Advertisement
MIRROR FOCUS

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

Share

ದೆಹಲಿಯಲ್ಲಿ ನಡೆದ ‘ಭೂಮಿ ಉಳಿಸಿ ಸಮ್ಮೇಳನ’ದಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಭಾಗವಹಿಸಿ, ಪರಿಸರ ಸಂರಕ್ಷಣೆ ಮತ್ತು ಹವಾಮಾನ ಬದಲಾವಣೆ ತಡೆಗೆ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಪರಿಸರ ಮತ್ತು ವಾತಾವರಣವು ನಮ್ಮ ಭವಿಷ್ಯದೊಂದಿಗೆ ನೇರವಾಗಿ ಸಂಬಂಧ ಹೊಂದಿದ್ದು, ಹವಾಮಾನ ಬದಲಾವಣೆಯ ಸವಾಲುಗಳನ್ನು ಎದುರಿಸುವುದು ಅತ್ಯವಶ್ಯಕ ಎಂದರು. ಈ ದಿಕ್ಕಿನಲ್ಲಿ ಸರ್ಕಾರ ಹಲವು ವಿನೂತನ ಉಪಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು.

ರೈತರು ಅನ್ನದಾತರಷ್ಟೇ ಅಲ್ಲ, ಇಂಧನದಾತರಾಗಿಯೂ ರೂಪುಗೊಳ್ಳಬೇಕು ಎಂದು ಕರೆ ನೀಡಿದ ಅವರು, ಹೈಡ್ರೋಜನ್ ಉತ್ಪಾದನೆಯಲ್ಲಿಯೂ ರೈತರು ಕೈಜೋಡಿಸಬೇಕೆಂದು ಸಲಹೆ ನೀಡಿದರು. ಇದರಿಂದ ಭಾರತ ಇಂಧನ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸಿ, ಆಮದು ಮಾಡುವ ದೇಶದಿಂದ ರಫ್ತು ಮಾಡುವ ರಾಷ್ಟ್ರವಾಗಿ ರೂಪಾಂತರಗೊಳ್ಳಲಿದೆ ಎಂದು ಹೇಳಿದರು.

ಕೃಷಿ ತ್ಯಾಜ್ಯದಿಂದ ವಿವಿಧ ರೀತಿಯ ಇಂಧನ ಉತ್ಪಾದನೆ ಸಾಧ್ಯವಾಗಿದ್ದು, ಇದಕ್ಕಾಗಿ ತಂತ್ರಜ್ಞಾನ ಅಭಿವೃದ್ಧಿ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು. ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳು ಹೆಚ್ಚಾಗುತ್ತವೆ, ಮಾಲಿನ್ಯ ನಿಯಂತ್ರಣ ಸಾಧ್ಯವಾಗುತ್ತದೆ ಮತ್ತು ಸುಸ್ಥಿರ ಅಭಿವೃದ್ಧಿಗೆ ದಾರಿ ತೆರೆದುಕೊಳ್ಳುತ್ತದೆ ಎಂದು ಹೇಳಿದರು.

ಭೂಮಿಯನ್ನು ರಕ್ಷಿಸಲು ಇಂತಹ ಉಪಕ್ರಮಗಳನ್ನು ತ್ವರಿತವಾಗಿ ಜಾರಿಗೊಳಿಸುವ ಅಗತ್ಯವಿದೆ ಎಂದು ಅವರು ತಿಳಿಸಿದರು.

Union Minister Nitin Gadkari emphasized the importance of environmental protection and climate action at the “Save Earth Conference” in Delhi. He encouraged farmers to become energy producers through biofuels and hydrogen, which can boost rural employment, reduce pollution, and help India achieve energy self-reliance.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

50 minutes ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

10 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

11 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

15 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

15 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

1 day ago