Advertisement
MIRROR FOCUS

ಹಾಲಿಗೆ 10 ರೂಪಾಯಿ ಹೆಚ್ಚಳ ಮಾಡುವಂತೆ ರೈತರಿಂದ ಪ್ರಸ್ತಾವನೆ | ದರ ಹೆಚ್ಚಳ ಮಾಡುವ ಕುರಿತು ಸೂಕ್ತ ನಿರ್ಧಾರ |

Share

ರೈತರು ಮತ್ತು ಗ್ರಾಹಕರಿಗೆ ಅನುಕೂಲವಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಆದಷ್ಟು ಶೀಘ್ರ ಹಾಲಿನ ದರ ಹೆಚ್ಚಳ ಮಾಡುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ವಿಧಾನ ಪರಿಷತ್ ನಲ್ಲಿ ತಿಳಿಸಿದ್ದಾರೆ.

ಹಾಲಿನ ದರ ಹೆಚ್ಚಳ ಮಾಡುವಂತೆ ರೈತರಿಂದ ಬೇಡಿಕೆ ಹೆಚ್ಚಿದ್ದು, ಪ್ರತಿ ಲೀಟರ್ ಗೆ 10 ರೂಪಾಯಿ ಹೆಚ್ಚಳ ಮಾಡುವಂತೆ ರೈತರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಇದಕ್ಕೆ ಹಾಲು ಉತ್ಪಾದನಾ ಸಹಕಾರ ಸಂಘಗಳು ಕೂಡ ಸಹಮತ ವ್ಯಕ್ತಪಡಿಸಿವೆ. ಆದರೆ ಅಂತಿಮವಾಗಿ ಗ್ರಾಹಕರು ಮತ್ತು ರೈತರ ಹಿತವನ್ನು ಗಮನದಲ್ಲಿಟ್ಟುಕೊಂಡು ದರ ಹೆಚ್ಚಳದ ಕುರಿತು ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದರು. ರಾಜ್ಯದಲ್ಲಿ ಹಾಲು ಉತ್ಪಾದನೆ ಪ್ರತಿ ದಿನ ಒಂದು ಕೋಟಿ ಲೀಟರ್ ಗೆ ಏರಿಕೆಯಾಗಿದೆ. ಉತ್ಪಾದನಾ ವೆಚ್ಚವು ಅಧಿಕವಾಗುತ್ತಿದೆ. ಹೀಗಾಗಿ ದರ ಪರಿಷ್ಕರಣೆ ಬಗ್ಗೆ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಬೇಕಿದೆ. ಹಾಲಿನ ಪ್ರೋತ್ಸಾಹಧನ ಹೆಚ್ಚಳದ ಬಗ್ಗೆ ಗಂಭೀರ ಚರ್ಚೆ ನಡೆದಿದೆ. ಉತ್ಪಾದನೆಗೆ ತಕ್ಕಂತೆ ಬಜೆಟ್ ನಲ್ಲಿ ಅನುದಾನ ನಿಗದಿಪಡಿಸುವ ಅಗತ್ಯವಿದೆ. ಹಿಂದೆ ಇದ್ದ ಸರ್ಕಾರ ಕೂಡ ಹಾಲಿನ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror

Published by
The Rural Mirror

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

4 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

9 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

18 hours ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

19 hours ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

20 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

1 day ago