Advertisement
MIRROR FOCUS

#CauveryWater| ರಾಜ್ಯದಿಂದ ತಮಿಳುನಾಡಿಗೆ ಹರಿದ ಕಾವೇರಿ ನೀರು | ರೈತರ ಆಕ್ರೋಶ, ಬಿಜೆಪಿಯಿಂದ ಬೃಹತ್ ಪ್ರತಿಭಟನೆಗೆ ನಿರ್ಧಾರ

Share

ಪ್ರತೀ ವರ್ಷ  ಕಾವೇರಿ ನೀರು ವಿಚಾರವಾಗಿ ಕರ್ನಾಟಕ ಹಾಗೂ ತಮಿಳುನಾಡು ವೈಮನಸ್ಸು ಇದ್ದೇ ಇರುತ್ತದೆ. ಸುಪ್ರೀಂ ಕೋರ್ಟ್‌ ನಿಂದ ಅಂತಿಮ ತೀರ್ಪು ಬಂದರು ಈ ರಗಳೆಗೆ ಕೊನೆಯೇ ಇಲ್ಲ. ರಾಜ್ಯದಲ್ಲಿ ಕಾವೇರಿ ಕಿಚ್ಚು ಜೋರಾಗುತ್ತಿದೆ. ತಮಿಳುನಾಡಿಗೆ  ಕೆಆರ್​ಎಸ್​ ಡ್ಯಾಂನಿಂದ  ನೀರು ಬಿಟ್ಟಿದ್ದಕ್ಕೆ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್‌ ನಾಯಕರು ಕಿಡಿಕಾರುತ್ತಿದ್ದಾರೆ. ಸರ್ಕಾರ ಕೂಡಲೇ ಸರ್ವಪಕ್ಷ ಸಭೆ ಕರೆಯಲು ಒತ್ತಾಯಿಸಿದ್ದಾರೆ.

ಹಿನ್ನೆಲೆ ಕಾಂಗ್ರೆಸ್ ಸರ್ಕಾರ ಸರ್ವಪಕ್ಷ ಸಭೆ ಕರೆಯಲು ಮುಂದಾಗಿದೆ. ಇನ್ನು ಈ ಕುರಿತು ಮಾತನಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಪ್ರತಿಭಟನೆ ಮಾಡುವ ಹಕ್ಕಿದೆ. ಪ್ರತಿಭಟನೆ ಮಾಡಲಿ ಆದರೆ, ಅವರ ನಾಯಕರು ಯಾರು ತಿಳಿಸಿ ಪ್ರತಿಭಟನೆ ಮಾಡಲಿ ಅಂತ ಬಿಜೆಪಿಗೆ ಟಾಂಗ್‌ ಕೊಟ್ಟಿದ್ದಾರೆ. ತಮಿಳುನಾಡಿಗೆ ಕೆಆರ್​​ಎಸ್​​ ಡ್ಯಾಂನಿಂದ ನೀರು ಬಿಟ್ಟಿದ್ದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಸರ್ಕಾರದ ವಿರುದ್ಧ ಬಿಜೆಪಿ ಕಾವೇರಿ ಅಸ್ತ್ರವನ್ನು ಪ್ರಯೋಗಿಸಲು ಮುಂದಾಗಿದೆ. ಮಂಡ್ಯದ ಬಿಜೆಪಿ ಕಚೇರಿಯಲ್ಲಿ ಮೈಸೂರು ವಿಭಾಗದ ಪದಾಧಿಕಾರಿಗಳ ಸಭೆ ನಡೆಸಲಾಯಿತು. ಸಭೆಯಲ್ಲಿ ಮಂಡ್ಯ ಸಂಸದೆ ಸುಮಲತಾ ಸೇರಿದಂತೆ ಚಾಮರಾಜನಗರ, ಹಾಸನ,‌ ರಾಮನಗರ ಜಿಲ್ಲೆಗಳ ಬಿಜೆಪಿ ಪರಾಜಿತ ಅಭ್ಯರ್ಥಿಗಳು ಭಾಗವಹಿಸಿದ್ದರು. ಮುಂದಿನ ದಿನಗಳಲ್ಲಿ ಹೋರಾಟ ರೂಪರೇಷ ಬಗ್ಗೆ ಚರ್ಚಿಸಲಾಯಿತು.

ತಮಿಳುನಾಡಿಗೆ ಸರ್ಕಾರ ನೀರು ಬಿಡ್ತಿರೋ ಬಗ್ಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್, ನೀರಿನ ಸಮಸ್ಯೆ ಒಂದು ಸರ್ಕಾರದ, ಒಂದು ಪಕ್ಷದ ಸಮಸ್ಯೆಯಲ್ಲ, ಸರ್ವಪಕ್ಷ ಸಭೆ ಕರೆದು ಚರ್ಚಿಸಿ ಸಮಸ್ಯೆಗೆ ಪರಿಹಾರ ಕೊಡಬೇಕು ಅಂತ ಹೇಳಿದರು. ಕಾವೇರಿ ವಿಚಾರದ ಹೋರಾಟ ರಾಜಕೀಯ ಹೋರಾಟ ಅಲ್ಲ. ನಾವು ಎಲ್ಲರೂ ರೈತರ ಪರ ಹೋರಾಟ ಮಾಡಬೇಕಿದೆ. ಸಾಕಷ್ಟು ವರ್ಷಗಳಿಂದ ಕಾವೇರಿ ವಿಚಾರ ತಮಿಳುನಾಡು ಪರವಾಗೆ ತೀರ್ಪುಗಳು ಬರ್ತಿದೆ. ಹಿಂದಿನಿಂದಲೂ ನಮ್ಮ ರೈತರಿಗೆ ಅನ್ಯಾಯ ಆಗ್ತಾ ಇದೆ. ಈ ಬಗ್ಗೆ ಸರ್ಕಾರ ಯಾಕೆ ಹೋರಾಟ ಮಾಡ್ತಿಲ್ಲ ಅಂತ ಪ್ರಶ್ನೆ ಮಾಡಬೇಕಾಗಿದೆ.

ಕಾವೇರಿ ವಿಚಾರ ಬರಿ ಮಂಡ್ಯಕ್ಕೆ ಸೀಮಿತವಾಗಿಲ್ಲ. ಕಾವೇರಿ ಕೊಳ್ಳದ ರಾಮನಗರ, ಬೆಂಗಳೂರು, ಮೈಸೂರು ಭಾಗದ ಎಲ್ಲರ ಜವಾಬ್ದಾರಿಯಾಗಿದೆ. ಪ್ರಾಧಿಕಾರದ ಸೂಚನೆಯಂತೆ ಕಾವೇರಿ ನೀರು ಹರಿಸಲಾಗ್ತಿದೆ ಇದರಲ್ಲಿ ರಾಜ್ಯ ಸರ್ಕಾರದ ಪಾತ್ರ ಇಲ್ಲ, ಇವರು  ಹಾಗಾದ್ರೆ ಕೇಂದ್ರ ಸರ್ಕಾರದ ಪಾತ್ರ ಇದೆ ಅಂತ ಅವರು ಹೇಳುವುದರಲ್ಲಿ ಏನು ಅರ್ಥ ಇದೆ?

ಕೇಂದ್ರ ಸರ್ಕಾರದ ಕೈಯಲ್ಲಿ ಕಾವೇರಿ ಕೀ ಇದ್ದಿದ್ದರೆ ಹಿಂದೆ ಅಂಬರೀಶ್ ಅವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವ ಅವಶ್ಯಕತೆ ಇರ್ತಿರಲಿಲ್ಲ. ಇಲ್ಲಿ ಮಳೆ ಆಗಿಲ್ಲ ಅಂದ ತಕ್ಷಣ ತಮಿಳುನಾಡಿನವರು ಆ್ಯಕ್ಟೀವ್​ ಆಗಿ ನೀರು ಕೇಳ್ತಾರೆ. ಆದರೆ ಇಲ್ಲಿ ನಮ್ಮವರು ಆ ರೀತಿ ಆ್ಯಕ್ಟೀವ್​ ಆಗಿ ಮಾಹಿತಿ ನೀಡೋದು ಅವರ ಜವಾಬ್ದಾರಿ. ಆದರೆ ಮಾಹಿತಿ ನೀಡುವುದರಲ್ಲಿ ನಮ್ಮವರ ನಿರ್ಲಕ್ಷ್ಯ ಇದೆ ಸಂಸದೆ ಸುಮಲತಾ ಕಿಡಿ ಕಾರಿದರು.

ಡಿಸಿಎಂ ಡಿ.‌ಕೆ‌. ಶಿವಕುಮಾರ್ ಸ್ವಕ್ಷೇತ್ರ ಕನಕಪುರದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ನಡೆಸಿತು. ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿದ್ದಕ್ಕೆ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದರು.

Source : Digital Media

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

10 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

10 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

10 hours ago

ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…

11 hours ago

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

23 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

1 day ago