Advertisement
MIRROR FOCUS

ಮತ್ತಷ್ಟು ತೀವ್ರಗೊಂಡ ರೈತರ ʻದೆಹಲಿ ಚಲೋʼ ಹೋರಾಟ | ಇಂದು ರಾಷ್ಟ್ರ ರಾಜಧಾನಿ ತಲುಪಲಿರುವ ಬಹುತೇಕ ರೈತರು |

Share

ಕೇಂದ್ರ ಸರ್ಕಾರದ(Central Govt) ವಿರುದ್ಧ ವಿವಿಧ ಬೇಡಿಕೆಗಳನ್ನು ಇಟ್ಟುಕೊಂಡು ದೆಹಲಿ ಚಲೋ(‘Delhi Chalo’) ಹಮ್ಮಿಕೊಂಡಿರುವ ರೈತರು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ. ರೈತರು(Farmer), ಇಂದು(ಮಾ.6) ತಮ್ಮ ಪಾದಯಾತ್ರೆಯನ್ನು(March) ಪುನರಾರಂಭಿಸಲಿದ್ದಾರೆ. ಈ ಹಿನ್ನೆಲೆ ಪಂಜಾಬ್-ಹರಿಯಾಣ(Panjab-Haruyana) ಗಡಿಯಲ್ಲಿ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ. ‘ದೆಹಲಿ ಚಲೋ’ ಹೋರಾಟದ ನೇತೃತ್ವ ವಹಿಸಿರುವ ಎರಡು ಸಂಘಟನೆಗಳಾದ ಕಿಸಾನ್ ಮಜ್ದೂರ್ ಮೋರ್ಚಾ ಮತ್ತು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ದೇಶದಾದ್ಯಂತ ರೈತರಿಗೆ ಇಂದು ರಾಷ್ಟ್ರ ರಾಜಧಾನಿ ದೆಹಲಿ ತಲುಪಲು ಮಾರ್ಚ್‌ 3ರಂದು ಮನವಿ ಮಾಡಿತ್ತು.

Advertisement
Advertisement
Advertisement
Advertisement
Advertisement

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕಾನೂನು ಖಾತರಿ ನೀಡುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಂದಿನ ವಾರ ದೇಶದಾದ್ಯಂತ ನಾಲ್ಕು ಗಂಟೆಗಳ ಕಾಲ “ರೈಲು ತಡೆದು ಪ್ರತಿಭಟಿಸಲು” ರೈತ ಸಂಘಟನೆಗಳು ಕರೆ ನೀಡಿವೆ. ಫೆ.13ರಂದು ದೆಹಲಿ ಚಲೋ ಪ್ರಾರಂಭಿಸಿರುವ ರೈತರನ್ನು ಪಂಜಾಬ್‌-ಹರಿಯಾಣ ರಾಜ್ಯಗಳ ನಡುವಿನ ಶಂಭು ಮತ್ತು ಖನೌರಿ ಗಡಿಯಲ್ಲಿ ಹರಿಯಾಣದ ಬಿಜೆಪಿ ಸರ್ಕಾರದ ಪೊಲೀಸರು ತಡೆದಿದ್ದಾರೆ. ಹರಿಯಾಣ ಪೊಲೀಸರು ರೈತರು ದೆಹಲಿ ಕಡೆ ತೆರಳಲು ಅವಕಾಶ ನೀಡುತ್ತಿಲ್ಲ. ಹಾಗಾಗಿ, ಪಂಜಾಬ್ ಮತ್ತು ಹರಿಯಾಣದ ರೈತರು ಶಂಭು, ಖನೌರಿ ಗಡಿಗಳಲ್ಲಿ ಪ್ರತಿಭಟನೆ ಮುಂದುವರೆಸಿದರೆ, ಇತರ ರಾಜ್ಯಗಳ ರೈತರು ದೆಹಲಿ ತಲುಪುವಂತೆ ರೈತ ನಾಯಕರು ಕರೆ ನೀಡಿದ್ದಾರೆ.

Advertisement

ರೈತರಿಂದ ರೈಲು ತಡೆ : ಹೋರಾಟ ತೀವ್ರಗೊಳಿಸಲು ಮುಂದಾಗಿರುವ ರೈತ ಮುಖಂಡರು, ಮಾರ್ಚ್‌ 1ರಂದು ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ದೇಶದಾದ್ಯಂತ ರೈಲು ತಡೆದು ಪ್ರತಿಭಟನೆ ನಡೆಸಲು ರೈತರು ಮತ್ತು ಕಾರ್ಮಿಕರಿಗೆ ಸೂಚಿಸಿದ್ದಾರೆ. ಈ ನಡುವೆ 2020-21ರ ರೈತರ ಆಂದೋಲನದ ನೇತೃತ್ವ ವಹಿಸಿದ್ದ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಮಾರ್ಚ್ 14 ರಂದು ದೆಹಲಿಯಲ್ಲಿ ‘ರೈತ ಮಹಾ ಪಂಚಾಯತ್’ ಘೋಷಿಸಿದೆ. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು 400ಕ್ಕೂ ಹೆಚ್ಚು ರೈತರ ಸಂಘಟನೆಗಳು ‘ರೈತ ಮಹಾ ಪಂಚಾಯತ್‌’ನಲ್ಲಿ ಭಾಗವಹಿಸಲಿವೆ ಎಂದು ಎಸ್‌ಕೆಎಂ ತಿಳಿಸಿದೆ.

ಅಲರ್ಟ್‌ ಆದ ದೆಹಲಿ ಪೊಲೀಸರು : ರೈತರ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು ಟಿಕ್ರಿ, ಸಿಂಘು ಮತ್ತು ಘಾಜಿಪುರ ಗಡಿಗಳಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ದೆಹಲಿ ಪೊಲೀಸ್‌ ಮುಖ್ಯಸ್ಥರು ತಮ್ಮ ಸಿಬ್ಬಂದಿಗೆ ಸೂಚಿಸಿದ್ದಾರೆ. ರೈಲ್ವೆ ಮತ್ತು ಬಸ್‌ ನಿಲ್ದಾಣಗಳಲ್ಲಿ ಹೆಚ್ಚುವರಿ ಪೊಲೀಸ್ ಮತ್ತು ಅರೆಸೇನಾ ಪಡೆಗಳನ್ನು ಸಹ ನಿಯೋಜಿಸಲಾಗಿದೆ. ವಿವಿಧೆಡೆ ತಪಾಸಣೆ ತೀವ್ರಗೊಳಿಸಲಾಗಿದ್ದು, ರಾಜಧಾನಿಯಲ್ಲಿ ಸಂಚಾರ ದಟ್ಟಣೆ ಉಂಟಾಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

Advertisement
  • ಅಂತರ್ಜಾಲ ಮಾಹಿತಿ

Today is the 23rd day of the protest launched by KMM & SKM (non-political). An announcement was made earlier that farmers from other states will start marching towards Delhi from today but farmers coming from far-off places will not be able to reach Delhi today.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

2 hours ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

4 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

1 day ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

1 day ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

1 day ago