Uncategorized

ರಬ್ಬರ್‌ ಧಾರಣೆ ಕುಸಿತ | ಸರ್ಕಾರದ ಮಧ್ಯಪ್ರವೇಶಕ್ಕೆ ಬೆಳೆಗಾರರ ಒತ್ತಾಯ |

Share

ರಬ್ಬರ್‌ ಧಾರಣೆ ಕುಸಿತದ ಕಾರಣದಿಂದ ಹಲವಾರು ದೇಶದ  ರಬ್ಬರ್‌ ಬೆಳೆಗಾರರ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ತಕ್ಷಣವೇ ಸರ್ಕಾರ ಮಧ್ಯಪ್ರವೇಶಿಸಿ ಧಾರಣೆ ಕುಸಿಯದಂತೆ ತಡೆಯಬೇಕು ಎಂದು ಅಖಿಲ ಭಾರತ ಕಿಸಾನ್‌ ಸಭಾ ಹಾಗೂ ರಬ್ಬರ್‌ ಬೆಳೆಗಾರರ ಸಂಘವು ಒತ್ತಾಯಿಸಿದೆ.

Advertisement

ರಬ್ಬರ್ ಬೋರ್ಡ್ ಇರುವ ಕೊಟ್ಟಾಯಂ ಜಿಲ್ಲೆಯಲ್ಲಿ ರಬ್ಬರ್ ಬೆಲೆ ಈ ವರ್ಷದ ಆಗಸ್ಟ್‌ನಲ್ಲಿ ಕೆಜಿಗೆ 247 ರೂ.ಗೆ ಏರಿದ ನಂತರ ಅಕ್ಟೋಬರ್‌ನಲ್ಲಿ ಕೆಜಿಗೆ 184 ರೂ.ಗೆ ಕುಸಿದಿದೆ, ಇದೀಗ 180 ರೂಪಾಯಿಗೆ ಇಳಿಕೆಯಾಗಿದೆ. ಕಳೆದ ಕೆಲವು ತಿಂಗಳುಗಳಲ್ಲಿ ವಿಶೇಷವಾಗಿ ದೇಶೀಯ ಮಾರುಕಟ್ಟೆಯಲ್ಲಿ ರಬ್ಬರ್ ಬೆಲೆಗಳು ಹೆಚ್ಚಾದಾಗ ಹಾಗೂ ಬೇಡಿಕೆ ಇದ್ದಾಗಲೂ ಕೂಡಾ , ರಬ್ಬರ್ ಧಾರಣೆ   ಹಠಾತ್ ಕಂಡಿದೆ. ಇದಕ್ಕೆ ಆಮದು ನೀತಿಯಲ್ಲಿನ ಸಡಿಲಿಕೆಯೇ ಕಾರಣ ಎಂದು ರೈತರು ಆರೋಪಿಸಿದ್ದಾರೆ.

ದೇಶದಲ್ಲಿ ಕೇರಳವು ಹೆಚ್ಚು ರಬ್ಬರ್‌ ಉತ್ಪಾದಿಸುತ್ತದೆ. 10 ಲಕ್ಷಕ್ಕೂ ಹೆಚ್ಚು ರಬ್ಬರ್ ಬೆಳೆಗಾರರು ಮತ್ತು ಸುಮಾರು 5 ಲಕ್ಷದಷ್ಟು ಕಾರ್ಮಿಕರು ರಬ್ಬರ್‌ ತೋಟಗಳಲ್ಲಿ ಕೆಲಸ ಮಾಡುತ್ತಾರೆ. ಜೀವನೋಪಾಯಕ್ಕಾಗಿ ರಬ್ಬರ್‌ ವಲಯವನ್ನು ಅವಲಂಬಿಸಿದ್ದಾರೆ.ಈಗ ಬೆಲೆಯ ಕುಸಿತವು ಈ ಕುಟುಂಬಗಳಿಗೆ, ವಿಶೇಷವಾಗಿ ಸಣ್ಣ ರೈತರು ಮತ್ತು ಕಾರ್ಮಿಕರ ಮೇಲೆ ಪರಿಣಾಮ ಬೀರುತ್ತದೆ. ಈಗ ಬೆಲೆಗಳಲ್ಲಿನ ಅಸ್ಥಿರತೆ, ಹೆಚ್ಚುತ್ತಿರುವ ಆಮದು ಮತ್ತು ಹವಾಮಾನ ಬದಲಾವಣೆ ಸೇರಿದಂತೆ ಇತರ ಪರಿಸ್ಥಿತಿಗಳು ಕೇರಳ ಮತ್ತು ತ್ರಿಪುರದಂತಹ  ರಬ್ಬರ್ ಉತ್ಪಾದಕ ರಾಜ್ಯಗಳಲ್ಲಿ ಲಕ್ಷಾಂತರ ರಬ್ಬರ್ ರೈತರ ಜೀವನೋಪಾಯದ ಮೇಲೆ ಪರಿಣಾಮ ಬೀರುತ್ತಿವೆ. ಹೀಗಾಗಿ ಸರ್ಕಾರ ಗಮನಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬೆಲೆ ಕುಸಿತದಿಂದಾಗಿ ಭಾರತದಲ್ಲಿ ಬೆಳೆಗಾರರು ಬಳಲುತ್ತಿರುವಾಗ, ರಬ್ಬರ್ ಆಮದು ಏಪ್ರಿಲ್ ಮತ್ತು ಸೆಪ್ಟೆಂಬರ್ 2024 ರ ನಡುವೆ ಶೇಕಡಾ 22 ರಷ್ಟು ಹೆಚ್ಚಾಗಿದೆ.ಕಳೆದ ವರ್ಷ 2,54,488 ಟನ್‌ಗಳಿಂದ ಈ ವರ್ಷ 3,10,713 ಟನ್‌ಗೆ ಏರಿಕೆಯಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆಗಳು ದೇಶೀಯ ಮಾರುಕಟ್ಟೆಯಿಂದ ಹೆಚ್ಚಾಗಿದೆ. ಹೀಗಿರುವಾಗ  ವಾಣಿಜ್ಯ ಸಚಿವಾಲಯವು ಇಲ್ಲಿನ ಬೆಳೆಗಾರರಿಗೆ ಉತ್ತಮ ಬೆಲೆಯನ್ನು ನೀಡಲು ಸಹಾಯ ಮಾಡಲು ನೈಸರ್ಗಿಕ ರಬ್ಬರ್  ರಫ್ತು ಮಾಡಲು ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ರಬ್ಬರ್ ಬೆಳೆಗಾರರ ಸಂಘವು ಆರೋಪಿಸಿದೆ.

ರಬ್ಬರ್‌ ಬೆಳೆಗಾರರು ಧಾರಣೆ ಅಸ್ಥಿರತೆಯ ವಿರುದ್ಧ ಹೋರಾಡುತ್ತಿದ್ದಾರೆ. ಅನೇಕ ಬೆಳೆಗಾರರಿಗೆ ರಬ್ಬರ್‌ ಪ್ರಮುಖ ಆದಾಯದ ಮೂಲವಾಗಿದೆ. ಕೇರಳ ಮಾತ್ರವಲ್ಲ ಕರ್ನಾಟಕದ ಕೆಲವು ಕಡೆ, ತ್ರಿಪುರಾದಲ್ಲಿ ಕೂಡಾ ಹಲವಾರು ಮಂದಿ ಇದ್ದಾರೆ. ಇಂತಹ ರೈತರಿಗೆ ಸಮಸ್ಯೆಯಾಗುತ್ತಿದೆ.‌ ಹೀಗಾಗಿ ತಕ್ಷಣವೇ ಸರ್ಕಾರ ಮಧ್ಯಪ್ರವೇಶಿಸಿ ಧಾರಣೆ ಸ್ಥಿರತೆ ಹಾಗೂ ಇಳಿಕೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು  ಎಐಕೆಎಸ್ ರಾಜ್ಯ ಉಪಾಧ್ಯಕ್ಷ ಕೆ ಜೆ ಜೋಸೆಫ್ ಹೇಳುತ್ತಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು, ಶಿವಮೊಗ್ಗ, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ…

2 hours ago

ಮಣಿಪುರದಲ್ಲಿ 68 ಟನ್ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆ ವಶ

ಅಕ್ರಮವಾಗಿ ಸುಮಾರು 68 ಟನ್‌ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು…

18 hours ago

ಅಡುಗೆ ಮನೆ ‘ಬೇಯಿಸುವ ಕೋಣೆ’ಯಲ್ಲ!

ಬದುಕಿನ ಒಂದೊಂದು ಅಂಗವೂ ‘ಕಲಾತ್ಮಕ’. ಒದಗುವ ಸುಭಗತನವು ಅನುಭವವೇದ್ಯ. ಅಡುಗೆ ಮನೆಯು ಬರೇ…

18 hours ago

2025ರಲ್ಲಿ ಶನಿ ತಮ್ಮ ನಕ್ಷತ್ರ ಅಥವಾ ರಾಶಿಯಲ್ಲಿ ಅಧೋಗತಿಯ ಚಲನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜೋತಿಷಿಗಳನ್ನು ಸಂಪರ್ಕಿಸಿ 9535156490

19 hours ago

ತಾಪಮಾನ ಹೆಚ್ಚಳ | ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರಾಣಿಗಳಿಗೆ ತಂಪಾದ ಆಹಾರ ಪದಾರ್ಥ |

ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…

1 day ago

ತೊಗರಿ ಉತ್ಪನ್ನ ಖರೀದಿ ಅವಧಿ ಎ.25 ರವರೆಗೆ ವಿಸ್ತರಣೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…

1 day ago