ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಕಾಡಾನೆಗಳ ಕಾಟ ಹೆಚ್ಚಾಗಿದೆ. ಇದರಿಂದ ಕೃಷಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಸುಳ್ಯ ತಾಲೂಕಿನ ನಡುಗಲ್ಲು ಬಳಿಯ ಕೊರಂಬಟ ಎಂಬಲ್ಲಿ ಕೃಷಿಕ ರವಿ ಎಂಬವರ ತೋಟಕ್ಕೆ ಕಾಡಾನೆ ದಾಳಿ ನಡೆಸಿ ಅಡಿಕೆ, ತೆಂಗು ಹಾಗೂ ಬಾಳೆ ಗಿಡಗಳಿಗೆ ಹಾನಿ ಮಾಡಿವೆ.
ಬೆಳ್ತಂಗಡಿ ತಾಲೂಕಿನ ಚಾರ್ಮಾಡಿಯ ಸೇಸಪ್ಪ ಗೌಡ ಎಂಬವರ ತೋಟಕ್ಕೆ ಕಾಡಾನೆ ದಾಳಿ ಮಾಡಿ ಅಡಿಕೆ ಹಾಗೂ ತೆಂಗಿನ ಮರಗಳಿಗೆ ಹಾನಿ ಮಾಡಿವೆ. ಇತ್ತೀಚೆಗಿನ ದಿನಗಳಲ್ಲಿ ಚಾರ್ಮಾಡಿ ಪರಿಸರದಲ್ಲೂ ಕಾಡಾನೆ ಹಾವಳಿ ಹೆಚ್ಚಾಗಿದೆ. ಧರ್ಮಸ್ಥಳ ಗ್ರಾಮದ ಕಲ್ಲೇರಿ ಬಳಿ ಹೆದ್ದಾರಿ ಬದಿಯಲ್ಲಿ ಶುಕ್ರವಾರ ಕಾಡಾನೆ ಕಂಡು ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕಡಿರುದ್ಯಾವರ ಗ್ರಾಮದ ಪಣಿಕಲ್ಲು ಎಂಬಲ್ಲಿ ಗುರುವಾರ ತಡರಾತ್ರಿ ಕಾಡಾನೆಗಳ ಹಿಂಡು ರಾಘವೇಂದ್ರ ಪಟವರ್ಧನ್ ಅವರ ತೋಟಕ್ಕೆ ನುಗ್ಗಿ ಅಡಿಕೆ ಮರ ಹಾಗೂ ತೆಂಗಿನ ಮರಗಳನ್ನು ಧ್ವಂಸ ಮಾಡಿವೆ. ಕೆಂಪಯ್ಯ ಗೌಡ ಎಂಬವರ ಭತ್ತ ಕೃಷಿಗೂ ಹಾನಿಯಾಗಿರುವುದು ತಿಳಿದು ಬಂದಿದೆ.
ಸುಳ್ಯ ತಾಲೂಕಿನ ಬಾಳುಗೋಡು, ಕೊಲ್ಲಮೊಗ್ರ, ಆಲೆಟ್ಟಿ , ಮಂಡೆಕೋಲು ಸೇರಿದಂತೆ ಹಲವು ಕಡೆಗಳಲ್ಲಿ ಕಾಡಾನೆ ಕಾಟ ಇದೆ. ಬೆಳ್ತಂಗಡಿ ತಾಲೂಕಿನ ಹಲವು ಕಡೆಗಳಲ್ಲೂ ಕಾಡಾನೆ ಕಾಟ ಇದೆ.
ಧರ್ಮಸ್ಥಳ ಗ್ರಾಮ ಪಂಚಾಯತ್ನಲ್ಲಿ ಈ ಬಗ್ಗೆ ಸಮಾಲೋಚನಾ ಸಭೆ ನಡೆದಿದೆ. ಧರ್ಮಸ್ಥಳ ಗ್ರಾಮದ ನೇರ್ತನೆ ಪರಿಸರದಲ್ಲಿ ಕಾಡಾನೆಗಳ ಕಾಟ ಹೆಚ್ಚಾಗುತ್ತಿದ್ದು, ಕೃಷಿಗೆ ಹಾನಿಯನ್ನು ತಪ್ಪಿಸಲು ಸೂಕ್ತ ಕ್ರಮ ತೆಗೆದುಕೊಳ್ಳುವ ಬಗ್ಗೆ ಧರ್ಮಸ್ಥಳದಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗ್ರಾಮಸ್ಥರು ಮತ್ತು ಅರಣ್ಯ ಇಲಾಖಾ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಯಿತು.
ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್ ಮಾತನಾಡಿ ನೇರ್ತನೆ ಪರಿಸರದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಕಳುಹಿಸುವ ಕಾರ್ಯ ತುರ್ತಾಗಿ ಮಾಡಲಾಗುವುದು ಎಂದು ಭರವಸೆ ನೀಡಿದರು. ಸೋಲಾರ್ ಬೇಲಿ ಅಳವಡಿಸಲು ಸರ್ಕಾರ ಅನುದಾನ ನೀಡುವುದರಿಂದ ಈ ಬಗ್ಗೆಯೂ ಪ್ರಯತ್ನಿಸಲಾಗುವುದು. ರೈತರು ಸೋಲಾರ್ ಬೇಲಿ ಅಳವಡಿಸುವುದಾದರೆ ಅರಣ್ಯ ಇಲಾಖೆಯಿಂದ ಅನುದಾನ ನೀಡುವುದಾಗಿ ಅವರು ತಿಳಿಸಿದರು.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…