ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸ್ಪಷ್ಟಪಡಿಸಿದ್ದಾರೆ.
ದೆಹಲಿಯಲ್ಲಿ ರೈತರೊಂದಿಗೆ ಸಂವಾದ ನಡೆಸಿದ ಬಳಿಕ ಅವರು, ಭಾರತ ಇತರ ದೇಶಗಳೊಂದಿಗೆ ಸ್ನೇಹ ಸಂಬಂಧ ಕಾಪಾಡಿಕೊಂಡು ನ್ಯಾಯ ಸಮ್ಮತ ವಾಣಿಜ್ಯ ಒಪ್ಪಂದಗಳಿಗೆ ಇಚ್ಚಿಸುತ್ತದೆ. ಈ ಒಪ್ಪಂದಗಳು ಪ್ರಧಾನಿ ನರೇಂದ್ರ ಮೋದಿ ಅವರು ಸ್ವದೇಶಿ ಮಂತ್ರದ ಕರೆ ನೀಡಿದ್ದಾರೆ. ಅದರಂತೆ ರೈತರು ದೇಶದಲ್ಲೇ ತಯಾರಿಸಿದ ಉತ್ಪನ್ನಗಳನ್ನು ಬಳಸಲು ಸಂಕಲ್ಪ ಮಾಡಿದ್ದಾರೆ. ಸರ್ಕಾರಕ್ಕೆ ರಾಷ್ಟ್ರೀಯ ಹಿತಾಸಕ್ತಿಯೆ ಅತಿಮುಖ್ಯವಾಗಿದೆ. ಪ್ರಧಾನಿ ಅವರು ಇಂದು ತಮ್ಮ ಭಾಷಣದಲ್ಲಿ ದೇಶಭಕ್ತಿಯ ಸ್ಫೂರ್ತಿ ತುಂಬಿದ್ದು, ಹೊಸ ಹಾದಿ ತೋರಿದ್ದಾರೆ ಎಂದರು. ಕೊನೆಯ ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ವೇಳೆ ಎದುರಾಗುವ ಅಡೆತಡೆಗಳನ್ನು ನಿವಾರಿಸಲು ವಿಜ್ಞಾನಿಗಳ ತಂಡವೊಂದನ್ನು ರಚಿಸಲಾಗುವುದು. ಹಿಂಗಾರು ಬೆಳೆ ಹಂಗಾಮಿಗೆ ಕೃಷಿ ಇಲಾಖೆ ಈಗಿನಿಂದಲೇ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಮುಂದಿನ ತಿಂಗಳ 15-16ರಂದು ದೆಹಲಿಯಲ್ಲಿ ಹಿಂಗಾರು ಸಮಾವೇಶ ನಡೆಯಲಿದ್ದು, ಇದರಲ್ಲಿ ರಾಜ್ಯಗಳ ಕೃಷಿ ಸಚಿವರು, ತಜ್ಞರು, ಕೃಷಿ ವಿಜ್ಞಾನಿಗಳು ಮತ್ತು ಎಲ್ಲ ರಾಜ್ಯಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…