ರಾಯಚೂರು ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ಮಳೆಯಾದ ಪರಿಣಾಮ ತೋಟಗಾರಿಕಾ ಬೆಳೆಗಳು ಸೇರಿದಂತೆ ತರಕಾರಿ ಫಸಲು ಹಾನಿಗೊಳಗಾಗಿದೆ.ಕೂಡಲೇ ಬೆಳೆ ಹಾನಿ ನಷ್ಟ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು ಎಂಬುದು ರೈತರು ಒತ್ತಾಯಿಸಿದ್ದಾರೆ.
ಆರಂಭದಲ್ಲಿ ಮುಂಗಾರು ಉತ್ತಮವಾಗಿದ್ದ ಕಾರಣ ಹತ್ತಿ, ತೊಗರಿ, ಸಜ್ಜೆ ಸೇರಿ ತೋಟಗಾರಿಕೆ ಬೆಳೆಯನ್ನು ಬೆಳೆದಿದ್ದೆವು, ಉತ್ತಮ ಫಸಲು ಸಹ ಬಂದಿತ್ತು ಆದರೆ ಅತೀ ಮಳೆಯಿಂದಾಗಿ ಬೆಳೆ ಹಾನಿಯಾಗಿದೆ ಕೂಡಲೆ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ನೀಡಬೇಕು ಎಂದು ರೈತ ಲಕ್ಷ್ಮಣಗೌಡ ಹೇಳಿದ್ದಾರೆ.
ಈ ಬಾರಿ ವಾಡಿಕೆಗಿಂತ ಶೇಕಡಾ 27 ರಷ್ಟು ಜಿಲ್ಲೆಯಲ್ಲಿ ಮಳೆಯಾಗಿದೆ. ಉತ್ತಮ ಫಸಲು ನೀರಿನಲ್ಲಿ ನಷ್ಟವಾಗಿದೆ. ಸಮೀಕ್ಷೆ ಆರಂಭಿಸಿ ಜಿಲ್ಲಾಧಿಕಾರಿಗಳಿಗೆ ವರದಿ ನೀಡಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕ ಜಯಪ್ರಕಾಶ ಹೇಳಿದ್ದಾರೆ.
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…