ಜಿಲ್ಲೆಯಾದ್ಯಂತ ಮಂಗಳವಾರ ಸಂಜೆ ಗುಡುಗು ಸಹಿತ ಮಳೆಯಾಗಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಇಬ್ಬರು ರೈತರು ಸಾವನ್ನಪ್ಪಿದ ಘಟನೆಯೊಂದು ಸಂಡೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಬೊಮ್ಮಲಗುಂಡ ಗ್ರಾಮದ ನಾಗಪ್ಪ (70) ಹಾಗೂ ನಾಗೇನಹಳ್ಳಿಯ ಜಾಜರ್ ಕಲ್ಲು ತಿಮ್ಮಣ್ಣ (70) ಮೃತರು. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದಿದ್ದು, ಈ ವೇಳೆ ನಾಗಪ್ಪ ಅವರ ಮೇಕೆಯೂ ಸಿಡಿಲಿಗೆ ಬಲಿಯಾಗಿದೆ ಎಂದು ತಿಳಿದು ಬಂದಿದೆ.
ಮಂಗಳವಾರ ಸಂಜೆ ಸಂಡೂರು ಪಟ್ಟಣ ಹಾಗೂ ಚೋರನೂರು ಹೋಬಳಿಯಲ್ಲಿ ಉತ್ತಮ ಮಳೆಯಾಗಿದೆ. ಕೃಷಿ ಹಾನಿಯ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಳ್ಳಾರಿ ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನದಿ, ಹಳ್ಳ-ಕೊಳಗಳು ತುಂಬಿ ಹರಿಯುತ್ತಿದ್ದು, ಮನೆ ಹಾಗೂ ಜಮೀನುಗಳಿಗೆ ನೀರು ನುಗ್ಗಿದೆ. ಮನೆಯಲ್ಲಿನ ನೀರನ್ನು ಹೊರಹಾಕಲು ರೂಪನಗುಡಿ ರಸ್ತೆ, ವಡ್ಡರಬಂಡೆ, ಬಳ್ಳಾರಪ್ಪ ಕಾಲೋನಿಯ ಜನ ಹರಸಾಹಸ ಪಡುತ್ತಿದ್ದಾರೆ.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…