Advertisement
MIRROR FOCUS

ರೈತರ ದೆಹಲಿ ಚಲೋ ಪ್ರತಿಭಟನೆ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರಿಂದ ‘ಮಹಾಪಂಚಾಯತ್’

Share

ಕೇಂದ್ರ ಸರ್ಕಾರದ(Central Govt) ರೈತ ನೀತಿ, ಕನಿಷ್ಠ ಬೆಂಬಲ ಬೆಲೆ (MSP) ಖಾತರಿ ಕಾನೂನು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು(Farmer) ದೆಹಲಿ ಚಲೋ(Delhi Chalo) ಪ್ರತಿಭಟನೆಯನ್ನು(Protest) ನಡೆಸುತ್ತಿದ್ದಾರೆ. ಇಂದು ದೆಹಲಿ ರಾಮಲೀಲಾ ಮೈದಾನದಲ್ಲಿ(Ramleela Ground) ರೈತರು ‘ಮಹಾಪಂಚಾಯತ್’(Mahapanchayat) ಹಮ್ಮಿಕೊಂಡಿದ್ದಾರೆ.

Advertisement
Advertisement

ದೆಹಲಿ ಚಲೋ ಹಮ್ಮಿಕೊಂಡಿರುವ ರೈತರನ್ನು ಪಂಜಾಬ್-ಹರಿಯಾಣದ ಖಾನೌರಿ ಮತ್ತು ಶಂಭು ಗಡಿಗಳಲ್ಲಿ ಹರಿಯಾಣದ ಬಿಜೆಪಿ ಸರ್ಕಾರದ ಪೊಲೀಸರು ತಡೆದಿದ್ದಾರೆ. ಫೆ.13ರಂದು ದೆಹಲಿ ಚಲೋ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿರುವ ರೈತರು, ಇನ್ನೂ ಕೂಡ ಗಡಿಗಳಲ್ಲೇ ಇದ್ದಾರೆ. ಈ ನಡುವೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ‘ಕಿಸಾನ್ ಮಝ್ದೂರ್ ಮಹಾಪಂಚಾಯತ್’ ಎಂಬ ಹೆಸರಿನಲ್ಲಿ ದೆಹಲಿಯಲ್ಲಿ ಸಭೆ ಆಯೋಜಿಸಿದೆ. ರೈತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಕೇವಲ 5,000 ಮಂದಿ ಮಾತ್ರ ಪಾಲ್ಗೊಳ್ಳಬೇಕು, ಕೋಲು, ಬಡಿಗೆಯ ಅಥವಾ ಯಾವುದೇ ಹರಿತವಾದ ಆಯುಧಗಳು, ಮತ್ತು ಟ್ರ್ಯಾಕ್ಟರ್‌ಗಳನ್ನು ತರಬಾರದು ಎಂದು ಮಹಾ ಪಂಚಾಯತ್‌ಗೆ ಅನುಮತಿ ನೀಡುವಾಗ ದೆಹಲಿ ಪೊಲೀಸರು ಸೂಚಿಸಿದ್ದಾರೆ. ಮತ್ತೊಂದೆಡೆ ರೈತರ ಮಹಾಪಂಚಾಯತ್ ಹಿನ್ನೆಲೆ ದೆಹಲಿ ಸಂಚಾರಿ ಪೊಲೀಸರು ಕೆಲವೆಡೆ ಸಂಚಾರ ಮಾರ್ಗ ಬದಲಾಯಿಸಿದ್ದಾರೆ.

ನಾವು 5000 ಜನರು ಮಾತ್ರ ಪಾಲ್ಗೊಳ್ಳುವಂತೆ ಸೂಚಿಸಿದ್ದೇವೆ. ಆದರೆ, 15 ಸಾವಿರ ಜನರು ಪಾಲ್ಗೊಳ್ಳುವ ಸಾಧ್ಯತೆಯಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೇಶದ ವಿವಿಧ ಭಾಗಗಳಿಂದ ಸುಮಾರು 30 ಸಾವಿರ ರೈತರು ಮಹಾಪಂಚಾಯತ್‌ನಲ್ಲಿ ಪಾಲ್ಗೊಳ್ಳುತ್ತಾರೆ ಎಂದು ಎಸ್‌ಕೆಎಂ ತಿಳಿಸಿದೆ. ಫೆಬ್ರವರಿ 22ರಂದು ಚಂಢೀಗಡದಲ್ಲಿ ಸಭೆ ನಡೆಸಿದ್ದ ಎಸ್‌ಕೆಎಂ, ಇಂದು ಮಹಾಪಂಚಾಯತ್ ನಡೆಸುವ ಬಗ್ಗೆ ಘೋಷಿಸಿತ್ತು. ಪೊಲೀಸರು ಮಾರ್ಚ್‌ 11ರಂದು ಅನುಮತಿ ನೀಡಿದ್ದರು. ಎಸ್‌ಕೆಎಂ 37 ರೈತ ಸಂಘಟನೆಗಳ ಮಹಾ ಒಕ್ಕೂಟವಾಗಿದೆ.

Advertisement

ವರದಿಗಳ ಪ್ರಕಾರ, ಮೋದಿ ಸರ್ಕಾರದ ಕಾರ್ಪೊರೇಟ್ ಪರ, ಕೋಮುವಾದಿ, ಸರ್ವಾಧಿಕಾರಿ ನೀತಿಗಳ ವಿರುದ್ಧ ಹೋರಾಟವನ್ನು ತೀವ್ರಗೊಳಿಸಲು, ಕೃಷಿ, ಆಹಾರ ಭದ್ರತೆಯನ್ನು ಉಳಿಸಲು ಹೋರಾಡಲು, ಜೀವನೋಪಾಯ ಮತ್ತು ಕಾರ್ಪೊರೇಟ್ ಲೂಟಿಯಿಂದ ಜನರನ್ನು ರಕ್ಷಿಸಲು ಮಹಾಪಂಚಾಯತ್‌ನಲ್ಲಿ ರೈತರು ಸಂಕಲ್ಪ ಪತ್ರ’ ಅಥವಾ ‘ನಿರ್ಣಯದ ಪತ್ರ’ವನ್ನು ಬಿಡುಗಡೆ ಮಾಡಲಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement

Farmers from Punjab are set to hold a Mahapanchayat at Ramlila Maidan in Delhi on Thursday. On the call of Samyukt Kisan Morcha, farmers said they would hold a foot march from Uchana to Jind before the Mahapanchayat, and would work to show strength to the government.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಣ್ಣುಗಳ ರಾಜ ಮಾವಿಗೂ ತಟ್ಟಿದ ಬಿಸಿಲಿನ ತಾಪ | 400 ಕೋಟಿ ಮೌಲ್ಯದ ಮಾವು ನಷ್ಟ |

ತಾಪಮಾನದ ಕಾರಣದಿಂದ ಮಾವಿನ ಬೆಳೆಗೂ ಸಂಕಷ್ಟವಾಗಿದೆ.

4 hours ago

Karnataka Weather |12-05-2024 | ಹಲವು ಕಡೆ ಮಳೆಯ ನಿರೀಕ್ಷೆ ಇದೆ |

ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

2 days ago

ಕರ್ನಾಟಕದಾದ್ಯಂತ ಗೋಕೃಪಾಮೃತ ವಿತರಣೆ | ಗೋಕೃಪಾಮೃತ ಇರುವಾಗ ಕ್ರಿಮಿನಾಶಕಗಳ ಹಂಗೇಕೆ?

ಗೋಕೃಪಾಮೃತದ ಬಗ್ಗೆ ಡಾ ಬಿ ಎಂ ನಾಗಭೂಷಣ ಅವರು ಬರೆದಿದ್ದಾರೆ..

2 days ago

ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ

ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…

2 days ago

ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ : ರೈತರ ಮೊಗದಲ್ಲಿ ಸಂತಸ : ಕೆಲವೆಡೆ ಹಾನಿ

ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…

2 days ago

ಇಂದು ದೇಶ್ಯಾದ್ಯಂತ ಕಾಮೆಡ್-ಕೆ ಪರೀಕ್ಷೆ : ವಿದ್ಯಾರ್ಥಿಗಳ ಭವಿಷ್ಯದ ಮೆಟ್ಟಿಲು

ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…

2 days ago