ಕಲ್ಯಾಣ ಕರ್ನಾಟಕದಲ್ಲಿ ಅತಿವೃಷ್ಟಿಯಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಪರಿಹಾರದ ರೂಪದಲ್ಲಿ ಸಂತ್ರಸ್ತರ ನೆರವಿಗಾಗಿ 500 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ.
ರಾಯಚೂರಿನಲ್ಲಿ ಮಾತನಾಡಿದ ಅವರು ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದಾಗಿ ರೈತರ ಬೆಳೆಗಳಿಗೆ ಸಂಪೂರ್ಣವಾಗಿ ಹಾನಿಯಾಗಿದೆ. ರಾಜ್ಯ ಸರ್ಕಾರ ಪ್ರತಿ ಹೆಕ್ಟೇರ್ ಗೆ NDRF ಮಾರ್ಗಸೂಚಿ ಅನ್ವಯ ನೀಡುವ ಪರಿಹಾರದ ಜೊತೆಗೆ ಹೆಚ್ಚುವರಿಯಾಗಿ ಎಂಟೂವರೆ ಸಾವಿರ ರೂಪಾಯಿ ನೀಡುವುದಾಗಿ ಹೇಳಿದ್ದು, ಈ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು. ಬೆಳೆ ಕಳೆದುಕೊಂಡ ರೈತರ ಸಾಲವನ್ನು ಒತ್ತಾಯದಿಂದ ವಸೂಲಿ ಮಾಡಬಾರದು. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಬೇಕು. ಇದರ ಜೊತೆಗೆ ರಾಜ್ಯ ಸರ್ಕಾರ ಪ್ರವಾಹದಿಂದ ಆಗಿರುವ ಹಾನಿಯ ಕುರಿತು ವರದಿ ಸಿದ್ಧಪಡಿಸಿ ಕೇಂದ್ರದ ನೆರವಿಗಾಗಿ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸಲಹೆ ನೀಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…