Advertisement
ವಿಶೇಷ ವರದಿಗಳು

ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ…? ಕೇಳಲು ಶುರು ಮಾಡಿದ್ದಾರೆ ಅಡಿಕೆ ಬೆಳೆಗಾರರು..!

Share

ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.‌10 ಕಳೆಯುವ ಹೊತ್ತಿಗೆ ವಾತಾವರಣ ಉಷ್ಣತೆ ತೀರಾ ಇಳಿಕೆಯಾಗಿದೆ. ಈಗ ಅಡಿಕೆ ಬೆಳೆಗಾರರು ಅಲ್ಲಲ್ಲಿ ಮಾತನಾಡುವುದು ಶುರು ಮಾಡಿದ್ದಾರೆ,”ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ..? , ನಮ್ಮಲ್ಲಿ ಕೆಲವು ಕಡೆ ಕಾಣ್ತದೆ..” ಎಂದು ಹೇಳಲು ಶುರು ಮಾಡಿದ್ದಾರೆ. ಕಾರಣ ಏನು ಎಂಬುದರ ಬಗ್ಗೆ ಚಿಂತಿಸುತ್ತಿದ್ದಾರೆ.

ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಕಳೆದ ವರ್ಷ ಅಡಿಕೆ ಫಸಲು ತೀರಾ ಇಳಿಕೆಯಾಗಿತ್ತು. ಅಡಿಕೆ ಹಿಂಗಾರ ಒಣಗುವುದು ಹಾಗೂ ಎಳೆ ಅಡಿಕೆ ಬಿದ್ದ ಕಾರಣದಿಂದ ಶೇ.40 ರಷ್ಟು ಅಡಿಕೆ ಫಸಲು ಇಳಿಕೆಯಾಗಿತ್ತು. ಅದರ ಪರಿಣಾಮವಾಗಿ ಈ ಬಾರಿ ಹೊಸ ಅಡಿಕೆ ಧಾರಣೆ ಈಗಲೇ 480-490 ರೂಪಾಯಿ ಗೆ ಏರಿಕೆಯಾಗಿದೆ, ಮತ್ತಷ್ಟು ಏರಿಕೆಯಾಗುತ್ತದೆ ಎನ್ನುತ್ತಾರೆ ಮಾರುಕಟ್ಟೆ ತಜ್ಞರು. ಆದರೆ ಈ ಬಾರಿಯೂ ಅದೇ ಪರಿಸ್ಥಿತಿ ಪುನರಾವರ್ತನೆಯಾಗುತ್ತದೆಯೇ ಎನ್ನುವ ಅನುಮಾನ ಅಡಿಕೆ ಬೆಳೆಗಾರರನ್ನು ಕಾಡಿದೆ.ಅಷ್ಟೇ ಅಲ್ಲ, ಹೀಗೇ ಆದರೆ ಅಡಿಕೆ ಬೆಳೆಯನ್ನು ನಂಬುದು ಹೇಗೆ. ಕೃಷಿ ಕೆಲಸ ಮಾಡುವುದು ಹೇಗೆ, ಹೊಸ ಕೃಷಿ ಏನು ಮಾಡಬಹುದು ಎನ್ನುವ ಬಗ್ಗೆಯೂ ಚಿಂತನೆಗಳು ನಡೆಯುತ್ತಿದೆ.

ಈ ಬಾರಿ ಮೇ ತಿಂಗಳ ಮಧ್ಯದವರೆಗೂ ಉತ್ತಮ ಫಸಲಿನ ನಿರೀಕ್ಷೆ ಎಲ್ಲಾ ಅಡಿಕೆ ಬೆಳೆಗಾರರಲ್ಲಿತ್ತು. ಆದರೆ ಮೇ ಅಂತ್ಯದ ಹೊತ್ತಿಗೆ ಕೆಲವು ಕಡೆ ಎಳೆ ಅಡಿಕೆ ಬೀಳುವುದು ಕಂಡಿತು. ಆದರೆ  ಜೂನ್‌ 10 ರ ಹೊತ್ತಿಗೆ ಮತ್ತಷ್ಟು ಎಳೆ ಅಡಿಕೆ ಬಿದ್ದಿರುವುದು ಕಂಡಿದೆ. ಹೀಗಾಗಿ ಅಡಿಕೆ ಬೆಳೆಗಾರರು ಯೋಚಿಸುವಂತೆ ಮಾಡಿದೆ.  ಕೆಲವು ಅಡಿಕೆ ಬೆಳೆಗಾರರು ಮಾರ್ಚ್‌ ತಿಂಗಳಿನಿಂದಲೇ ವಿವಿಧ ಔಷಧಿಗಳನ್ನು ಸಿಂಪಡಣೆ ಮಾಡಿದ್ದಾರೆ, ಆದರೂ ಜೂನ್‌ ವೇಳೆಗೆ ಎಳೆ ಅಡಿಕೆ ಬೀಳಲು ಶುರುವಾಗಿದೆ. ಕೆಲವು ಬೆಳೆಗಾರರು ಯಾವುದೇ ಔಷಧಿ ಸಿಂಪಡಣೆ ಮಾಡಿಲ್ಲ ಅಲ್ಲೂ ಎಳೆ ಅಡಿಕೆ ಬೀಳುವುದು ಕಾಣುತ್ತದೆ. ಹೀಗಾಗಿ ಈಗ ಸಮಸ್ಯೆ ಇರುವುದು ಎಲ್ಲಿ ಮತ್ತು ಏನು? ಎನ್ನುವುದರ ಬಗ್ಗೆ ರೈತರ ನಡುವೆಯೇ ಮಾತುಕತೆ ನಡೆಯುತ್ತಿದೆ.

ವಿಟ್ಲದ ಮಂಕುಡೆಯ ಕೃಷಿಕರೊಬ್ಬರ ಪ್ರಕಾರ, ವಿಪರೀತ ಬಿಸಿಲು ಹಾಗೂ ನೀರಾವರಿ ವ್ಯವಸ್ಥೆಯಲ್ಲಿನ ಲೋಪವೂ ಎಳೆ ಅಡಿಕೆ ಬೀಳುವುದಕ್ಕೆ ಕಾರಣ ಇರಬಹುದಾ ಎಂದು ಪ್ರಶ್ನಿಸುತ್ತಾರೆ. ಇದೇ ವೇಳೆ ಯಾವುದೇ ನಿರ್ವಹಣೆ ಮಾಡದ ಅಡಿಕೆ ತೋಟದಲ್ಲಿ ಅಡಿಕೆ ಬೀಳುವ ಪ್ರಮಾಣ ಕಡಿಮೆ ಎನ್ನುವುದನ್ನೂ ಅವರು ಗಮನಿಸಿ ಹೇಳುತ್ತಾರೆ. ಸಾಮಾನ್ಯವಾಗಿ ಬಿಸಿಲು-ಮಳೆ ಆರಂಭವಾಗುವ ವೇಳೆ ಅಂದರೆ ಮೇ ತಿಂಗಳಲ್ಲಿ ಪೆಂತಿ ಕೀಟದ ಬಾಧೆಯಿಂದ ಎಳೆ ಅಡಿಕೆ ಬೀಳುವುದು ಇದೆ.  ಔಷಧಿ ಸಿಂಪಡಣೆ ಮಾಡಿದರೂ ಎಳೆ ಅಡಿಕೆ ಬೀಳುವುದು ನಿಂತಿಲ್ಲ ಯಾಕೆ? ಎನ್ನುವುದು ಬೆಳೆಗಾರರ ಪ್ರಶ್ನೆ. ಹೀಗಾಗಿ ಎಳೆ ಅಡಿಕೆ ಬೀಳುವುದಕ್ಕೆ ತಾಪಮಾನದ ಏರುಪೇರು ಹಾಗೂ ಹವಾಮಾನ ಕಾರಣವೇ ಎನ್ನುವುದು ಕೂಡಾ ಈಗ ಗಮನಿಸಬೇಕಾದ ಅಂಶವಾಗಿದೆ.

ಒಟ್ಟಿನಲ್ಲಿ ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ಈಗ ಜೂನ್‌ ತಿಂಗಳು ಸವಾಲಿನ ದಿನಗಳಾಗಿದೆ. ಅಡಿಕೆ ಬೀಳುವುದು ತಡೆಯುವುದು ಹೇಗೆ..? ಅಡಿಕೆ ಉಳಿಸಿಕೊಳ್ಳುವುದು ಹೇಗೆ ಎನ್ನುವುದು ಚಿಂತೆ. ಇದೇ ವೇಳೆ ಅಡಿಕೆ ಧಾರಣೆಯೂ ಏರಿಕೆಯಲ್ಲಿದೆ, ಮುಂದಿನ ವರ್ಷವೂ ಅಡಿಕೆ ಫಸಲು ಕಡಿಮೆ ಎನ್ನುವ ಸುದ್ದಿ ಮತ್ತಷ್ಟು ಚಿಂತೆಗೆ ಕಾರಣವಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ

ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ…

6 hours ago

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?

ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…

13 hours ago

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…

23 hours ago

ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?

ಎಲ್‌ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…

24 hours ago

ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ

ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್‌ನ ಪ್ರಬಲ ಚಂಡಮಾರುತ…

1 day ago

ಮತ್ತೆ ಹೆಚ್ಚಿದ ದೇಶದ ಮಳೆ ಕೊರತೆ – ಜುಲೈ ಆರಂಭದ ಚೇತರಿಕೆ ಕುಂಠಿತ, ಮುಂಗಾರು ಮತ್ತೆ ದುರ್ಬಲ

ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…

1 day ago