Advertisement
MIRROR FOCUS

ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ

Share

ರೈತರನ್ನು ಕೇವಲ ಉತ್ಪಾದಕರಾಗಿ ಮಾತ್ರವಲ್ಲದೆ ಉದ್ಯಮಿಗಳನ್ನಾಗಿ ರೂಪಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ.

ಮಂಡ್ಯ ನಗರದಲ್ಲಿ ವಿವಿಧ ಇಲಾಖೆಗಳ ವತಿಯಿಂದ ಆಯೋಜಿಸಲಾದ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರೈತರಿಗೆ ಬೆಳೆ ಮೌಲ್ಯವರ್ಧನೆ, ಸಂಸ್ಕರಣೆ ಮತ್ತು ಮಾರುಕಟ್ಟೆ ಸಂಪರ್ಕ ಕಲ್ಪಿಸುವ ವ್ಯವಸ್ಥೆಗಳನ್ನು ಸರ್ಕಾರ ರೂಪಿಸುತ್ತಿದ್ದು, ಇದರ ಮೂಲಕ ಕೃಷಿಯನ್ನು ಲಾಭದಾಯಕ ವೃತ್ತಿಯನ್ನಾಗಿ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.

ಮಂಡ್ಯ ಜಿಲ್ಲೆ ಕೃಷಿ ಪ್ರಧಾನವಾದ ಜಿಲ್ಲೆಯಾಗಿದ್ದು, ಜಿಲ್ಲೆಯ ಕೃಷಿ ಕ್ಷೇತ್ರಕ್ಕೆ ಇನ್ನಷ್ಟು ಬಲ ನೀಡುವ ಉದ್ದೇಶದಿಂದ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಗೆ ಸರ್ಕಾರ ಹೆಚ್ಚಿನ ಮಹತ್ವ ನೀಡುತ್ತಿದೆ ಎಂದು ಅವರು ತಿಳಿಸಿದರು.

ಕೃಷಿಯಲ್ಲಿ ತಂತ್ರಜ್ಞಾನ ಬಳಕೆ, ಮೌಲ್ಯವರ್ಧನೆ ಹಾಗೂ ಉತ್ತಮ ಮಾರುಕಟ್ಟೆ ವ್ಯವಸ್ಥೆಗಳ ಮೂಲಕ ರೈತರ ಆದಾಯವನ್ನು ಹೆಚ್ಚಿಸುವತ್ತ ಸರ್ಕಾರ ಗಮನ ಹರಿಸಿದೆ ಎಂದು ಸಚಿವರು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Karnataka Agriculture Minister N. Chaluvarayaswamy said the government’s goal is to transform farmers into agri-entrepreneurs by promoting value addition and market linkages. He also stated that the government is giving priority to establishing an agricultural university in Mandya district to strengthen the agricultural sector.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

7 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

13 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

22 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

23 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

1 day ago