Advertisement
MIRROR FOCUS

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

Share

ದೆಹಲಿಯಲ್ಲಿ ನಡೆದ ‘ಭೂಮಿ ಉಳಿಸಿ ಸಮ್ಮೇಳನ’ದಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಭಾಗವಹಿಸಿ, ಪರಿಸರ ಸಂರಕ್ಷಣೆ ಮತ್ತು ಹವಾಮಾನ ಬದಲಾವಣೆ ತಡೆಗೆ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದರು.

Advertisement

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಪರಿಸರ ಮತ್ತು ವಾತಾವರಣವು ನಮ್ಮ ಭವಿಷ್ಯದೊಂದಿಗೆ ನೇರವಾಗಿ ಸಂಬಂಧ ಹೊಂದಿದ್ದು, ಹವಾಮಾನ ಬದಲಾವಣೆಯ ಸವಾಲುಗಳನ್ನು ಎದುರಿಸುವುದು ಅತ್ಯವಶ್ಯಕ ಎಂದರು. ಈ ದಿಕ್ಕಿನಲ್ಲಿ ಸರ್ಕಾರ ಹಲವು ವಿನೂತನ ಉಪಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು.

ರೈತರು ಅನ್ನದಾತರಷ್ಟೇ ಅಲ್ಲ, ಇಂಧನದಾತರಾಗಿಯೂ ರೂಪುಗೊಳ್ಳಬೇಕು ಎಂದು ಕರೆ ನೀಡಿದ ಅವರು, ಹೈಡ್ರೋಜನ್ ಉತ್ಪಾದನೆಯಲ್ಲಿಯೂ ರೈತರು ಕೈಜೋಡಿಸಬೇಕೆಂದು ಸಲಹೆ ನೀಡಿದರು. ಇದರಿಂದ ಭಾರತ ಇಂಧನ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸಿ, ಆಮದು ಮಾಡುವ ದೇಶದಿಂದ ರಫ್ತು ಮಾಡುವ ರಾಷ್ಟ್ರವಾಗಿ ರೂಪಾಂತರಗೊಳ್ಳಲಿದೆ ಎಂದು ಹೇಳಿದರು.

ಕೃಷಿ ತ್ಯಾಜ್ಯದಿಂದ ವಿವಿಧ ರೀತಿಯ ಇಂಧನ ಉತ್ಪಾದನೆ ಸಾಧ್ಯವಾಗಿದ್ದು, ಇದಕ್ಕಾಗಿ ತಂತ್ರಜ್ಞಾನ ಅಭಿವೃದ್ಧಿ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು. ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳು ಹೆಚ್ಚಾಗುತ್ತವೆ, ಮಾಲಿನ್ಯ ನಿಯಂತ್ರಣ ಸಾಧ್ಯವಾಗುತ್ತದೆ ಮತ್ತು ಸುಸ್ಥಿರ ಅಭಿವೃದ್ಧಿಗೆ ದಾರಿ ತೆರೆದುಕೊಳ್ಳುತ್ತದೆ ಎಂದು ಹೇಳಿದರು.

ಭೂಮಿಯನ್ನು ರಕ್ಷಿಸಲು ಇಂತಹ ಉಪಕ್ರಮಗಳನ್ನು ತ್ವರಿತವಾಗಿ ಜಾರಿಗೊಳಿಸುವ ಅಗತ್ಯವಿದೆ ಎಂದು ಅವರು ತಿಳಿಸಿದರು.

Union Minister Nitin Gadkari emphasized the importance of environmental protection and climate action at the “Save Earth Conference” in Delhi. He encouraged farmers to become energy producers through biofuels and hydrogen, which can boost rural employment, reduce pollution, and help India achieve energy self-reliance.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

4 minutes ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

32 minutes ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

41 minutes ago

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

1 day ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago