ಜಿಲ್ಲೆಯಾದ್ಯಂತ ಮಂಗಳವಾರ ಸಂಜೆ ಗುಡುಗು ಸಹಿತ ಮಳೆಯಾಗಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಇಬ್ಬರು ರೈತರು ಸಾವನ್ನಪ್ಪಿದ ಘಟನೆಯೊಂದು ಸಂಡೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಬೊಮ್ಮಲಗುಂಡ ಗ್ರಾಮದ ನಾಗಪ್ಪ (70) ಹಾಗೂ ನಾಗೇನಹಳ್ಳಿಯ ಜಾಜರ್ ಕಲ್ಲು ತಿಮ್ಮಣ್ಣ (70) ಮೃತರು. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದಿದ್ದು, ಈ ವೇಳೆ ನಾಗಪ್ಪ ಅವರ ಮೇಕೆಯೂ ಸಿಡಿಲಿಗೆ ಬಲಿಯಾಗಿದೆ ಎಂದು ತಿಳಿದು ಬಂದಿದೆ.
ಮಂಗಳವಾರ ಸಂಜೆ ಸಂಡೂರು ಪಟ್ಟಣ ಹಾಗೂ ಚೋರನೂರು ಹೋಬಳಿಯಲ್ಲಿ ಉತ್ತಮ ಮಳೆಯಾಗಿದೆ. ಕೃಷಿ ಹಾನಿಯ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಳ್ಳಾರಿ ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನದಿ, ಹಳ್ಳ-ಕೊಳಗಳು ತುಂಬಿ ಹರಿಯುತ್ತಿದ್ದು, ಮನೆ ಹಾಗೂ ಜಮೀನುಗಳಿಗೆ ನೀರು ನುಗ್ಗಿದೆ. ಮನೆಯಲ್ಲಿನ ನೀರನ್ನು ಹೊರಹಾಕಲು ರೂಪನಗುಡಿ ರಸ್ತೆ, ವಡ್ಡರಬಂಡೆ, ಬಳ್ಳಾರಪ್ಪ ಕಾಲೋನಿಯ ಜನ ಹರಸಾಹಸ ಪಡುತ್ತಿದ್ದಾರೆ.
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…