ರೈತರ ದೆಹಲಿ ಚಲೋ ಪ್ರತಿಭಟನೆ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರಿಂದ ‘ಮಹಾಪಂಚಾಯತ್’

March 15, 2024
4:27 PM

ಕೇಂದ್ರ ಸರ್ಕಾರದ(Central Govt) ರೈತ ನೀತಿ, ಕನಿಷ್ಠ ಬೆಂಬಲ ಬೆಲೆ (MSP) ಖಾತರಿ ಕಾನೂನು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು(Farmer) ದೆಹಲಿ ಚಲೋ(Delhi Chalo) ಪ್ರತಿಭಟನೆಯನ್ನು(Protest) ನಡೆಸುತ್ತಿದ್ದಾರೆ. ಇಂದು ದೆಹಲಿ ರಾಮಲೀಲಾ ಮೈದಾನದಲ್ಲಿ(Ramleela Ground) ರೈತರು ‘ಮಹಾಪಂಚಾಯತ್’(Mahapanchayat) ಹಮ್ಮಿಕೊಂಡಿದ್ದಾರೆ.

ದೆಹಲಿ ಚಲೋ ಹಮ್ಮಿಕೊಂಡಿರುವ ರೈತರನ್ನು ಪಂಜಾಬ್-ಹರಿಯಾಣದ ಖಾನೌರಿ ಮತ್ತು ಶಂಭು ಗಡಿಗಳಲ್ಲಿ ಹರಿಯಾಣದ ಬಿಜೆಪಿ ಸರ್ಕಾರದ ಪೊಲೀಸರು ತಡೆದಿದ್ದಾರೆ. ಫೆ.13ರಂದು ದೆಹಲಿ ಚಲೋ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿರುವ ರೈತರು, ಇನ್ನೂ ಕೂಡ ಗಡಿಗಳಲ್ಲೇ ಇದ್ದಾರೆ. ಈ ನಡುವೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ‘ಕಿಸಾನ್ ಮಝ್ದೂರ್ ಮಹಾಪಂಚಾಯತ್’ ಎಂಬ ಹೆಸರಿನಲ್ಲಿ ದೆಹಲಿಯಲ್ಲಿ ಸಭೆ ಆಯೋಜಿಸಿದೆ. ರೈತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇವಲ 5,000 ಮಂದಿ ಮಾತ್ರ ಪಾಲ್ಗೊಳ್ಳಬೇಕು, ಕೋಲು, ಬಡಿಗೆಯ ಅಥವಾ ಯಾವುದೇ ಹರಿತವಾದ ಆಯುಧಗಳು, ಮತ್ತು ಟ್ರ್ಯಾಕ್ಟರ್‌ಗಳನ್ನು ತರಬಾರದು ಎಂದು ಮಹಾ ಪಂಚಾಯತ್‌ಗೆ ಅನುಮತಿ ನೀಡುವಾಗ ದೆಹಲಿ ಪೊಲೀಸರು ಸೂಚಿಸಿದ್ದಾರೆ. ಮತ್ತೊಂದೆಡೆ ರೈತರ ಮಹಾಪಂಚಾಯತ್ ಹಿನ್ನೆಲೆ ದೆಹಲಿ ಸಂಚಾರಿ ಪೊಲೀಸರು ಕೆಲವೆಡೆ ಸಂಚಾರ ಮಾರ್ಗ ಬದಲಾಯಿಸಿದ್ದಾರೆ.

ನಾವು 5000 ಜನರು ಮಾತ್ರ ಪಾಲ್ಗೊಳ್ಳುವಂತೆ ಸೂಚಿಸಿದ್ದೇವೆ. ಆದರೆ, 15 ಸಾವಿರ ಜನರು ಪಾಲ್ಗೊಳ್ಳುವ ಸಾಧ್ಯತೆಯಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೇಶದ ವಿವಿಧ ಭಾಗಗಳಿಂದ ಸುಮಾರು 30 ಸಾವಿರ ರೈತರು ಮಹಾಪಂಚಾಯತ್‌ನಲ್ಲಿ ಪಾಲ್ಗೊಳ್ಳುತ್ತಾರೆ ಎಂದು ಎಸ್‌ಕೆಎಂ ತಿಳಿಸಿದೆ. ಫೆಬ್ರವರಿ 22ರಂದು ಚಂಢೀಗಡದಲ್ಲಿ ಸಭೆ ನಡೆಸಿದ್ದ ಎಸ್‌ಕೆಎಂ, ಇಂದು ಮಹಾಪಂಚಾಯತ್ ನಡೆಸುವ ಬಗ್ಗೆ ಘೋಷಿಸಿತ್ತು. ಪೊಲೀಸರು ಮಾರ್ಚ್‌ 11ರಂದು ಅನುಮತಿ ನೀಡಿದ್ದರು. ಎಸ್‌ಕೆಎಂ 37 ರೈತ ಸಂಘಟನೆಗಳ ಮಹಾ ಒಕ್ಕೂಟವಾಗಿದೆ.

ವರದಿಗಳ ಪ್ರಕಾರ, ಮೋದಿ ಸರ್ಕಾರದ ಕಾರ್ಪೊರೇಟ್ ಪರ, ಕೋಮುವಾದಿ, ಸರ್ವಾಧಿಕಾರಿ ನೀತಿಗಳ ವಿರುದ್ಧ ಹೋರಾಟವನ್ನು ತೀವ್ರಗೊಳಿಸಲು, ಕೃಷಿ, ಆಹಾರ ಭದ್ರತೆಯನ್ನು ಉಳಿಸಲು ಹೋರಾಡಲು, ಜೀವನೋಪಾಯ ಮತ್ತು ಕಾರ್ಪೊರೇಟ್ ಲೂಟಿಯಿಂದ ಜನರನ್ನು ರಕ್ಷಿಸಲು ಮಹಾಪಂಚಾಯತ್‌ನಲ್ಲಿ ರೈತರು ಸಂಕಲ್ಪ ಪತ್ರ’ ಅಥವಾ ‘ನಿರ್ಣಯದ ಪತ್ರ’ವನ್ನು ಬಿಡುಗಡೆ ಮಾಡಲಿದ್ದಾರೆ.

– ಅಂತರ್ಜಾಲ ಮಾಹಿತಿ

Farmers from Punjab are set to hold a Mahapanchayat at Ramlila Maidan in Delhi on Thursday. On the call of Samyukt Kisan Morcha, farmers said they would hold a foot march from Uchana to Jind before the Mahapanchayat, and would work to show strength to the government.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ
June 13, 2026
7:41 AM
by: ಮಿರರ್‌ ಡೆಸ್ಕ್
ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು
June 13, 2026
7:23 AM
by: ದ ರೂರಲ್ ಮಿರರ್.ಕಾಂ
Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ
June 12, 2026
8:37 PM
by: ದ ರೂರಲ್ ಮಿರರ್.ಕಾಂ
ಉತ್ತರ ಪ್ರದೇಶದಲ್ಲಿ ಅಡಿಕೆ ಮೇಲಿನ ಮಂಡಿ ತೆರಿಗೆ ರದ್ದುಪಡಿಸಿ – ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೊ ಮನವಿ
June 12, 2026
7:52 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror