Advertisement
ವಿಶೇಷ ವರದಿಗಳು

ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ…? ಕೇಳಲು ಶುರು ಮಾಡಿದ್ದಾರೆ ಅಡಿಕೆ ಬೆಳೆಗಾರರು..!

Share

ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.‌10 ಕಳೆಯುವ ಹೊತ್ತಿಗೆ ವಾತಾವರಣ ಉಷ್ಣತೆ ತೀರಾ ಇಳಿಕೆಯಾಗಿದೆ. ಈಗ ಅಡಿಕೆ ಬೆಳೆಗಾರರು ಅಲ್ಲಲ್ಲಿ ಮಾತನಾಡುವುದು ಶುರು ಮಾಡಿದ್ದಾರೆ,”ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ..? , ನಮ್ಮಲ್ಲಿ ಕೆಲವು ಕಡೆ ಕಾಣ್ತದೆ..” ಎಂದು ಹೇಳಲು ಶುರು ಮಾಡಿದ್ದಾರೆ. ಕಾರಣ ಏನು ಎಂಬುದರ ಬಗ್ಗೆ ಚಿಂತಿಸುತ್ತಿದ್ದಾರೆ.

Advertisement
Advertisement

ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಕಳೆದ ವರ್ಷ ಅಡಿಕೆ ಫಸಲು ತೀರಾ ಇಳಿಕೆಯಾಗಿತ್ತು. ಅಡಿಕೆ ಹಿಂಗಾರ ಒಣಗುವುದು ಹಾಗೂ ಎಳೆ ಅಡಿಕೆ ಬಿದ್ದ ಕಾರಣದಿಂದ ಶೇ.40 ರಷ್ಟು ಅಡಿಕೆ ಫಸಲು ಇಳಿಕೆಯಾಗಿತ್ತು. ಅದರ ಪರಿಣಾಮವಾಗಿ ಈ ಬಾರಿ ಹೊಸ ಅಡಿಕೆ ಧಾರಣೆ ಈಗಲೇ 480-490 ರೂಪಾಯಿ ಗೆ ಏರಿಕೆಯಾಗಿದೆ, ಮತ್ತಷ್ಟು ಏರಿಕೆಯಾಗುತ್ತದೆ ಎನ್ನುತ್ತಾರೆ ಮಾರುಕಟ್ಟೆ ತಜ್ಞರು. ಆದರೆ ಈ ಬಾರಿಯೂ ಅದೇ ಪರಿಸ್ಥಿತಿ ಪುನರಾವರ್ತನೆಯಾಗುತ್ತದೆಯೇ ಎನ್ನುವ ಅನುಮಾನ ಅಡಿಕೆ ಬೆಳೆಗಾರರನ್ನು ಕಾಡಿದೆ.ಅಷ್ಟೇ ಅಲ್ಲ, ಹೀಗೇ ಆದರೆ ಅಡಿಕೆ ಬೆಳೆಯನ್ನು ನಂಬುದು ಹೇಗೆ. ಕೃಷಿ ಕೆಲಸ ಮಾಡುವುದು ಹೇಗೆ, ಹೊಸ ಕೃಷಿ ಏನು ಮಾಡಬಹುದು ಎನ್ನುವ ಬಗ್ಗೆಯೂ ಚಿಂತನೆಗಳು ನಡೆಯುತ್ತಿದೆ.

ಈ ಬಾರಿ ಮೇ ತಿಂಗಳ ಮಧ್ಯದವರೆಗೂ ಉತ್ತಮ ಫಸಲಿನ ನಿರೀಕ್ಷೆ ಎಲ್ಲಾ ಅಡಿಕೆ ಬೆಳೆಗಾರರಲ್ಲಿತ್ತು. ಆದರೆ ಮೇ ಅಂತ್ಯದ ಹೊತ್ತಿಗೆ ಕೆಲವು ಕಡೆ ಎಳೆ ಅಡಿಕೆ ಬೀಳುವುದು ಕಂಡಿತು. ಆದರೆ  ಜೂನ್‌ 10 ರ ಹೊತ್ತಿಗೆ ಮತ್ತಷ್ಟು ಎಳೆ ಅಡಿಕೆ ಬಿದ್ದಿರುವುದು ಕಂಡಿದೆ. ಹೀಗಾಗಿ ಅಡಿಕೆ ಬೆಳೆಗಾರರು ಯೋಚಿಸುವಂತೆ ಮಾಡಿದೆ.  ಕೆಲವು ಅಡಿಕೆ ಬೆಳೆಗಾರರು ಮಾರ್ಚ್‌ ತಿಂಗಳಿನಿಂದಲೇ ವಿವಿಧ ಔಷಧಿಗಳನ್ನು ಸಿಂಪಡಣೆ ಮಾಡಿದ್ದಾರೆ, ಆದರೂ ಜೂನ್‌ ವೇಳೆಗೆ ಎಳೆ ಅಡಿಕೆ ಬೀಳಲು ಶುರುವಾಗಿದೆ. ಕೆಲವು ಬೆಳೆಗಾರರು ಯಾವುದೇ ಔಷಧಿ ಸಿಂಪಡಣೆ ಮಾಡಿಲ್ಲ ಅಲ್ಲೂ ಎಳೆ ಅಡಿಕೆ ಬೀಳುವುದು ಕಾಣುತ್ತದೆ. ಹೀಗಾಗಿ ಈಗ ಸಮಸ್ಯೆ ಇರುವುದು ಎಲ್ಲಿ ಮತ್ತು ಏನು? ಎನ್ನುವುದರ ಬಗ್ಗೆ ರೈತರ ನಡುವೆಯೇ ಮಾತುಕತೆ ನಡೆಯುತ್ತಿದೆ.

ವಿಟ್ಲದ ಮಂಕುಡೆಯ ಕೃಷಿಕರೊಬ್ಬರ ಪ್ರಕಾರ, ವಿಪರೀತ ಬಿಸಿಲು ಹಾಗೂ ನೀರಾವರಿ ವ್ಯವಸ್ಥೆಯಲ್ಲಿನ ಲೋಪವೂ ಎಳೆ ಅಡಿಕೆ ಬೀಳುವುದಕ್ಕೆ ಕಾರಣ ಇರಬಹುದಾ ಎಂದು ಪ್ರಶ್ನಿಸುತ್ತಾರೆ. ಇದೇ ವೇಳೆ ಯಾವುದೇ ನಿರ್ವಹಣೆ ಮಾಡದ ಅಡಿಕೆ ತೋಟದಲ್ಲಿ ಅಡಿಕೆ ಬೀಳುವ ಪ್ರಮಾಣ ಕಡಿಮೆ ಎನ್ನುವುದನ್ನೂ ಅವರು ಗಮನಿಸಿ ಹೇಳುತ್ತಾರೆ. ಸಾಮಾನ್ಯವಾಗಿ ಬಿಸಿಲು-ಮಳೆ ಆರಂಭವಾಗುವ ವೇಳೆ ಅಂದರೆ ಮೇ ತಿಂಗಳಲ್ಲಿ ಪೆಂತಿ ಕೀಟದ ಬಾಧೆಯಿಂದ ಎಳೆ ಅಡಿಕೆ ಬೀಳುವುದು ಇದೆ.  ಔಷಧಿ ಸಿಂಪಡಣೆ ಮಾಡಿದರೂ ಎಳೆ ಅಡಿಕೆ ಬೀಳುವುದು ನಿಂತಿಲ್ಲ ಯಾಕೆ? ಎನ್ನುವುದು ಬೆಳೆಗಾರರ ಪ್ರಶ್ನೆ. ಹೀಗಾಗಿ ಎಳೆ ಅಡಿಕೆ ಬೀಳುವುದಕ್ಕೆ ತಾಪಮಾನದ ಏರುಪೇರು ಹಾಗೂ ಹವಾಮಾನ ಕಾರಣವೇ ಎನ್ನುವುದು ಕೂಡಾ ಈಗ ಗಮನಿಸಬೇಕಾದ ಅಂಶವಾಗಿದೆ.

ಒಟ್ಟಿನಲ್ಲಿ ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ಈಗ ಜೂನ್‌ ತಿಂಗಳು ಸವಾಲಿನ ದಿನಗಳಾಗಿದೆ. ಅಡಿಕೆ ಬೀಳುವುದು ತಡೆಯುವುದು ಹೇಗೆ..? ಅಡಿಕೆ ಉಳಿಸಿಕೊಳ್ಳುವುದು ಹೇಗೆ ಎನ್ನುವುದು ಚಿಂತೆ. ಇದೇ ವೇಳೆ ಅಡಿಕೆ ಧಾರಣೆಯೂ ಏರಿಕೆಯಲ್ಲಿದೆ, ಮುಂದಿನ ವರ್ಷವೂ ಅಡಿಕೆ ಫಸಲು ಕಡಿಮೆ ಎನ್ನುವ ಸುದ್ದಿ ಮತ್ತಷ್ಟು ಚಿಂತೆಗೆ ಕಾರಣವಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

14 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

14 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

3 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

3 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

3 days ago