ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸ್ಪಷ್ಟಪಡಿಸಿದ್ದಾರೆ.
ದೆಹಲಿಯಲ್ಲಿ ರೈತರೊಂದಿಗೆ ಸಂವಾದ ನಡೆಸಿದ ಬಳಿಕ ಅವರು, ಭಾರತ ಇತರ ದೇಶಗಳೊಂದಿಗೆ ಸ್ನೇಹ ಸಂಬಂಧ ಕಾಪಾಡಿಕೊಂಡು ನ್ಯಾಯ ಸಮ್ಮತ ವಾಣಿಜ್ಯ ಒಪ್ಪಂದಗಳಿಗೆ ಇಚ್ಚಿಸುತ್ತದೆ. ಈ ಒಪ್ಪಂದಗಳು ಪ್ರಧಾನಿ ನರೇಂದ್ರ ಮೋದಿ ಅವರು ಸ್ವದೇಶಿ ಮಂತ್ರದ ಕರೆ ನೀಡಿದ್ದಾರೆ. ಅದರಂತೆ ರೈತರು ದೇಶದಲ್ಲೇ ತಯಾರಿಸಿದ ಉತ್ಪನ್ನಗಳನ್ನು ಬಳಸಲು ಸಂಕಲ್ಪ ಮಾಡಿದ್ದಾರೆ. ಸರ್ಕಾರಕ್ಕೆ ರಾಷ್ಟ್ರೀಯ ಹಿತಾಸಕ್ತಿಯೆ ಅತಿಮುಖ್ಯವಾಗಿದೆ. ಪ್ರಧಾನಿ ಅವರು ಇಂದು ತಮ್ಮ ಭಾಷಣದಲ್ಲಿ ದೇಶಭಕ್ತಿಯ ಸ್ಫೂರ್ತಿ ತುಂಬಿದ್ದು, ಹೊಸ ಹಾದಿ ತೋರಿದ್ದಾರೆ ಎಂದರು. ಕೊನೆಯ ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ವೇಳೆ ಎದುರಾಗುವ ಅಡೆತಡೆಗಳನ್ನು ನಿವಾರಿಸಲು ವಿಜ್ಞಾನಿಗಳ ತಂಡವೊಂದನ್ನು ರಚಿಸಲಾಗುವುದು. ಹಿಂಗಾರು ಬೆಳೆ ಹಂಗಾಮಿಗೆ ಕೃಷಿ ಇಲಾಖೆ ಈಗಿನಿಂದಲೇ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಮುಂದಿನ ತಿಂಗಳ 15-16ರಂದು ದೆಹಲಿಯಲ್ಲಿ ಹಿಂಗಾರು ಸಮಾವೇಶ ನಡೆಯಲಿದ್ದು, ಇದರಲ್ಲಿ ರಾಜ್ಯಗಳ ಕೃಷಿ ಸಚಿವರು, ತಜ್ಞರು, ಕೃಷಿ ವಿಜ್ಞಾನಿಗಳು ಮತ್ತು ಎಲ್ಲ ರಾಜ್ಯಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…