ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಬೆಳೆ ವಿಮೆಯಿಂದ ರೈತರಿಗೆ ಕನಿಷ್ಠ ಪರಿಹಾರ ದೊರಕುತ್ತಿರುವ ಕುರಿತು ರೈತರ ದೂರುಗಳ ಬಗ್ಗೆ ಉನ್ನತ ಮಟ್ಟದ ಸಭೆ ದೆಹಲಿಯಲ್ಲಿ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ಪರಿಹಾರ ಸಂಬಂಧಿಸಿದಂತೆ ಸಾಕಷ್ಟು ದೂರುಗಳನ್ನು ನೀಡುತ್ತಿದ್ದಾರೆ. ಅವುಗಳನ್ನು ಆದ್ಯತೆ ಮೇಲೆ ಪರಿಹರಿಸಬೇಕಿದೆ. ಕೆಲವು ರೈತರು ಅತಿ ಕಡಿಮೆ ಪರಿಹಾರವನ್ನು ಪಡೆಯುತ್ತಿದ್ದಾರೆ. ಇವೆಲ್ಲ ಗಂಭೀರ ವಿಚಾರಗಳಾಗಿವೆ. ಇಂತಹ ಸಮಸ್ಯೆಗಳನ್ನು ಮುಂದುವರಿಯಲು ಬಿಡಬಾರದು ಎಂದರು. ಅಲ್ಲದೆ, ಇಂತಹ ದೂರುಗಳ ಬಗ್ಗೆ ಪರಿಶೀಲನೆ ನಡೆಸಿ ವಿಮಾ ಕಂಪನಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಬೇಕು. ಬೆಳೆ ಪರಿಹಾರ ನಷ್ಟವನ್ನು ಸರಿಯಾದ ಪ್ರಮಾಣದಲ್ಲಿ ಮಾರ್ಗಸೂಚಿಗೆ ಅನುಗುಣವಾಗಿ ನಿಗದಿಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೆಲವು ರಾಜ್ಯಗಳಲ್ಲಿ ರೈತರಿಗೆ ಸಬ್ಸಿಡಿ ನೀಡುವಲ್ಲಿ ವಿಳಂಬವಾಗುತ್ತಿದೆ ಎಂಬುದನ್ನು ಉಲ್ಲೇಖಿಸಿದ ಸಚಿವರು, ಎಲ್ಲ ರಾಜ್ಯಗಳು ಸಮನ್ವಯದೊಂದಿಗೆ ಸಕಾಲದಲ್ಲಿ ತಮ್ಮ ಪಾಲಿನ ಅನುದಾನವನ್ನು ಠೇವಣಿ ಮಾಡಿದರೆ ರೈತರಿಗೆ ನಿಗದಿತ ಸಮಯದಲ್ಲಿ ಸಬ್ಸಿಡಿ ಬಿಡುಗಡೆಗೆ ಅನುಕೂಲವಾಗುತ್ತದೆ ಎಂದರು.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…