Advertisement
MIRROR FOCUS

ಮತ್ತಷ್ಟು ತೀವ್ರಗೊಂಡ ರೈತರ ʻದೆಹಲಿ ಚಲೋʼ ಹೋರಾಟ | ಇಂದು ರಾಷ್ಟ್ರ ರಾಜಧಾನಿ ತಲುಪಲಿರುವ ಬಹುತೇಕ ರೈತರು |

Share

ಕೇಂದ್ರ ಸರ್ಕಾರದ(Central Govt) ವಿರುದ್ಧ ವಿವಿಧ ಬೇಡಿಕೆಗಳನ್ನು ಇಟ್ಟುಕೊಂಡು ದೆಹಲಿ ಚಲೋ(‘Delhi Chalo’) ಹಮ್ಮಿಕೊಂಡಿರುವ ರೈತರು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ. ರೈತರು(Farmer), ಇಂದು(ಮಾ.6) ತಮ್ಮ ಪಾದಯಾತ್ರೆಯನ್ನು(March) ಪುನರಾರಂಭಿಸಲಿದ್ದಾರೆ. ಈ ಹಿನ್ನೆಲೆ ಪಂಜಾಬ್-ಹರಿಯಾಣ(Panjab-Haruyana) ಗಡಿಯಲ್ಲಿ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ. ‘ದೆಹಲಿ ಚಲೋ’ ಹೋರಾಟದ ನೇತೃತ್ವ ವಹಿಸಿರುವ ಎರಡು ಸಂಘಟನೆಗಳಾದ ಕಿಸಾನ್ ಮಜ್ದೂರ್ ಮೋರ್ಚಾ ಮತ್ತು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ದೇಶದಾದ್ಯಂತ ರೈತರಿಗೆ ಇಂದು ರಾಷ್ಟ್ರ ರಾಜಧಾನಿ ದೆಹಲಿ ತಲುಪಲು ಮಾರ್ಚ್‌ 3ರಂದು ಮನವಿ ಮಾಡಿತ್ತು.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕಾನೂನು ಖಾತರಿ ನೀಡುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಂದಿನ ವಾರ ದೇಶದಾದ್ಯಂತ ನಾಲ್ಕು ಗಂಟೆಗಳ ಕಾಲ “ರೈಲು ತಡೆದು ಪ್ರತಿಭಟಿಸಲು” ರೈತ ಸಂಘಟನೆಗಳು ಕರೆ ನೀಡಿವೆ. ಫೆ.13ರಂದು ದೆಹಲಿ ಚಲೋ ಪ್ರಾರಂಭಿಸಿರುವ ರೈತರನ್ನು ಪಂಜಾಬ್‌-ಹರಿಯಾಣ ರಾಜ್ಯಗಳ ನಡುವಿನ ಶಂಭು ಮತ್ತು ಖನೌರಿ ಗಡಿಯಲ್ಲಿ ಹರಿಯಾಣದ ಬಿಜೆಪಿ ಸರ್ಕಾರದ ಪೊಲೀಸರು ತಡೆದಿದ್ದಾರೆ. ಹರಿಯಾಣ ಪೊಲೀಸರು ರೈತರು ದೆಹಲಿ ಕಡೆ ತೆರಳಲು ಅವಕಾಶ ನೀಡುತ್ತಿಲ್ಲ. ಹಾಗಾಗಿ, ಪಂಜಾಬ್ ಮತ್ತು ಹರಿಯಾಣದ ರೈತರು ಶಂಭು, ಖನೌರಿ ಗಡಿಗಳಲ್ಲಿ ಪ್ರತಿಭಟನೆ ಮುಂದುವರೆಸಿದರೆ, ಇತರ ರಾಜ್ಯಗಳ ರೈತರು ದೆಹಲಿ ತಲುಪುವಂತೆ ರೈತ ನಾಯಕರು ಕರೆ ನೀಡಿದ್ದಾರೆ.

ರೈತರಿಂದ ರೈಲು ತಡೆ : ಹೋರಾಟ ತೀವ್ರಗೊಳಿಸಲು ಮುಂದಾಗಿರುವ ರೈತ ಮುಖಂಡರು, ಮಾರ್ಚ್‌ 1ರಂದು ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ದೇಶದಾದ್ಯಂತ ರೈಲು ತಡೆದು ಪ್ರತಿಭಟನೆ ನಡೆಸಲು ರೈತರು ಮತ್ತು ಕಾರ್ಮಿಕರಿಗೆ ಸೂಚಿಸಿದ್ದಾರೆ. ಈ ನಡುವೆ 2020-21ರ ರೈತರ ಆಂದೋಲನದ ನೇತೃತ್ವ ವಹಿಸಿದ್ದ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಮಾರ್ಚ್ 14 ರಂದು ದೆಹಲಿಯಲ್ಲಿ ‘ರೈತ ಮಹಾ ಪಂಚಾಯತ್’ ಘೋಷಿಸಿದೆ. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು 400ಕ್ಕೂ ಹೆಚ್ಚು ರೈತರ ಸಂಘಟನೆಗಳು ‘ರೈತ ಮಹಾ ಪಂಚಾಯತ್‌’ನಲ್ಲಿ ಭಾಗವಹಿಸಲಿವೆ ಎಂದು ಎಸ್‌ಕೆಎಂ ತಿಳಿಸಿದೆ.

ಅಲರ್ಟ್‌ ಆದ ದೆಹಲಿ ಪೊಲೀಸರು : ರೈತರ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು ಟಿಕ್ರಿ, ಸಿಂಘು ಮತ್ತು ಘಾಜಿಪುರ ಗಡಿಗಳಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ದೆಹಲಿ ಪೊಲೀಸ್‌ ಮುಖ್ಯಸ್ಥರು ತಮ್ಮ ಸಿಬ್ಬಂದಿಗೆ ಸೂಚಿಸಿದ್ದಾರೆ. ರೈಲ್ವೆ ಮತ್ತು ಬಸ್‌ ನಿಲ್ದಾಣಗಳಲ್ಲಿ ಹೆಚ್ಚುವರಿ ಪೊಲೀಸ್ ಮತ್ತು ಅರೆಸೇನಾ ಪಡೆಗಳನ್ನು ಸಹ ನಿಯೋಜಿಸಲಾಗಿದೆ. ವಿವಿಧೆಡೆ ತಪಾಸಣೆ ತೀವ್ರಗೊಳಿಸಲಾಗಿದ್ದು, ರಾಜಧಾನಿಯಲ್ಲಿ ಸಂಚಾರ ದಟ್ಟಣೆ ಉಂಟಾಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ

Today is the 23rd day of the protest launched by KMM & SKM (non-political). An announcement was made earlier that farmers from other states will start marching towards Delhi from today but farmers coming from far-off places will not be able to reach Delhi today.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

24 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago