ಕಳೆದ ಮೂರು ದಿನಗಳಿಂದ ಒಡಿಸ್ಸಾದ ಕಲಹಂಡಿ ಮತ್ತು ಉಮರ್ಕೋಟೆ ಭಾಗಗಳಲ್ಲಿ ಭಾರೀ ಮಳೆ ಹಾಗೂ ಆಲಿಕಲ್ಲು ಮಳೆಯಾಗುತ್ತಿದ್ದು, ಮಳೆಯಿಂದ ಅಪಾರ ಹಾನಿಯಾಗಿದ್ದು ಕೃಷಿ ನಷ್ಟವಾಗಿದೆ.
ಒಡಿಸ್ಸಾದ ಹಲವಾರು ಭಾಗಗಳಲ್ಲಿ ಭಾರೀ ಮಳೆಯೊಂದಿಗೆ ಆಳಿಕಲ್ಲು ಮಳೆಯಾಗಿದೆ. ಭತ್ತದ ಜತೆಗೆ ಬೇಳೆಕಾಳು, ಕಬ್ಬು, ತರಕಾರಿ ಬೆಳೆಗಳಿಗೂ ಅಪಾರ ಹಾನಿಯಾಗಿದೆ. ಮಂಗಳವಾರ ರಾತ್ರಿಯಿಂದ ವಿದ್ಯತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹೊಲಗಳು ಮತ್ತು ರಸ್ತೆಗಳು ಆಲಿಕಲ್ಲುಗಳಿಂದ ಕೂಡಿದ್ದವು. ಮೂಲಗಳ ಪ್ರಕಾರ, ಕೆಲವು ರೈತರು ತಮ್ಮ ಕಟಾವು ಮಾಡಿದ ಭತ್ತವನ್ನು ಪಾಲಿಥಿನ್ ಶೀಟ್ಗಳಿಂದ ಮುಚ್ಚುವಲ್ಲಿ ಯಶಸ್ವಿಯಾದರೆ, ಇನ್ನೂ ಅನೇಕರು ತಮ್ಮ ಉತ್ಪನ್ನಗಳನ್ನು ಉಳಿಸಲು ಸಾಧ್ಯವಾಗಲಿಲ್ಲ.
ಆಲಿಕಲ್ಲು ಮಳೆಯ ಪ್ರಭಾವಕ್ಕೆ ಜೋಳ, ಹೂಕೋಸು, ಎಲೆಕೋಸು ಗಿಡಗಳು ನೆಲಕಚ್ಚಿವೆ. ಆರಂಭಿಕ ಮೌಲ್ಯಮಾಪನವು ದಿನದಲ್ಲಿ ಸುಮಾರು 4,000 ಹೆಕ್ಟೇರ್ ಮಕ್ಕೆಜೋಳ ಮತ್ತು 6,000 ಹೆಕ್ಟೇರ್ ಹೂಕೋಸು ಕೃಷಿಗೆ ಹಾನಿಯಾಗಿದೆ ಎಂದು ವರದಿ ಆಗಿದೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…