2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಠಿ ಹಾನಿಯಿಂದ ಬೆಳೆಗಳಿಗೆ ರಾಜ್ಯ ಸರ್ಕಾರ ಪರಿಹಾರ ಹಣ ಘೋಷಿಸಿದ್ದು, ಜಿಲ್ಲೆಯಾದ್ಯಂತ ಬೆಳೆ ಹಾನಿಯಾದ ರೈತರಿಗೆ 498.72 ಕೋಟಿ ರೂ ಇನ್ಸುಟ್ ಸಬ್ಸಿಡಿ ಪರಿಹಾರ ಬಿಡುಗಡೆಯಾಗಿದೆ. ಆದರೆ, ವಿವಿಧ ಕಾರಣಗಳಿಂದ 12,313 ಪ್ರಕರಣದಲ್ಲಿ ಪರಿಹಾರ ಪಾವತಿ ವೈಫಲ್ಯವಾಗಿದೆ.
ತಾಂತ್ರಿಕ ದೋಷ ಅಂದರೆ, ಆಧಾರ್ ಲಿಂಕ್ ಆಗದೆ ಇನ್ನು ಕೆಲವು ಮಾಹಿತಿಗಳನ್ನು ಸರಿಯಾಗಿ ಇರದ ಕಾರಣ ಪರಿಹಾರ ಸಿಗದೆ ಉಳಿದಿದ್ದಾರೆ. ಇನ್ನು ರೈತರ ಪಟ್ಟಿಯನ್ನು ಸಂಬಂಧಪಟ್ಟ ಗ್ರಾಮಗಳ ಕೃಷಿ ಅಧಿಕಾರಿ, ಸಹಾಯಕ ಕೃಷಿ ಅಧಿಕಾರಿಗಳು ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಕಚೇರಿಗಳ ಸೂಚನಾ ಫಲಕಗಳಲ್ಲಿ ಪಟ್ಟಿ ಪ್ರಕಟಿಸಿದ್ದ ಪರಿಣಾಮ ಇದುವರೆಗೆ 3,860 ರೈತರು ಸಮಸ್ಯೆಗಳನ್ನು ಸರಿಪಡಿಸಿಕೊಂಡಿದ್ದಾರೆ. ಇನ್ನುಳಿದಂತೆ 8,464 ರೈತರು ಸಮಸ್ಯೆ ಸರಿಪಡಿಸಿಕೊಂಡಿರುವುದಿಲ್ಲ.
ಇನ್ನು, 10,544 ಪ್ರಕರಣಗಳಲ್ಲಿ ಆಧಾರ್-ಎನ್.ಪಿ.ಸಿ.ಐ ಮ್ಯಾಪಿಂಗ್ ಆಗದ ಕಾರಣ ಪರಿಹಾರ ಪಾವತಿ ಹಣ ಖಾತೆಗೆ ಜಮೆಯಾಗಿರುವುದಿಲ್ಲ. ಇಂತಹ ರೈತರು ಬ್ಯಾಂಕ್ ಗೆ ಭೇಟಿ ನೀಡಬೇಕು. ರೈತರು ತಮ್ಮ ಬ್ಯಾಂಕ್ ಖಾತೆ, ಆಧಾರ್ ಲಿಂಕ್ ಮತ್ತು ಮೊಬೈಲ್ ಸಂಖ್ಯೆಯನ್ನು ನಿರಂತರ ನವೀಕರಿಸಿಕೊಳ್ಳುವುದು ಮುಖ್ಯ ಎಂದು ರೈತ ಸಂಪರ್ಕ ಕೇಂದ್ರ ತಿಳಿಸಿದೆ.
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…