Advertisement
Opinion

ರೈತರು ಕಷ್ಟ ಪಟ್ಟು ಬೆಳೆದ ಕಬ್ಬಿಗೆ “ಕಿಮ್ಮತ್ತು ಕೇಳುವ ಹಿಮ್ಮತ್ತು ಮಾಡಿ” |

Share

ಈ ವರ್ಷ ಕಬ್ಬಿಗೆ ಕಾರ್ಖಾನೆ ಮಾಲೀಕರು ರೈತರಿಗೆ ಹೇಗೆ ದರ ಕೊಡಬಹುದು..? ಪ್ರತಿ ವರ್ಷ ರೈತ ಹಾಗೂ ಸಕ್ಕರೆ ಕಾರ್ಖಾನೆ  ಮಧ್ಯೆ ಬೆಲೆಗಾಗಿ ಕಾದಾಟ ಇದ್ದಿದ್ದೇ. ರೈತರು ಕಷ್ಟ ಪಟ್ಟು ಬೆಳೆದ ಕಬ್ಬಿಗೆ ಸರಿಯಾದ ಬೆಲೆ, ಸೂಕ್ತ ಸಮಯಕ್ಕೆ ಬೆಲೆ ಸಿಗುವ ಹಾಗೆ ಆಗಬೇಕು. ಸಕ್ಕರೆ ಕಾರ್ಖಾನೆಗಳು ಈ ವರ್ಷ 2023-24 ರ ಕಬ್ಬಿಗೆ  ರೂಪಾಯಿ 3500.00 ಪ್ರತೀ ಟನ್ನಿಗೆ ಸಿಗುವ ಹಾಗೆ ಆಗಬೇಕು, ಇದು ನಿರೀಕ್ಷೆ…

Advertisement
Advertisement
ಪ್ರತೀ ಟನ್ ಕಬ್ಬಿಗೆ ಸರಾಸರಿ  115 ಕೆಜಿ ಸಕ್ಕರೆ ಸಿಗುತ್ತದೆ ಅಂದರೆ 3600 ರೂಪಾಯಿ ಪ್ರತೀಕ್ವಿಂಟಾಲ್‌ ಗೆ. ಇನ್ನು ಮಳಿ (molasys) , ಬಗ್ಯಸ್ (bagasse) , ಪ್ರೆಸ್ಸ್ ಮಡ್‌  ಎಲ್ಲಾ ಸೇರಿ ಅಂದಾಜು 5000 ರೂಪಾಯಿ ಲಭ್ಯವಾಗಬೇಕು. ಇನ್ನು ಪ್ರತಿ ಕಾರ್ಖಾನೆಗಳು ಎಥನಾಲ್ ಹಾಗೂ ವಿದ್ಯುತ್ ( ಕೋ.gen) ತಯಾರು ಮಾಡುತ್ತಿದ್ದಾರೆ. ಅದರಲ್ಲೂ ಆದಾಯ ಬರುತ್ತದೆ ಕಾರ್ಖಾನೆಗಳಿಗೆ. ಇನ್ನು ಒಟ್ಟು ಖರ್ಚು ಲೆಕ್ಕ ಹಾಕಿದರೂ  3700 ರೂಪಾಯಿ ಆಗುತ್ತದೆ. ಇದು ಎಥೆನಾಲ್ & co.gen ವಿದ್ಯುತ್ ಉತ್ಪಾದನೆ ಆದಾಯ ಬಿಟ್ಟು.

ಹೀಗೆ ಪ್ರತೀ ಸಕ್ಕರೆ ಕಾರ್ಖಾನೆ ರೈತರ ಪ್ರತೀ ಟನ್ ಕಬ್ಬಿಗೆ 3500 ರೂ ಕೊಟ್ಟ ನಂತರವೂ ಕೂಡ ಸಾಕಷ್ಟು ಲಾಭ ಉಳಿಯುತ್ತದೆ. 
ಆದರೆ ಕಾರ್ಖಾನೆಯವರು ಕೊಡುವುದಿಲ್ಲ. ಕಾರಣ ರೈತ ತಾನು ಕಷ್ಟ ಪಟ್ಟು ಬೆಳೆದ ಕಬ್ಬಿಗೆ ಕಿಮ್ಮತ್ತು ಕೇಳುವ ಹಿಮ್ಮತ್ತು ಮಾಡುವುದಿಲ್ಲ. ಮೇಲಾಗಿ ದರ ಜಾಹೀರು ಮಾಡದೇ ಕಾರ್ಖಾನೆ ಶುರು ಮಾಡಲು ಕಬ್ಬು ಪೂರೈಸುತ್ತಾರೆ. ಹಾಗೆ ಕಬ್ಬು ಕೊಟ್ಟು , ಕಡಿಮೆ ದರ ಅದರೂ ಕೂಡ ಕಾರ್ಖಾನೆ ಶುರು ಮಾಡಿ ತಿಂಗಳ ನಂತರ ಕೊಟ್ಟರೂ ಸರಿ. ಸುಮ್ಮನೆ ಇರುತ್ತಾನೆ.

ಈ ವರ್ಷ ಕೂಡ ಅದೇ ನಾಟಕ ನಡೆದಿದೆ. ರೈತರು ಹೀಗೆ ಕಾರ್ಖಾನೆಗಳಿಗೆ ಈಗಲೇ ಕಬ್ಬು ಕೊಟ್ಟರೆ 2900 ಕ್ಕಿಂತ ಹೆಚ್ಚಿನ ದರ ಕೊಡುವುದಿಲ್ಲ, ಯಾಕೆಂದರೇ ದರ ಕಡಿಮೆ ಇದೆ ಅಂತ ಗೊತ್ತಿದ್ದರೂ ಕೂಡ ಕಾರ್ಖಾನೆಗಳ ಅಡ್ಡೆಗಳು ಜಾಮ್ ಆದರೆ ನಂತರ ಕೊಡಲು ಕಾರ್ಖಾನೆಯ ಮಾಲೀಕರು ಅಷ್ಟೊಂದು ದಯಾಳುಗಳಲ್ಲಾ, ಕೊಟ್ಟರೂ 20..30. ಹೆಚ್ಚು ಕೊಡಬಹುದು, 
ಅಂದ್ರೆ 2900. ರ ಆಸು - ಪಾಸು ಕಥೆ ಮುಗಿಯುತ್ತದೆ.

ಅದಕ್ಕೆ ಮಹಾರಾಷ್ಟ್ರದ ದರ ಘೋಷಣೆ ಆಗುವವರೆಗೆ ಕಾದು ನೋಡಿ. ಇಲ್ಲದಿದ್ದರೆ ಈ ವರ್ಷ ಕಬ್ಬು ಅತೀ ಕಡಿಮೆ ಇದೆ. ಸಕ್ಕರೆಗೆ ಹೆಚ್ಚು ದರ ಇದೆ. ಎಥನಾಲ್ ಮಾಡುತ್ತಿದ್ದಾರೆ. Co Gen (ಕರೆಂಟ್) ತಯಾರು ಮಾಡ್ತಾರೆ. ಇಂತಹ ವರ್ಷ ಕೂಡ ಲಾಭ ಪಡಿಯದೆ ಹೋದರೆ ರೈತ ಯಾವತ್ತೂ ಗೆಲ್ಲಲಾರ..

ಬರಹ :
ಅಂಬು ಮಾರಲಭಾವಿ ಗೋಲಗೇರಿ, ರೈತ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 28.09.2024 | ರಾಜ್ಯದಾದ್ಯಂತ ಗುಡುಗು ಸಹಿತ ಮಳೆ ಸಾಧ್ಯತೆ

29.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

34 mins ago

ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ | ಗ್ರಾಮೀಣ ಭಾಗಕ್ಕೆ ಹೆಮ್ಮೆಯ ಗರಿ |

ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿರುವ ಕುತ್ಲೂರು ಗ್ರಾಮ ಪ್ರಾಕೃತಿಕ ಸೌ೦ದರ್ಯವನ್ನೇ ಹೊದ್ದು ಮಲಗಿದೆ. ಇಂತಹ…

15 hours ago

ಇಂಗುಗುಂಡಿ ನಿರ್ಮಿಸಿದ ಮಹಿಳಾ ತಂಡ | 6 ಮಂದಿ ಮಹಿಳೆಯರಿಂದ 236 ಕ್ಕೂ ಹೆಚ್ಚು ಇಂಗುಗುಂಡಿ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲಮುಡ್ನೂರು ಗ್ರಾಮ ಪಂಚಾಯಿತಿಯ ಚಿಗುರು ಸಂಜೀವಿನಿ…

16 hours ago

ಜವಳಿ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಗೆ ಆದ್ಯತೆ

ಕೃಷಿ ಕ್ಷೇತ್ರದ ನಂತರ ಜವಳಿ ಕ್ಷೇತ್ರದಲ್ಲಿ ಅತಿ ಹೆಚ್ಚು ಉದ್ಯೋಗ ಸೃಷ್ಟಿಗೆ ಅವಕಾಶವಿದ್ದು,…

17 hours ago

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ನಿರ್ಧಾರ | ನಂದಿನಿ ತುಪ್ಪಕ್ಕೆ ಬೇಡಿಕೆ

ರಾಜ್ಯ ಮತ್ತು ಹೊರರಾಜ್ಯದ ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ನಂದಿನಿ…

18 hours ago