ರೈತರು ಹೊಲಗಳಲ್ಲಿ ಬಳಕೆ ಮಾಡುತ್ತಿರುವ ರಸಗೊಬ್ಬರಗಳು ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ವೈಜ್ಞಾನಿಕ ತಂತ್ರಜ್ಞಾನಗಳು ಮತ್ತು ಸಾಧನಗಳ ಮೂಲಕ ಪತ್ತೆ ಹಚ್ಚಲು ಹೆಚ್ಚಿನ ಒತ್ತು ನೀಡಬೇಕಾಗಿದೆ ಎಂದು ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ದೆಹಲಿಯಲ್ಲಿ ಭಾರತೀಯ ಕೃಷಿ ಸಂಶೋಧನಾ ಮಂಡಳಿ-ICARನ 96ನೇ ವಾರ್ಷಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇದೀಗ ನಾವಿನ್ಯತೆ, ಸುಸ್ಥಿರ ಅಭಿವೃದ್ಧಿ ಮತ್ತು ಕೃಷಿ ವಲಯದಲ್ಲಿ ರೈತ ಕಲ್ಯಾಣಕ್ಕೆ ಒತ್ತು ನೀಡಲಾಗಿದೆ. ರಾಷ್ಟ್ರ ನಿರ್ಮಾಣದಲ್ಲಿ ರೈತರ ಕೊಡುಗೆ ಅಪಾರ. ಇದೀಗ ಸಂಶೋಧನೆಗಳು ಕೇವಲ ಪ್ರಯೋಗಾಲಯದಲ್ಲಿ ನಡೆಯುತ್ತಿಲ್ಲ, ರೈತರ ಹೊಲಗಳಲ್ಲಿ ನಡೆಯುತ್ತಿದೆ ಎಂದು ತಿಳಿಸಿದರು. ಭಾರತ, ವಿಶ್ವದ ಅತಿದೊಡ್ಡ ಆಹಾರ ಉತ್ಪಾದನಾ ರಾಷ್ಟ್ರವಾಗುತ್ತಿರುವುದನ್ನು ಯಾರೊಬ್ಬರೂ ತಡೆಯಲು ಸಾಧ್ಯವಿಲ್ಲ. ಶ್ರಮ ವಹಿಸಿ ದುಡಿಯುವ ರೈತರು ಮತ್ತು ಫಲವತ್ತಾದ ಭೂಮಿಯಿಂದಾಗಿ, ದೇಶದಲ್ಲಿ ಆಹಾರ ಉತ್ಪಾದನೆ ಗಣನೀಯವಾಗಿ ಹೆಚ್ಚಾಗುತ್ತಿದೆ ಎಂದರು.
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…