Opinion

ಸೃಷ್ಟಿ ನಿಯಮಕ್ಕೆ ವಿರುದ್ಧವಾಗಿ ಸಾಗುತ್ತಿದೆ ಬೇಸಾಯ | ಮಾನವನ ಆಹಾರವೆಲ್ಲವೂ ವಿಷಮಯ |

Share

“ನಮ್ಮ ಪೂರ್ವಜರು ಸುಮಾರು 20ನೇ ಶತಮಾನದ 40ರ ದಶಕದವರೆಗೆ ಸೃಷ್ಟಿ ದೇವತೆಯು ತೋರಿಸಿಕೊಟ್ಟಂತೆ ರೈತರು(Farmer) ಬೇಸಾಯ ಪದ್ದತಿಗಳನ್ನು ಅಂದರೆ ಸಾವಯವ ಬೇಸಾಯ ಪದ್ದತಿಗಳನ್ನು(Organic Farming System) ಅನುಸರಿಸುತ್ತಿದ್ದರು. ಆದರೆ ಇತರ ದಿನಗಳಲ್ಲಿ ಮಾನವರು(Human)) ಸೃಷ್ಟಿ ನಿಯಮಕ್ಕೆ ವಿರುದ್ಧವಾಗಿ ನಡೆದು ಸಜೀವಿಗಳು (ಸಸ್ಯಗಳು, ಪ್ರಾಣಿಗಳು) ಬದುಕಿ, ಬಾಳಿ, ಸುಖ, ಶಾಂತಿ, ಸಂತೃಪ್ತಿ ಪಡೆಯಲು ಬೇಕಾದ ನೆಲ, ಆಕಾಶ, ಜಲ, ಅಗ್ನಿ, ಮತ್ತು ಗಾಳಿ ಇವುಗಳನ್ನು ಪೂರ್ತಿ ಮಾಲಿನ್ಯವಾಗುವಂತೆ(Pollution)ವರ್ತಿಸುತ್ತಿದ್ದಾರೆ. ತತ್ಪರಿಣಾಮವಾಗಿ ಬೇಸಾಯ ಕ್ಷೀಣವಾಗಿದೆ.

Advertisement

ಪರಿಸರವನ್ನು ಮಾಲಿನ್ಯಗೊಳಿಸುವಲ್ಲಿ ಬೇಸಾಯದಲ್ಲಿ ರಾಸಾಯನಿಕ ಗೊಬ್ಬರಗಳನ್ನು ಹಾಗೂ ಬೆಳೆಗಳಿಗೆ ಹಾನಿ ಉಂಟು ಮಾಡುವ ಪಿಡುಗುಗಳನ್ನು ನಾಶ ಮಾಡಲು ವಿಷಕಾರಿ ರಾಸಾಯನಿಕ ಪಿಡುಗುನಾಶಕಗಳನ್ನು ಹೆಚ್ಚು ಹೆಚ್ಚು ಉಪಯೋಗ ಮಾಡಿದುದೇ ಇದಕ್ಕೆ ಪ್ರಮುಖ ಅಂಶವಾಗಿದೆ. ರಾಸಾಯನಿಕ ಗೊಬ್ಬರಗಳು ಹಾಗೂ ವಿಷಕಾರಿ ರಾಸಾಯನಿಕ ಪಿಡುಗುನಾಶಕಗಳನ್ನು ಉಪಯೋಗ ಮಾಡುತ್ತಿರುವುದರಿಂದ ಮಾನವನ ಆಹಾರಕ್ಕಾಗಿ ಬಳಸುವ ಹಣ್ಣುಗಳು, ತರಕಾರಿಗಳು, ತೃಣಧಾನ್ಯಗಳು, ಬೇಳೆಕಾಳುಗಳು, ಎಣ್ಣೆಕಾಳುಗಳು ವಿಷಮಯವಾಗಿವೆ. ಈಗಿನ ಕಾಲಕ್ಕೆ ಒಂದರ್ಥದಲ್ಲಿ ಮಾನವನ ಆಹಾರವೆಲ್ಲವೂ ವಿಷಮಯವಾಗಿವೆ.”

ಪೋಷಕಾಂಶಗಳಾದ ಇಂಗಾಲ, ಆಮ್ಲಜನಕ ಮತ್ತು ಜಲಜನಕಗಳನ್ನು ಈಗಾಗಲೇ ಹೇಳಿದಂತೆ ಸಸ್ಯಗಳು ವಾತಾವರಣದಿಂದಲೇ ( ಗಾಳಿ ಮತ್ತು ನೀರಿನಿಂದ) ಪಡೆಯುತ್ತವೆ. ಇನ್ನುಳಿದ 13 ಪೋಷಕಾಂಶಗಳನ್ನು ಸಸ್ಯಗಳು ತಮ್ಮ ಬೇರಿನ ಮುಖಾಂತರ ಮಣ್ಣಿನಿಂದ ಪಡೆಯುತ್ತವೆ.”

“ತಿಪ್ಪೆ ಗುಂಡಿಯ ಮೇಲೆ ಬಿಸಿಲು, ಮಳೆ, ಗಾಳಿಗಳ ದುಷ್ಪರಿಣಾಮವನ್ನು ತಪ್ಪಿಸಲು ಬಹಳ ವೆಚ್ಚ ಮಾಡದೆ, ಒಂದು ಚಪ್ಪರವನ್ನು ಹಾಕುವುದು ಒಳಿತು. ಯಾಕೆಂದರೆ ತಿಪ್ಪೆ ಗುಂಡಿಯ ಮೇಲೆ ಮಳೆ, ಬಿಸಿಲು ಬಿದ್ದರೆ, ಆ ತಿಪ್ಪೆ ಗುಂಡಿಯಲ್ಲಿರುವ ಸಾರಜನಕವು ನೈಟ್ರೇಟ್ ಆಗಿ ಹಾರಿಹೋಗುವ ಸಂಭವವಿರುತ್ತದೆ.” ” ಮೃಗ ಪಂಚಕ ಮಳೆಗಾಲದ ಮೃಗಶಿರಾ, ಆರಿದ್ರಾ, ಪುನರ್ವಸು, ಪುಷ್ಯ, ಮತ್ತು ಆಶ್ಲೇಷಾ ಈ 5 ಮಳೆಗಳ ಅವಧಿಗೆ ಮುಂಗಾರು ಹಂಗಾಮು ಎಂದು ಕರೆಯುತ್ತಾರೆ.
ಮಘ ಪಂಚಕ ಮಳೆಗಳಾದ ಮಘಾ, ಉತ್ತರೆ, ಹಸ್ತ, ಚಿತ್ತ, ಮತ್ತು ಸ್ವಾತಿ ಈ 5 ಮಳೆಗಳ ಅವಧಿಗೆ ಹಿಂಗಾರು ಹಂಗಾಮು ಎಂದು ಕರೆಯುತ್ತಾರೆ. ”

ಬರಹ :
ಪ್ರೊ. ಎಸ್ ಎಸ್ ಕಟಗಿಹಳ್ಳಿಮಠ
,  ಸಾವಯವ ಕೃಷಿ, (ಒಂದು ಅಧ್ಯಯನ)
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು, ಶಿವಮೊಗ್ಗ, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ…

1 hour ago

ಮಣಿಪುರದಲ್ಲಿ 68 ಟನ್ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆ ವಶ

ಅಕ್ರಮವಾಗಿ ಸುಮಾರು 68 ಟನ್‌ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು…

16 hours ago

ಅಡುಗೆ ಮನೆ ‘ಬೇಯಿಸುವ ಕೋಣೆ’ಯಲ್ಲ!

ಬದುಕಿನ ಒಂದೊಂದು ಅಂಗವೂ ‘ಕಲಾತ್ಮಕ’. ಒದಗುವ ಸುಭಗತನವು ಅನುಭವವೇದ್ಯ. ಅಡುಗೆ ಮನೆಯು ಬರೇ…

17 hours ago

2025ರಲ್ಲಿ ಶನಿ ತಮ್ಮ ನಕ್ಷತ್ರ ಅಥವಾ ರಾಶಿಯಲ್ಲಿ ಅಧೋಗತಿಯ ಚಲನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜೋತಿಷಿಗಳನ್ನು ಸಂಪರ್ಕಿಸಿ 9535156490

17 hours ago

ತಾಪಮಾನ ಹೆಚ್ಚಳ | ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರಾಣಿಗಳಿಗೆ ತಂಪಾದ ಆಹಾರ ಪದಾರ್ಥ |

ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…

1 day ago

ತೊಗರಿ ಉತ್ಪನ್ನ ಖರೀದಿ ಅವಧಿ ಎ.25 ರವರೆಗೆ ವಿಸ್ತರಣೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…

1 day ago