ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸ್ಪಷ್ಟಪಡಿಸಿದ್ದಾರೆ.
ದೆಹಲಿಯಲ್ಲಿ ರೈತರೊಂದಿಗೆ ಸಂವಾದ ನಡೆಸಿದ ಬಳಿಕ ಅವರು, ಭಾರತ ಇತರ ದೇಶಗಳೊಂದಿಗೆ ಸ್ನೇಹ ಸಂಬಂಧ ಕಾಪಾಡಿಕೊಂಡು ನ್ಯಾಯ ಸಮ್ಮತ ವಾಣಿಜ್ಯ ಒಪ್ಪಂದಗಳಿಗೆ ಇಚ್ಚಿಸುತ್ತದೆ. ಈ ಒಪ್ಪಂದಗಳು ಪ್ರಧಾನಿ ನರೇಂದ್ರ ಮೋದಿ ಅವರು ಸ್ವದೇಶಿ ಮಂತ್ರದ ಕರೆ ನೀಡಿದ್ದಾರೆ. ಅದರಂತೆ ರೈತರು ದೇಶದಲ್ಲೇ ತಯಾರಿಸಿದ ಉತ್ಪನ್ನಗಳನ್ನು ಬಳಸಲು ಸಂಕಲ್ಪ ಮಾಡಿದ್ದಾರೆ. ಸರ್ಕಾರಕ್ಕೆ ರಾಷ್ಟ್ರೀಯ ಹಿತಾಸಕ್ತಿಯೆ ಅತಿಮುಖ್ಯವಾಗಿದೆ. ಪ್ರಧಾನಿ ಅವರು ಇಂದು ತಮ್ಮ ಭಾಷಣದಲ್ಲಿ ದೇಶಭಕ್ತಿಯ ಸ್ಫೂರ್ತಿ ತುಂಬಿದ್ದು, ಹೊಸ ಹಾದಿ ತೋರಿದ್ದಾರೆ ಎಂದರು. ಕೊನೆಯ ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ವೇಳೆ ಎದುರಾಗುವ ಅಡೆತಡೆಗಳನ್ನು ನಿವಾರಿಸಲು ವಿಜ್ಞಾನಿಗಳ ತಂಡವೊಂದನ್ನು ರಚಿಸಲಾಗುವುದು. ಹಿಂಗಾರು ಬೆಳೆ ಹಂಗಾಮಿಗೆ ಕೃಷಿ ಇಲಾಖೆ ಈಗಿನಿಂದಲೇ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಮುಂದಿನ ತಿಂಗಳ 15-16ರಂದು ದೆಹಲಿಯಲ್ಲಿ ಹಿಂಗಾರು ಸಮಾವೇಶ ನಡೆಯಲಿದ್ದು, ಇದರಲ್ಲಿ ರಾಜ್ಯಗಳ ಕೃಷಿ ಸಚಿವರು, ತಜ್ಞರು, ಕೃಷಿ ವಿಜ್ಞಾನಿಗಳು ಮತ್ತು ಎಲ್ಲ ರಾಜ್ಯಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…