Advertisement
MIRROR FOCUS

#CauveryWater| ರಾಜ್ಯದಿಂದ ತಮಿಳುನಾಡಿಗೆ ಹರಿದ ಕಾವೇರಿ ನೀರು | ರೈತರ ಆಕ್ರೋಶ, ಬಿಜೆಪಿಯಿಂದ ಬೃಹತ್ ಪ್ರತಿಭಟನೆಗೆ ನಿರ್ಧಾರ

Share

ಪ್ರತೀ ವರ್ಷ  ಕಾವೇರಿ ನೀರು ವಿಚಾರವಾಗಿ ಕರ್ನಾಟಕ ಹಾಗೂ ತಮಿಳುನಾಡು ವೈಮನಸ್ಸು ಇದ್ದೇ ಇರುತ್ತದೆ. ಸುಪ್ರೀಂ ಕೋರ್ಟ್‌ ನಿಂದ ಅಂತಿಮ ತೀರ್ಪು ಬಂದರು ಈ ರಗಳೆಗೆ ಕೊನೆಯೇ ಇಲ್ಲ. ರಾಜ್ಯದಲ್ಲಿ ಕಾವೇರಿ ಕಿಚ್ಚು ಜೋರಾಗುತ್ತಿದೆ. ತಮಿಳುನಾಡಿಗೆ  ಕೆಆರ್​ಎಸ್​ ಡ್ಯಾಂನಿಂದ  ನೀರು ಬಿಟ್ಟಿದ್ದಕ್ಕೆ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್‌ ನಾಯಕರು ಕಿಡಿಕಾರುತ್ತಿದ್ದಾರೆ. ಸರ್ಕಾರ ಕೂಡಲೇ ಸರ್ವಪಕ್ಷ ಸಭೆ ಕರೆಯಲು ಒತ್ತಾಯಿಸಿದ್ದಾರೆ.

ಹಿನ್ನೆಲೆ ಕಾಂಗ್ರೆಸ್ ಸರ್ಕಾರ ಸರ್ವಪಕ್ಷ ಸಭೆ ಕರೆಯಲು ಮುಂದಾಗಿದೆ. ಇನ್ನು ಈ ಕುರಿತು ಮಾತನಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಪ್ರತಿಭಟನೆ ಮಾಡುವ ಹಕ್ಕಿದೆ. ಪ್ರತಿಭಟನೆ ಮಾಡಲಿ ಆದರೆ, ಅವರ ನಾಯಕರು ಯಾರು ತಿಳಿಸಿ ಪ್ರತಿಭಟನೆ ಮಾಡಲಿ ಅಂತ ಬಿಜೆಪಿಗೆ ಟಾಂಗ್‌ ಕೊಟ್ಟಿದ್ದಾರೆ. ತಮಿಳುನಾಡಿಗೆ ಕೆಆರ್​​ಎಸ್​​ ಡ್ಯಾಂನಿಂದ ನೀರು ಬಿಟ್ಟಿದ್ದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಸರ್ಕಾರದ ವಿರುದ್ಧ ಬಿಜೆಪಿ ಕಾವೇರಿ ಅಸ್ತ್ರವನ್ನು ಪ್ರಯೋಗಿಸಲು ಮುಂದಾಗಿದೆ. ಮಂಡ್ಯದ ಬಿಜೆಪಿ ಕಚೇರಿಯಲ್ಲಿ ಮೈಸೂರು ವಿಭಾಗದ ಪದಾಧಿಕಾರಿಗಳ ಸಭೆ ನಡೆಸಲಾಯಿತು. ಸಭೆಯಲ್ಲಿ ಮಂಡ್ಯ ಸಂಸದೆ ಸುಮಲತಾ ಸೇರಿದಂತೆ ಚಾಮರಾಜನಗರ, ಹಾಸನ,‌ ರಾಮನಗರ ಜಿಲ್ಲೆಗಳ ಬಿಜೆಪಿ ಪರಾಜಿತ ಅಭ್ಯರ್ಥಿಗಳು ಭಾಗವಹಿಸಿದ್ದರು. ಮುಂದಿನ ದಿನಗಳಲ್ಲಿ ಹೋರಾಟ ರೂಪರೇಷ ಬಗ್ಗೆ ಚರ್ಚಿಸಲಾಯಿತು.

ತಮಿಳುನಾಡಿಗೆ ಸರ್ಕಾರ ನೀರು ಬಿಡ್ತಿರೋ ಬಗ್ಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್, ನೀರಿನ ಸಮಸ್ಯೆ ಒಂದು ಸರ್ಕಾರದ, ಒಂದು ಪಕ್ಷದ ಸಮಸ್ಯೆಯಲ್ಲ, ಸರ್ವಪಕ್ಷ ಸಭೆ ಕರೆದು ಚರ್ಚಿಸಿ ಸಮಸ್ಯೆಗೆ ಪರಿಹಾರ ಕೊಡಬೇಕು ಅಂತ ಹೇಳಿದರು. ಕಾವೇರಿ ವಿಚಾರದ ಹೋರಾಟ ರಾಜಕೀಯ ಹೋರಾಟ ಅಲ್ಲ. ನಾವು ಎಲ್ಲರೂ ರೈತರ ಪರ ಹೋರಾಟ ಮಾಡಬೇಕಿದೆ. ಸಾಕಷ್ಟು ವರ್ಷಗಳಿಂದ ಕಾವೇರಿ ವಿಚಾರ ತಮಿಳುನಾಡು ಪರವಾಗೆ ತೀರ್ಪುಗಳು ಬರ್ತಿದೆ. ಹಿಂದಿನಿಂದಲೂ ನಮ್ಮ ರೈತರಿಗೆ ಅನ್ಯಾಯ ಆಗ್ತಾ ಇದೆ. ಈ ಬಗ್ಗೆ ಸರ್ಕಾರ ಯಾಕೆ ಹೋರಾಟ ಮಾಡ್ತಿಲ್ಲ ಅಂತ ಪ್ರಶ್ನೆ ಮಾಡಬೇಕಾಗಿದೆ.

ಕಾವೇರಿ ವಿಚಾರ ಬರಿ ಮಂಡ್ಯಕ್ಕೆ ಸೀಮಿತವಾಗಿಲ್ಲ. ಕಾವೇರಿ ಕೊಳ್ಳದ ರಾಮನಗರ, ಬೆಂಗಳೂರು, ಮೈಸೂರು ಭಾಗದ ಎಲ್ಲರ ಜವಾಬ್ದಾರಿಯಾಗಿದೆ. ಪ್ರಾಧಿಕಾರದ ಸೂಚನೆಯಂತೆ ಕಾವೇರಿ ನೀರು ಹರಿಸಲಾಗ್ತಿದೆ ಇದರಲ್ಲಿ ರಾಜ್ಯ ಸರ್ಕಾರದ ಪಾತ್ರ ಇಲ್ಲ, ಇವರು  ಹಾಗಾದ್ರೆ ಕೇಂದ್ರ ಸರ್ಕಾರದ ಪಾತ್ರ ಇದೆ ಅಂತ ಅವರು ಹೇಳುವುದರಲ್ಲಿ ಏನು ಅರ್ಥ ಇದೆ?

ಕೇಂದ್ರ ಸರ್ಕಾರದ ಕೈಯಲ್ಲಿ ಕಾವೇರಿ ಕೀ ಇದ್ದಿದ್ದರೆ ಹಿಂದೆ ಅಂಬರೀಶ್ ಅವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವ ಅವಶ್ಯಕತೆ ಇರ್ತಿರಲಿಲ್ಲ. ಇಲ್ಲಿ ಮಳೆ ಆಗಿಲ್ಲ ಅಂದ ತಕ್ಷಣ ತಮಿಳುನಾಡಿನವರು ಆ್ಯಕ್ಟೀವ್​ ಆಗಿ ನೀರು ಕೇಳ್ತಾರೆ. ಆದರೆ ಇಲ್ಲಿ ನಮ್ಮವರು ಆ ರೀತಿ ಆ್ಯಕ್ಟೀವ್​ ಆಗಿ ಮಾಹಿತಿ ನೀಡೋದು ಅವರ ಜವಾಬ್ದಾರಿ. ಆದರೆ ಮಾಹಿತಿ ನೀಡುವುದರಲ್ಲಿ ನಮ್ಮವರ ನಿರ್ಲಕ್ಷ್ಯ ಇದೆ ಸಂಸದೆ ಸುಮಲತಾ ಕಿಡಿ ಕಾರಿದರು.

ಡಿಸಿಎಂ ಡಿ.‌ಕೆ‌. ಶಿವಕುಮಾರ್ ಸ್ವಕ್ಷೇತ್ರ ಕನಕಪುರದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ನಡೆಸಿತು. ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿದ್ದಕ್ಕೆ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದರು.

Source : Digital Media

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

11 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

18 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

18 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago