Advertisement
ವಿಶೇಷ ವರದಿಗಳು

ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ…? ಕೇಳಲು ಶುರು ಮಾಡಿದ್ದಾರೆ ಅಡಿಕೆ ಬೆಳೆಗಾರರು..!

Share

ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.‌10 ಕಳೆಯುವ ಹೊತ್ತಿಗೆ ವಾತಾವರಣ ಉಷ್ಣತೆ ತೀರಾ ಇಳಿಕೆಯಾಗಿದೆ. ಈಗ ಅಡಿಕೆ ಬೆಳೆಗಾರರು ಅಲ್ಲಲ್ಲಿ ಮಾತನಾಡುವುದು ಶುರು ಮಾಡಿದ್ದಾರೆ,”ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ..? , ನಮ್ಮಲ್ಲಿ ಕೆಲವು ಕಡೆ ಕಾಣ್ತದೆ..” ಎಂದು ಹೇಳಲು ಶುರು ಮಾಡಿದ್ದಾರೆ. ಕಾರಣ ಏನು ಎಂಬುದರ ಬಗ್ಗೆ ಚಿಂತಿಸುತ್ತಿದ್ದಾರೆ.

ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಕಳೆದ ವರ್ಷ ಅಡಿಕೆ ಫಸಲು ತೀರಾ ಇಳಿಕೆಯಾಗಿತ್ತು. ಅಡಿಕೆ ಹಿಂಗಾರ ಒಣಗುವುದು ಹಾಗೂ ಎಳೆ ಅಡಿಕೆ ಬಿದ್ದ ಕಾರಣದಿಂದ ಶೇ.40 ರಷ್ಟು ಅಡಿಕೆ ಫಸಲು ಇಳಿಕೆಯಾಗಿತ್ತು. ಅದರ ಪರಿಣಾಮವಾಗಿ ಈ ಬಾರಿ ಹೊಸ ಅಡಿಕೆ ಧಾರಣೆ ಈಗಲೇ 480-490 ರೂಪಾಯಿ ಗೆ ಏರಿಕೆಯಾಗಿದೆ, ಮತ್ತಷ್ಟು ಏರಿಕೆಯಾಗುತ್ತದೆ ಎನ್ನುತ್ತಾರೆ ಮಾರುಕಟ್ಟೆ ತಜ್ಞರು. ಆದರೆ ಈ ಬಾರಿಯೂ ಅದೇ ಪರಿಸ್ಥಿತಿ ಪುನರಾವರ್ತನೆಯಾಗುತ್ತದೆಯೇ ಎನ್ನುವ ಅನುಮಾನ ಅಡಿಕೆ ಬೆಳೆಗಾರರನ್ನು ಕಾಡಿದೆ.ಅಷ್ಟೇ ಅಲ್ಲ, ಹೀಗೇ ಆದರೆ ಅಡಿಕೆ ಬೆಳೆಯನ್ನು ನಂಬುದು ಹೇಗೆ. ಕೃಷಿ ಕೆಲಸ ಮಾಡುವುದು ಹೇಗೆ, ಹೊಸ ಕೃಷಿ ಏನು ಮಾಡಬಹುದು ಎನ್ನುವ ಬಗ್ಗೆಯೂ ಚಿಂತನೆಗಳು ನಡೆಯುತ್ತಿದೆ.

ಈ ಬಾರಿ ಮೇ ತಿಂಗಳ ಮಧ್ಯದವರೆಗೂ ಉತ್ತಮ ಫಸಲಿನ ನಿರೀಕ್ಷೆ ಎಲ್ಲಾ ಅಡಿಕೆ ಬೆಳೆಗಾರರಲ್ಲಿತ್ತು. ಆದರೆ ಮೇ ಅಂತ್ಯದ ಹೊತ್ತಿಗೆ ಕೆಲವು ಕಡೆ ಎಳೆ ಅಡಿಕೆ ಬೀಳುವುದು ಕಂಡಿತು. ಆದರೆ  ಜೂನ್‌ 10 ರ ಹೊತ್ತಿಗೆ ಮತ್ತಷ್ಟು ಎಳೆ ಅಡಿಕೆ ಬಿದ್ದಿರುವುದು ಕಂಡಿದೆ. ಹೀಗಾಗಿ ಅಡಿಕೆ ಬೆಳೆಗಾರರು ಯೋಚಿಸುವಂತೆ ಮಾಡಿದೆ.  ಕೆಲವು ಅಡಿಕೆ ಬೆಳೆಗಾರರು ಮಾರ್ಚ್‌ ತಿಂಗಳಿನಿಂದಲೇ ವಿವಿಧ ಔಷಧಿಗಳನ್ನು ಸಿಂಪಡಣೆ ಮಾಡಿದ್ದಾರೆ, ಆದರೂ ಜೂನ್‌ ವೇಳೆಗೆ ಎಳೆ ಅಡಿಕೆ ಬೀಳಲು ಶುರುವಾಗಿದೆ. ಕೆಲವು ಬೆಳೆಗಾರರು ಯಾವುದೇ ಔಷಧಿ ಸಿಂಪಡಣೆ ಮಾಡಿಲ್ಲ ಅಲ್ಲೂ ಎಳೆ ಅಡಿಕೆ ಬೀಳುವುದು ಕಾಣುತ್ತದೆ. ಹೀಗಾಗಿ ಈಗ ಸಮಸ್ಯೆ ಇರುವುದು ಎಲ್ಲಿ ಮತ್ತು ಏನು? ಎನ್ನುವುದರ ಬಗ್ಗೆ ರೈತರ ನಡುವೆಯೇ ಮಾತುಕತೆ ನಡೆಯುತ್ತಿದೆ.

ವಿಟ್ಲದ ಮಂಕುಡೆಯ ಕೃಷಿಕರೊಬ್ಬರ ಪ್ರಕಾರ, ವಿಪರೀತ ಬಿಸಿಲು ಹಾಗೂ ನೀರಾವರಿ ವ್ಯವಸ್ಥೆಯಲ್ಲಿನ ಲೋಪವೂ ಎಳೆ ಅಡಿಕೆ ಬೀಳುವುದಕ್ಕೆ ಕಾರಣ ಇರಬಹುದಾ ಎಂದು ಪ್ರಶ್ನಿಸುತ್ತಾರೆ. ಇದೇ ವೇಳೆ ಯಾವುದೇ ನಿರ್ವಹಣೆ ಮಾಡದ ಅಡಿಕೆ ತೋಟದಲ್ಲಿ ಅಡಿಕೆ ಬೀಳುವ ಪ್ರಮಾಣ ಕಡಿಮೆ ಎನ್ನುವುದನ್ನೂ ಅವರು ಗಮನಿಸಿ ಹೇಳುತ್ತಾರೆ. ಸಾಮಾನ್ಯವಾಗಿ ಬಿಸಿಲು-ಮಳೆ ಆರಂಭವಾಗುವ ವೇಳೆ ಅಂದರೆ ಮೇ ತಿಂಗಳಲ್ಲಿ ಪೆಂತಿ ಕೀಟದ ಬಾಧೆಯಿಂದ ಎಳೆ ಅಡಿಕೆ ಬೀಳುವುದು ಇದೆ.  ಔಷಧಿ ಸಿಂಪಡಣೆ ಮಾಡಿದರೂ ಎಳೆ ಅಡಿಕೆ ಬೀಳುವುದು ನಿಂತಿಲ್ಲ ಯಾಕೆ? ಎನ್ನುವುದು ಬೆಳೆಗಾರರ ಪ್ರಶ್ನೆ. ಹೀಗಾಗಿ ಎಳೆ ಅಡಿಕೆ ಬೀಳುವುದಕ್ಕೆ ತಾಪಮಾನದ ಏರುಪೇರು ಹಾಗೂ ಹವಾಮಾನ ಕಾರಣವೇ ಎನ್ನುವುದು ಕೂಡಾ ಈಗ ಗಮನಿಸಬೇಕಾದ ಅಂಶವಾಗಿದೆ.

ಒಟ್ಟಿನಲ್ಲಿ ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ಈಗ ಜೂನ್‌ ತಿಂಗಳು ಸವಾಲಿನ ದಿನಗಳಾಗಿದೆ. ಅಡಿಕೆ ಬೀಳುವುದು ತಡೆಯುವುದು ಹೇಗೆ..? ಅಡಿಕೆ ಉಳಿಸಿಕೊಳ್ಳುವುದು ಹೇಗೆ ಎನ್ನುವುದು ಚಿಂತೆ. ಇದೇ ವೇಳೆ ಅಡಿಕೆ ಧಾರಣೆಯೂ ಏರಿಕೆಯಲ್ಲಿದೆ, ಮುಂದಿನ ವರ್ಷವೂ ಅಡಿಕೆ ಫಸಲು ಕಡಿಮೆ ಎನ್ನುವ ಸುದ್ದಿ ಮತ್ತಷ್ಟು ಚಿಂತೆಗೆ ಕಾರಣವಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

3 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

12 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

19 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago