ಅತಿವೃಷ್ಟಿಯಿಂದ ಕಲ್ಯಾಣ ಕರ್ನಾಟಕದ ರೈತರು ಸಂಕಷ್ಟ | ಸಂತ್ರಸ್ತರ ನೆರವಿಗೆ 500 ಕೋಟಿ ರೂಪಾಯಿ ಬಿಡುಗಡೆಗೆ ಒತ್ತಾಯ

October 3, 2025
2:53 PM

ಕಲ್ಯಾಣ ಕರ್ನಾಟಕದಲ್ಲಿ ಅತಿವೃಷ್ಟಿಯಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಪರಿಹಾರದ ರೂಪದಲ್ಲಿ ಸಂತ್ರಸ್ತರ ನೆರವಿಗಾಗಿ 500 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ.

ರಾಯಚೂರಿನಲ್ಲಿ ಮಾತನಾಡಿದ ಅವರು ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದಾಗಿ ರೈತರ ಬೆಳೆಗಳಿಗೆ ಸಂಪೂರ್ಣವಾಗಿ ಹಾನಿಯಾಗಿದೆ. ರಾಜ್ಯ ಸರ್ಕಾರ ಪ್ರತಿ ಹೆಕ್ಟೇರ್ ಗೆ NDRF ಮಾರ್ಗಸೂಚಿ ಅನ್ವಯ ನೀಡುವ ಪರಿಹಾರದ ಜೊತೆಗೆ ಹೆಚ್ಚುವರಿಯಾಗಿ ಎಂಟೂವರೆ ಸಾವಿರ ರೂಪಾಯಿ ನೀಡುವುದಾಗಿ ಹೇಳಿದ್ದು, ಈ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.  ಬೆಳೆ ಕಳೆದುಕೊಂಡ ರೈತರ ಸಾಲವನ್ನು ಒತ್ತಾಯದಿಂದ ವಸೂಲಿ ಮಾಡಬಾರದು. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಬೇಕು. ಇದರ ಜೊತೆಗೆ ರಾಜ್ಯ ಸರ್ಕಾರ ಪ್ರವಾಹದಿಂದ ಆಗಿರುವ ಹಾನಿಯ ಕುರಿತು ವರದಿ ಸಿದ್ಧಪಡಿಸಿ ಕೇಂದ್ರದ ನೆರವಿಗಾಗಿ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸಲಹೆ ನೀಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?
August 7, 2026
11:12 AM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ
August 7, 2026
7:34 AM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror