Opinion

ಸೃಷ್ಟಿ ನಿಯಮಕ್ಕೆ ವಿರುದ್ಧವಾಗಿ ಸಾಗುತ್ತಿದೆ ಬೇಸಾಯ | ಮಾನವನ ಆಹಾರವೆಲ್ಲವೂ ವಿಷಮಯ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

“ನಮ್ಮ ಪೂರ್ವಜರು ಸುಮಾರು 20ನೇ ಶತಮಾನದ 40ರ ದಶಕದವರೆಗೆ ಸೃಷ್ಟಿ ದೇವತೆಯು ತೋರಿಸಿಕೊಟ್ಟಂತೆ ರೈತರು(Farmer) ಬೇಸಾಯ ಪದ್ದತಿಗಳನ್ನು ಅಂದರೆ ಸಾವಯವ ಬೇಸಾಯ ಪದ್ದತಿಗಳನ್ನು(Organic Farming System) ಅನುಸರಿಸುತ್ತಿದ್ದರು. ಆದರೆ ಇತರ ದಿನಗಳಲ್ಲಿ ಮಾನವರು(Human)) ಸೃಷ್ಟಿ ನಿಯಮಕ್ಕೆ ವಿರುದ್ಧವಾಗಿ ನಡೆದು ಸಜೀವಿಗಳು (ಸಸ್ಯಗಳು, ಪ್ರಾಣಿಗಳು) ಬದುಕಿ, ಬಾಳಿ, ಸುಖ, ಶಾಂತಿ, ಸಂತೃಪ್ತಿ ಪಡೆಯಲು ಬೇಕಾದ ನೆಲ, ಆಕಾಶ, ಜಲ, ಅಗ್ನಿ, ಮತ್ತು ಗಾಳಿ ಇವುಗಳನ್ನು ಪೂರ್ತಿ ಮಾಲಿನ್ಯವಾಗುವಂತೆ(Pollution)ವರ್ತಿಸುತ್ತಿದ್ದಾರೆ. ತತ್ಪರಿಣಾಮವಾಗಿ ಬೇಸಾಯ ಕ್ಷೀಣವಾಗಿದೆ.

Advertisement
Advertisement

ಪರಿಸರವನ್ನು ಮಾಲಿನ್ಯಗೊಳಿಸುವಲ್ಲಿ ಬೇಸಾಯದಲ್ಲಿ ರಾಸಾಯನಿಕ ಗೊಬ್ಬರಗಳನ್ನು ಹಾಗೂ ಬೆಳೆಗಳಿಗೆ ಹಾನಿ ಉಂಟು ಮಾಡುವ ಪಿಡುಗುಗಳನ್ನು ನಾಶ ಮಾಡಲು ವಿಷಕಾರಿ ರಾಸಾಯನಿಕ ಪಿಡುಗುನಾಶಕಗಳನ್ನು ಹೆಚ್ಚು ಹೆಚ್ಚು ಉಪಯೋಗ ಮಾಡಿದುದೇ ಇದಕ್ಕೆ ಪ್ರಮುಖ ಅಂಶವಾಗಿದೆ. ರಾಸಾಯನಿಕ ಗೊಬ್ಬರಗಳು ಹಾಗೂ ವಿಷಕಾರಿ ರಾಸಾಯನಿಕ ಪಿಡುಗುನಾಶಕಗಳನ್ನು ಉಪಯೋಗ ಮಾಡುತ್ತಿರುವುದರಿಂದ ಮಾನವನ ಆಹಾರಕ್ಕಾಗಿ ಬಳಸುವ ಹಣ್ಣುಗಳು, ತರಕಾರಿಗಳು, ತೃಣಧಾನ್ಯಗಳು, ಬೇಳೆಕಾಳುಗಳು, ಎಣ್ಣೆಕಾಳುಗಳು ವಿಷಮಯವಾಗಿವೆ. ಈಗಿನ ಕಾಲಕ್ಕೆ ಒಂದರ್ಥದಲ್ಲಿ ಮಾನವನ ಆಹಾರವೆಲ್ಲವೂ ವಿಷಮಯವಾಗಿವೆ.”

ಪೋಷಕಾಂಶಗಳಾದ ಇಂಗಾಲ, ಆಮ್ಲಜನಕ ಮತ್ತು ಜಲಜನಕಗಳನ್ನು ಈಗಾಗಲೇ ಹೇಳಿದಂತೆ ಸಸ್ಯಗಳು ವಾತಾವರಣದಿಂದಲೇ ( ಗಾಳಿ ಮತ್ತು ನೀರಿನಿಂದ) ಪಡೆಯುತ್ತವೆ. ಇನ್ನುಳಿದ 13 ಪೋಷಕಾಂಶಗಳನ್ನು ಸಸ್ಯಗಳು ತಮ್ಮ ಬೇರಿನ ಮುಖಾಂತರ ಮಣ್ಣಿನಿಂದ ಪಡೆಯುತ್ತವೆ.”

“ತಿಪ್ಪೆ ಗುಂಡಿಯ ಮೇಲೆ ಬಿಸಿಲು, ಮಳೆ, ಗಾಳಿಗಳ ದುಷ್ಪರಿಣಾಮವನ್ನು ತಪ್ಪಿಸಲು ಬಹಳ ವೆಚ್ಚ ಮಾಡದೆ, ಒಂದು ಚಪ್ಪರವನ್ನು ಹಾಕುವುದು ಒಳಿತು. ಯಾಕೆಂದರೆ ತಿಪ್ಪೆ ಗುಂಡಿಯ ಮೇಲೆ ಮಳೆ, ಬಿಸಿಲು ಬಿದ್ದರೆ, ಆ ತಿಪ್ಪೆ ಗುಂಡಿಯಲ್ಲಿರುವ ಸಾರಜನಕವು ನೈಟ್ರೇಟ್ ಆಗಿ ಹಾರಿಹೋಗುವ ಸಂಭವವಿರುತ್ತದೆ.” ” ಮೃಗ ಪಂಚಕ ಮಳೆಗಾಲದ ಮೃಗಶಿರಾ, ಆರಿದ್ರಾ, ಪುನರ್ವಸು, ಪುಷ್ಯ, ಮತ್ತು ಆಶ್ಲೇಷಾ ಈ 5 ಮಳೆಗಳ ಅವಧಿಗೆ ಮುಂಗಾರು ಹಂಗಾಮು ಎಂದು ಕರೆಯುತ್ತಾರೆ.
ಮಘ ಪಂಚಕ ಮಳೆಗಳಾದ ಮಘಾ, ಉತ್ತರೆ, ಹಸ್ತ, ಚಿತ್ತ, ಮತ್ತು ಸ್ವಾತಿ ಈ 5 ಮಳೆಗಳ ಅವಧಿಗೆ ಹಿಂಗಾರು ಹಂಗಾಮು ಎಂದು ಕರೆಯುತ್ತಾರೆ. ”

ಬರಹ :
ಪ್ರೊ. ಎಸ್ ಎಸ್ ಕಟಗಿಹಳ್ಳಿಮಠ
,  ಸಾವಯವ ಕೃಷಿ, (ಒಂದು ಅಧ್ಯಯನ)
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….

ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490

17 hours ago

ಬದುಕು ಪುರಾಣ | ಶ್ರೀಮಂತಿಕೆ ‘ಪಾಸ್ ಬುಕ್ಕಿನಲ್ಲಿ’ ಇರುವುದಲ್ಲ!

ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು  ಹಣ ಕೊಟ್ಟರೂ…

17 hours ago

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…

1 day ago

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…

1 day ago

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…

1 day ago

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…

1 day ago