ಜಿಲ್ಲೆಯಾದ್ಯಂತ ಮಂಗಳವಾರ ಸಂಜೆ ಗುಡುಗು ಸಹಿತ ಮಳೆಯಾಗಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಇಬ್ಬರು ರೈತರು ಸಾವನ್ನಪ್ಪಿದ ಘಟನೆಯೊಂದು ಸಂಡೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಬೊಮ್ಮಲಗುಂಡ ಗ್ರಾಮದ ನಾಗಪ್ಪ (70) ಹಾಗೂ ನಾಗೇನಹಳ್ಳಿಯ ಜಾಜರ್ ಕಲ್ಲು ತಿಮ್ಮಣ್ಣ (70) ಮೃತರು. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದಿದ್ದು, ಈ ವೇಳೆ ನಾಗಪ್ಪ ಅವರ ಮೇಕೆಯೂ ಸಿಡಿಲಿಗೆ ಬಲಿಯಾಗಿದೆ ಎಂದು ತಿಳಿದು ಬಂದಿದೆ.
ಮಂಗಳವಾರ ಸಂಜೆ ಸಂಡೂರು ಪಟ್ಟಣ ಹಾಗೂ ಚೋರನೂರು ಹೋಬಳಿಯಲ್ಲಿ ಉತ್ತಮ ಮಳೆಯಾಗಿದೆ. ಕೃಷಿ ಹಾನಿಯ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಳ್ಳಾರಿ ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನದಿ, ಹಳ್ಳ-ಕೊಳಗಳು ತುಂಬಿ ಹರಿಯುತ್ತಿದ್ದು, ಮನೆ ಹಾಗೂ ಜಮೀನುಗಳಿಗೆ ನೀರು ನುಗ್ಗಿದೆ. ಮನೆಯಲ್ಲಿನ ನೀರನ್ನು ಹೊರಹಾಕಲು ರೂಪನಗುಡಿ ರಸ್ತೆ, ವಡ್ಡರಬಂಡೆ, ಬಳ್ಳಾರಪ್ಪ ಕಾಲೋನಿಯ ಜನ ಹರಸಾಹಸ ಪಡುತ್ತಿದ್ದಾರೆ.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…