ಕಾಡಾನೆಗಳ ಕಾಟ | ಗ್ರಾಮೀಣ ಭಾಗದಲ್ಲಿ ಕೃಷಿಕರ ಸಂಕಷ್ಟ | ದ ಕ ಜಿಲ್ಲೆಯ ಹಲವು ಕಡೆ ಕಾಡಾನೆ ಪುಂಡಾಟ |

September 15, 2023
10:58 PM
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಕಾಡಾನೆಗಳ ಕಾಟ ಹೆಚ್ಚಾಗಿದೆ. ಇದರಿಂದ ಕೃಷಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ನಡುವೆ ಧರ್ಮಸ್ಥಳ ಗ್ರಾಮ ಪಂಚಾಯತ್‌ನಲ್ಲಿ ಸಮಾಲೋಚನಾ ಸಭೆ ನಡೆದಿದೆ.  

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಕಾಡಾನೆಗಳ ಕಾಟ ಹೆಚ್ಚಾಗಿದೆ. ಇದರಿಂದ ಕೃಷಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಸುಳ್ಯ ತಾಲೂಕಿನ ನಡುಗಲ್ಲು ಬಳಿಯ ಕೊರಂಬಟ ಎಂಬಲ್ಲಿ ಕೃಷಿಕ ರವಿ ಎಂಬವರ ತೋಟಕ್ಕೆ ಕಾಡಾನೆ ದಾಳಿ ನಡೆಸಿ ಅಡಿಕೆ, ತೆಂಗು ಹಾಗೂ ಬಾಳೆ ಗಿಡಗಳಿಗೆ ಹಾನಿ ಮಾಡಿವೆ.

Advertisement
Advertisement

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿಯ ಸೇಸಪ್ಪ ಗೌಡ ಎಂಬವರ ತೋಟಕ್ಕೆ ಕಾಡಾನೆ ದಾಳಿ ಮಾಡಿ ಅಡಿಕೆ ಹಾಗೂ ತೆಂಗಿನ ಮರಗಳಿಗೆ ಹಾನಿ ಮಾಡಿವೆ. ಇತ್ತೀಚೆಗಿನ ದಿನಗಳಲ್ಲಿ ಚಾರ್ಮಾಡಿ ಪರಿಸರದಲ್ಲೂ ಕಾಡಾನೆ ಹಾವಳಿ ಹೆಚ್ಚಾಗಿದೆ.  ಧರ್ಮಸ್ಥಳ ಗ್ರಾಮದ ಕಲ್ಲೇರಿ ಬಳಿ ಹೆದ್ದಾರಿ ಬದಿಯಲ್ಲಿ ಶುಕ್ರವಾರ ಕಾಡಾನೆ ಕಂಡು ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕಡಿರುದ್ಯಾವರ ಗ್ರಾಮದ ಪಣಿಕಲ್ಲು ಎಂಬಲ್ಲಿ ಗುರುವಾರ ತಡರಾತ್ರಿ ಕಾಡಾನೆಗಳ ಹಿಂಡು ರಾಘವೇಂದ್ರ ಪಟವರ್ಧನ್ ಅವರ ತೋಟಕ್ಕೆ ನುಗ್ಗಿ  ಅಡಿಕೆ ಮರ ಹಾಗೂ ತೆಂಗಿನ ಮರಗಳನ್ನು ಧ್ವಂಸ ಮಾಡಿವೆ. ಕೆಂಪಯ್ಯ ಗೌಡ ಎಂಬವರ ಭತ್ತ ಕೃಷಿಗೂ ಹಾನಿಯಾಗಿರುವುದು ತಿಳಿದು ಬಂದಿದೆ.

Advertisement

ಸುಳ್ಯ ತಾಲೂಕಿನ ಬಾಳುಗೋಡು, ಕೊಲ್ಲಮೊಗ್ರ, ಆಲೆಟ್ಟಿ , ಮಂಡೆಕೋಲು ಸೇರಿದಂತೆ ಹಲವು ಕಡೆಗಳಲ್ಲಿ ಕಾಡಾನೆ ಕಾಟ ಇದೆ. ಬೆಳ್ತಂಗಡಿ ತಾಲೂಕಿನ ಹಲವು ಕಡೆಗಳಲ್ಲೂ ಕಾಡಾನೆ ಕಾಟ ಇದೆ.

Advertisement

ಧರ್ಮಸ್ಥಳ ಗ್ರಾಮ ಪಂಚಾಯತ್‌ನಲ್ಲಿ ಈ ಬಗ್ಗೆ ಸಮಾಲೋಚನಾ ಸಭೆ ನಡೆದಿದೆ.  ಧರ್ಮಸ್ಥಳ ಗ್ರಾಮದ ನೇರ್ತನೆ ಪರಿಸರದಲ್ಲಿ ಕಾಡಾನೆಗಳ ಕಾಟ ಹೆಚ್ಚಾಗುತ್ತಿದ್ದು, ಕೃಷಿಗೆ ಹಾನಿಯನ್ನು ತಪ್ಪಿಸಲು ಸೂಕ್ತ ಕ್ರಮ ತೆಗೆದುಕೊಳ್ಳುವ ಬಗ್ಗೆ  ಧರ್ಮಸ್ಥಳದಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗ್ರಾಮಸ್ಥರು ಮತ್ತು ಅರಣ್ಯ ಇಲಾಖಾ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಯಿತು.‌

Advertisement

ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್ ಮಾತನಾಡಿ ನೇರ್ತನೆ ಪರಿಸರದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಕಳುಹಿಸುವ ಕಾರ್ಯ ತುರ್ತಾಗಿ ಮಾಡಲಾಗುವುದು ಎಂದು ಭರವಸೆ ನೀಡಿದರು. ಸೋಲಾರ್ ಬೇಲಿ ಅಳವಡಿಸಲು ಸರ್ಕಾರ ಅನುದಾನ ನೀಡುವುದರಿಂದ ಈ ಬಗ್ಗೆಯೂ ಪ್ರಯತ್ನಿಸಲಾಗುವುದು. ರೈತರು ಸೋಲಾರ್ ಬೇಲಿ ಅಳವಡಿಸುವುದಾದರೆ ಅರಣ್ಯ ಇಲಾಖೆಯಿಂದ ಅನುದಾನ ನೀಡುವುದಾಗಿ ಅವರು ತಿಳಿಸಿದರು.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ
May 4, 2024
12:30 PM
by: ಸಾಯಿಶೇಖರ್ ಕರಿಕಳ
ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |
May 4, 2024
10:32 AM
by: ದ ರೂರಲ್ ಮಿರರ್.ಕಾಂ
ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |
May 3, 2024
9:58 PM
by: ದ ರೂರಲ್ ಮಿರರ್.ಕಾಂ
ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ
May 3, 2024
12:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror