Advertisement
MIRROR FOCUS

ಅತಿವೃಷ್ಟಿಯಿಂದ ಕಲ್ಯಾಣ ಕರ್ನಾಟಕದ ರೈತರು ಸಂಕಷ್ಟ | ಸಂತ್ರಸ್ತರ ನೆರವಿಗೆ 500 ಕೋಟಿ ರೂಪಾಯಿ ಬಿಡುಗಡೆಗೆ ಒತ್ತಾಯ

Share

ಕಲ್ಯಾಣ ಕರ್ನಾಟಕದಲ್ಲಿ ಅತಿವೃಷ್ಟಿಯಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಪರಿಹಾರದ ರೂಪದಲ್ಲಿ ಸಂತ್ರಸ್ತರ ನೆರವಿಗಾಗಿ 500 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ.

ರಾಯಚೂರಿನಲ್ಲಿ ಮಾತನಾಡಿದ ಅವರು ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದಾಗಿ ರೈತರ ಬೆಳೆಗಳಿಗೆ ಸಂಪೂರ್ಣವಾಗಿ ಹಾನಿಯಾಗಿದೆ. ರಾಜ್ಯ ಸರ್ಕಾರ ಪ್ರತಿ ಹೆಕ್ಟೇರ್ ಗೆ NDRF ಮಾರ್ಗಸೂಚಿ ಅನ್ವಯ ನೀಡುವ ಪರಿಹಾರದ ಜೊತೆಗೆ ಹೆಚ್ಚುವರಿಯಾಗಿ ಎಂಟೂವರೆ ಸಾವಿರ ರೂಪಾಯಿ ನೀಡುವುದಾಗಿ ಹೇಳಿದ್ದು, ಈ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.  ಬೆಳೆ ಕಳೆದುಕೊಂಡ ರೈತರ ಸಾಲವನ್ನು ಒತ್ತಾಯದಿಂದ ವಸೂಲಿ ಮಾಡಬಾರದು. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಬೇಕು. ಇದರ ಜೊತೆಗೆ ರಾಜ್ಯ ಸರ್ಕಾರ ಪ್ರವಾಹದಿಂದ ಆಗಿರುವ ಹಾನಿಯ ಕುರಿತು ವರದಿ ಸಿದ್ಧಪಡಿಸಿ ಕೇಂದ್ರದ ನೆರವಿಗಾಗಿ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸಲಹೆ ನೀಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

1 day ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago