ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಬೆಳೆ ವಿಮೆಯಿಂದ ರೈತರಿಗೆ ಕನಿಷ್ಠ ಪರಿಹಾರ ದೊರಕುತ್ತಿರುವ ಕುರಿತು ರೈತರ ದೂರುಗಳ ಬಗ್ಗೆ ಉನ್ನತ ಮಟ್ಟದ ಸಭೆ ದೆಹಲಿಯಲ್ಲಿ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ಪರಿಹಾರ ಸಂಬಂಧಿಸಿದಂತೆ ಸಾಕಷ್ಟು ದೂರುಗಳನ್ನು ನೀಡುತ್ತಿದ್ದಾರೆ. ಅವುಗಳನ್ನು ಆದ್ಯತೆ ಮೇಲೆ ಪರಿಹರಿಸಬೇಕಿದೆ. ಕೆಲವು ರೈತರು ಅತಿ ಕಡಿಮೆ ಪರಿಹಾರವನ್ನು ಪಡೆಯುತ್ತಿದ್ದಾರೆ. ಇವೆಲ್ಲ ಗಂಭೀರ ವಿಚಾರಗಳಾಗಿವೆ. ಇಂತಹ ಸಮಸ್ಯೆಗಳನ್ನು ಮುಂದುವರಿಯಲು ಬಿಡಬಾರದು ಎಂದರು. ಅಲ್ಲದೆ, ಇಂತಹ ದೂರುಗಳ ಬಗ್ಗೆ ಪರಿಶೀಲನೆ ನಡೆಸಿ ವಿಮಾ ಕಂಪನಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಬೇಕು. ಬೆಳೆ ಪರಿಹಾರ ನಷ್ಟವನ್ನು ಸರಿಯಾದ ಪ್ರಮಾಣದಲ್ಲಿ ಮಾರ್ಗಸೂಚಿಗೆ ಅನುಗುಣವಾಗಿ ನಿಗದಿಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೆಲವು ರಾಜ್ಯಗಳಲ್ಲಿ ರೈತರಿಗೆ ಸಬ್ಸಿಡಿ ನೀಡುವಲ್ಲಿ ವಿಳಂಬವಾಗುತ್ತಿದೆ ಎಂಬುದನ್ನು ಉಲ್ಲೇಖಿಸಿದ ಸಚಿವರು, ಎಲ್ಲ ರಾಜ್ಯಗಳು ಸಮನ್ವಯದೊಂದಿಗೆ ಸಕಾಲದಲ್ಲಿ ತಮ್ಮ ಪಾಲಿನ ಅನುದಾನವನ್ನು ಠೇವಣಿ ಮಾಡಿದರೆ ರೈತರಿಗೆ ನಿಗದಿತ ಸಮಯದಲ್ಲಿ ಸಬ್ಸಿಡಿ ಬಿಡುಗಡೆಗೆ ಅನುಕೂಲವಾಗುತ್ತದೆ ಎಂದರು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…