ಕಾಡಾನೆಗಳ ಕಾಟ | ಗ್ರಾಮೀಣ ಭಾಗದಲ್ಲಿ ಕೃಷಿಕರ ಸಂಕಷ್ಟ | ದ ಕ ಜಿಲ್ಲೆಯ ಹಲವು ಕಡೆ ಕಾಡಾನೆ ಪುಂಡಾಟ |

September 15, 2023
10:58 PM
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಕಾಡಾನೆಗಳ ಕಾಟ ಹೆಚ್ಚಾಗಿದೆ. ಇದರಿಂದ ಕೃಷಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ನಡುವೆ ಧರ್ಮಸ್ಥಳ ಗ್ರಾಮ ಪಂಚಾಯತ್‌ನಲ್ಲಿ ಸಮಾಲೋಚನಾ ಸಭೆ ನಡೆದಿದೆ.  

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಕಾಡಾನೆಗಳ ಕಾಟ ಹೆಚ್ಚಾಗಿದೆ. ಇದರಿಂದ ಕೃಷಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಸುಳ್ಯ ತಾಲೂಕಿನ ನಡುಗಲ್ಲು ಬಳಿಯ ಕೊರಂಬಟ ಎಂಬಲ್ಲಿ ಕೃಷಿಕ ರವಿ ಎಂಬವರ ತೋಟಕ್ಕೆ ಕಾಡಾನೆ ದಾಳಿ ನಡೆಸಿ ಅಡಿಕೆ, ತೆಂಗು ಹಾಗೂ ಬಾಳೆ ಗಿಡಗಳಿಗೆ ಹಾನಿ ಮಾಡಿವೆ.

Advertisement

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿಯ ಸೇಸಪ್ಪ ಗೌಡ ಎಂಬವರ ತೋಟಕ್ಕೆ ಕಾಡಾನೆ ದಾಳಿ ಮಾಡಿ ಅಡಿಕೆ ಹಾಗೂ ತೆಂಗಿನ ಮರಗಳಿಗೆ ಹಾನಿ ಮಾಡಿವೆ. ಇತ್ತೀಚೆಗಿನ ದಿನಗಳಲ್ಲಿ ಚಾರ್ಮಾಡಿ ಪರಿಸರದಲ್ಲೂ ಕಾಡಾನೆ ಹಾವಳಿ ಹೆಚ್ಚಾಗಿದೆ.  ಧರ್ಮಸ್ಥಳ ಗ್ರಾಮದ ಕಲ್ಲೇರಿ ಬಳಿ ಹೆದ್ದಾರಿ ಬದಿಯಲ್ಲಿ ಶುಕ್ರವಾರ ಕಾಡಾನೆ ಕಂಡು ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕಡಿರುದ್ಯಾವರ ಗ್ರಾಮದ ಪಣಿಕಲ್ಲು ಎಂಬಲ್ಲಿ ಗುರುವಾರ ತಡರಾತ್ರಿ ಕಾಡಾನೆಗಳ ಹಿಂಡು ರಾಘವೇಂದ್ರ ಪಟವರ್ಧನ್ ಅವರ ತೋಟಕ್ಕೆ ನುಗ್ಗಿ  ಅಡಿಕೆ ಮರ ಹಾಗೂ ತೆಂಗಿನ ಮರಗಳನ್ನು ಧ್ವಂಸ ಮಾಡಿವೆ. ಕೆಂಪಯ್ಯ ಗೌಡ ಎಂಬವರ ಭತ್ತ ಕೃಷಿಗೂ ಹಾನಿಯಾಗಿರುವುದು ತಿಳಿದು ಬಂದಿದೆ.

ಸುಳ್ಯ ತಾಲೂಕಿನ ಬಾಳುಗೋಡು, ಕೊಲ್ಲಮೊಗ್ರ, ಆಲೆಟ್ಟಿ , ಮಂಡೆಕೋಲು ಸೇರಿದಂತೆ ಹಲವು ಕಡೆಗಳಲ್ಲಿ ಕಾಡಾನೆ ಕಾಟ ಇದೆ. ಬೆಳ್ತಂಗಡಿ ತಾಲೂಕಿನ ಹಲವು ಕಡೆಗಳಲ್ಲೂ ಕಾಡಾನೆ ಕಾಟ ಇದೆ.

ಧರ್ಮಸ್ಥಳ ಗ್ರಾಮ ಪಂಚಾಯತ್‌ನಲ್ಲಿ ಈ ಬಗ್ಗೆ ಸಮಾಲೋಚನಾ ಸಭೆ ನಡೆದಿದೆ.  ಧರ್ಮಸ್ಥಳ ಗ್ರಾಮದ ನೇರ್ತನೆ ಪರಿಸರದಲ್ಲಿ ಕಾಡಾನೆಗಳ ಕಾಟ ಹೆಚ್ಚಾಗುತ್ತಿದ್ದು, ಕೃಷಿಗೆ ಹಾನಿಯನ್ನು ತಪ್ಪಿಸಲು ಸೂಕ್ತ ಕ್ರಮ ತೆಗೆದುಕೊಳ್ಳುವ ಬಗ್ಗೆ  ಧರ್ಮಸ್ಥಳದಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗ್ರಾಮಸ್ಥರು ಮತ್ತು ಅರಣ್ಯ ಇಲಾಖಾ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಯಿತು.‌

ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್ ಮಾತನಾಡಿ ನೇರ್ತನೆ ಪರಿಸರದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಕಳುಹಿಸುವ ಕಾರ್ಯ ತುರ್ತಾಗಿ ಮಾಡಲಾಗುವುದು ಎಂದು ಭರವಸೆ ನೀಡಿದರು. ಸೋಲಾರ್ ಬೇಲಿ ಅಳವಡಿಸಲು ಸರ್ಕಾರ ಅನುದಾನ ನೀಡುವುದರಿಂದ ಈ ಬಗ್ಗೆಯೂ ಪ್ರಯತ್ನಿಸಲಾಗುವುದು. ರೈತರು ಸೋಲಾರ್ ಬೇಲಿ ಅಳವಡಿಸುವುದಾದರೆ ಅರಣ್ಯ ಇಲಾಖೆಯಿಂದ ಅನುದಾನ ನೀಡುವುದಾಗಿ ಅವರು ತಿಳಿಸಿದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 24-04-2025 | ಎ.26 ರಿಂದ ರಾಜ್ಯದ ವಿವಿದೆಡೆ ಮಳೆ ಪ್ರಮಾಣ ಹೆಚ್ಚಳ |
April 24, 2025
9:22 PM
by: ಸಾಯಿಶೇಖರ್ ಕರಿಕಳ
ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ | 3570 ಟನ್ ಕಟ್ಟಡ ತ್ಯಾಜ್ಯ ತೆರವು
April 24, 2025
6:45 AM
by: The Rural Mirror ಸುದ್ದಿಜಾಲ
ಇಂದು ಶೂನ್ಯ  ನೆರಳಿನ ದಿನ | ಪಿಲಿಕುಳದಲ್ಲಿ  ಪ್ರಾತ್ಯಕ್ಷಿಕೆ
April 24, 2025
6:29 AM
by: The Rural Mirror ಸುದ್ದಿಜಾಲ
82 ವರ್ಷಗಳ ಬಳಿಕ ಅಕ್ಷಯ ತೃತೀಯ ದಿನವೇ 3 ಅಪರೂಪದ ಯೋಗಗಳ ನಿರ್ಮಾಣ
April 24, 2025
6:10 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group