪಡೆಯುತ್ತಿದ್ದಾರೆ. ಇವೆಲ್ಲ ಗಂಭೀರ ವಿಚಾರಗಳಾಗಿವೆ. ಇಂತಹ ಸಮಸ್ಯೆಗಳನ್ನು ಮುಂದುವರಿಯಲು ಬಿಡಬಾರದು ಎಂದರು. ಅಲ್ಲದೆ, ಇಂತಹ ದೂರುಗಳ ಬಗ್ಗೆ ಪರಿಶೀಲನೆ ನಡೆಸಿ ವಿಮಾ ಕಂಪನಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಬೇಕು. ಬೆಳೆ ಪರಿಹಾರ ನಷ್ಟವನ್ನು ಸರಿಯಾದ ಪ್ರಮಾಣದಲ್ಲಿ ಮಾರ್ಗಸೂಚಿಗೆ ಅನುಗುಣವಾಗಿ ನಿಗದಿಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೆಲವು ರಾಜ್ಯಗಳಲ್ಲಿ ರೈತರಿಗೆ ಸಬ್ಸಿಡಿ ನೀಡುವಲ್ಲಿ ವಿಳಂಬವಾಗುತ್ತಿದೆ ಎಂಬುದನ್ನು ಉಲ್ಲೇಖಿಸಿದ ಸಚಿವರು, ಎಲ್ಲ ರಾಜ್ಯಗಳು ಸಮನ್ವಯದೊಂದಿಗೆ ಸಕಾಲದಲ್ಲಿ ತಮ್ಮ ಪಾಲಿನ ಅನುದಾನವನ್ನು ಠೇವಣಿ ಮಾಡಿದರೆ ರೈತರಿಗೆ ನಿಗದಿತ ಸಮಯದಲ್ಲಿ ಸಬ್ಸಿಡಿ ಬಿಡುಗಡೆಗೆ ಅನುಕೂಲವಾಗುತ್ತದೆ ಎಂದರು.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…