Opinion

ಸೃಷ್ಟಿ ನಿಯಮಕ್ಕೆ ವಿರುದ್ಧವಾಗಿ ಸಾಗುತ್ತಿದೆ ಬೇಸಾಯ | ಮಾನವನ ಆಹಾರವೆಲ್ಲವೂ ವಿಷಮಯ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

“ನಮ್ಮ ಪೂರ್ವಜರು ಸುಮಾರು 20ನೇ ಶತಮಾನದ 40ರ ದಶಕದವರೆಗೆ ಸೃಷ್ಟಿ ದೇವತೆಯು ತೋರಿಸಿಕೊಟ್ಟಂತೆ ರೈತರು(Farmer) ಬೇಸಾಯ ಪದ್ದತಿಗಳನ್ನು ಅಂದರೆ ಸಾವಯವ ಬೇಸಾಯ ಪದ್ದತಿಗಳನ್ನು(Organic Farming System) ಅನುಸರಿಸುತ್ತಿದ್ದರು. ಆದರೆ ಇತರ ದಿನಗಳಲ್ಲಿ ಮಾನವರು(Human)) ಸೃಷ್ಟಿ ನಿಯಮಕ್ಕೆ ವಿರುದ್ಧವಾಗಿ ನಡೆದು ಸಜೀವಿಗಳು (ಸಸ್ಯಗಳು, ಪ್ರಾಣಿಗಳು) ಬದುಕಿ, ಬಾಳಿ, ಸುಖ, ಶಾಂತಿ, ಸಂತೃಪ್ತಿ ಪಡೆಯಲು ಬೇಕಾದ ನೆಲ, ಆಕಾಶ, ಜಲ, ಅಗ್ನಿ, ಮತ್ತು ಗಾಳಿ ಇವುಗಳನ್ನು ಪೂರ್ತಿ ಮಾಲಿನ್ಯವಾಗುವಂತೆ(Pollution)ವರ್ತಿಸುತ್ತಿದ್ದಾರೆ. ತತ್ಪರಿಣಾಮವಾಗಿ ಬೇಸಾಯ ಕ್ಷೀಣವಾಗಿದೆ.

Advertisement

ಪರಿಸರವನ್ನು ಮಾಲಿನ್ಯಗೊಳಿಸುವಲ್ಲಿ ಬೇಸಾಯದಲ್ಲಿ ರಾಸಾಯನಿಕ ಗೊಬ್ಬರಗಳನ್ನು ಹಾಗೂ ಬೆಳೆಗಳಿಗೆ ಹಾನಿ ಉಂಟು ಮಾಡುವ ಪಿಡುಗುಗಳನ್ನು ನಾಶ ಮಾಡಲು ವಿಷಕಾರಿ ರಾಸಾಯನಿಕ ಪಿಡುಗುನಾಶಕಗಳನ್ನು ಹೆಚ್ಚು ಹೆಚ್ಚು ಉಪಯೋಗ ಮಾಡಿದುದೇ ಇದಕ್ಕೆ ಪ್ರಮುಖ ಅಂಶವಾಗಿದೆ. ರಾಸಾಯನಿಕ ಗೊಬ್ಬರಗಳು ಹಾಗೂ ವಿಷಕಾರಿ ರಾಸಾಯನಿಕ ಪಿಡುಗುನಾಶಕಗಳನ್ನು ಉಪಯೋಗ ಮಾಡುತ್ತಿರುವುದರಿಂದ ಮಾನವನ ಆಹಾರಕ್ಕಾಗಿ ಬಳಸುವ ಹಣ್ಣುಗಳು, ತರಕಾರಿಗಳು, ತೃಣಧಾನ್ಯಗಳು, ಬೇಳೆಕಾಳುಗಳು, ಎಣ್ಣೆಕಾಳುಗಳು ವಿಷಮಯವಾಗಿವೆ. ಈಗಿನ ಕಾಲಕ್ಕೆ ಒಂದರ್ಥದಲ್ಲಿ ಮಾನವನ ಆಹಾರವೆಲ್ಲವೂ ವಿಷಮಯವಾಗಿವೆ.”

ಪೋಷಕಾಂಶಗಳಾದ ಇಂಗಾಲ, ಆಮ್ಲಜನಕ ಮತ್ತು ಜಲಜನಕಗಳನ್ನು ಈಗಾಗಲೇ ಹೇಳಿದಂತೆ ಸಸ್ಯಗಳು ವಾತಾವರಣದಿಂದಲೇ ( ಗಾಳಿ ಮತ್ತು ನೀರಿನಿಂದ) ಪಡೆಯುತ್ತವೆ. ಇನ್ನುಳಿದ 13 ಪೋಷಕಾಂಶಗಳನ್ನು ಸಸ್ಯಗಳು ತಮ್ಮ ಬೇರಿನ ಮುಖಾಂತರ ಮಣ್ಣಿನಿಂದ ಪಡೆಯುತ್ತವೆ.”

“ತಿಪ್ಪೆ ಗುಂಡಿಯ ಮೇಲೆ ಬಿಸಿಲು, ಮಳೆ, ಗಾಳಿಗಳ ದುಷ್ಪರಿಣಾಮವನ್ನು ತಪ್ಪಿಸಲು ಬಹಳ ವೆಚ್ಚ ಮಾಡದೆ, ಒಂದು ಚಪ್ಪರವನ್ನು ಹಾಕುವುದು ಒಳಿತು. ಯಾಕೆಂದರೆ ತಿಪ್ಪೆ ಗುಂಡಿಯ ಮೇಲೆ ಮಳೆ, ಬಿಸಿಲು ಬಿದ್ದರೆ, ಆ ತಿಪ್ಪೆ ಗುಂಡಿಯಲ್ಲಿರುವ ಸಾರಜನಕವು ನೈಟ್ರೇಟ್ ಆಗಿ ಹಾರಿಹೋಗುವ ಸಂಭವವಿರುತ್ತದೆ.” ” ಮೃಗ ಪಂಚಕ ಮಳೆಗಾಲದ ಮೃಗಶಿರಾ, ಆರಿದ್ರಾ, ಪುನರ್ವಸು, ಪುಷ್ಯ, ಮತ್ತು ಆಶ್ಲೇಷಾ ಈ 5 ಮಳೆಗಳ ಅವಧಿಗೆ ಮುಂಗಾರು ಹಂಗಾಮು ಎಂದು ಕರೆಯುತ್ತಾರೆ.
ಮಘ ಪಂಚಕ ಮಳೆಗಳಾದ ಮಘಾ, ಉತ್ತರೆ, ಹಸ್ತ, ಚಿತ್ತ, ಮತ್ತು ಸ್ವಾತಿ ಈ 5 ಮಳೆಗಳ ಅವಧಿಗೆ ಹಿಂಗಾರು ಹಂಗಾಮು ಎಂದು ಕರೆಯುತ್ತಾರೆ. ”

Advertisement
ಬರಹ :
ಪ್ರೊ. ಎಸ್ ಎಸ್ ಕಟಗಿಹಳ್ಳಿಮಠ
,  ಸಾವಯವ ಕೃಷಿ, (ಒಂದು ಅಧ್ಯಯನ)
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 16-08-2025 | ಮಲೆನಾಡು-ಕರಾವಳಿಯಲ್ಲಿ ಉತ್ತಮ ಮಳೆ | ಆ.20 ರ ನಂತರ ಮಳೆ ಹೇಗೆ..?

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ, ಒಡಿಶಾ ಕರಾವಳಿಯಲ್ಲಿ ಇದ್ದು, ಆಗಸ್ಟ್ 20,21ರಂದು ಗುಜರಾತ್…

5 hours ago

ಹೊಸರುಚಿ | ಹಲಸಿನ ಹಣ್ಣಿನ ಬಜ್ಜಿ

ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

9 hours ago

ಎತ್ತಿನಹೊಳೆ ಯೋಜನೆಯಡಿ ವಿವಿಧ ಜಿಲ್ಲೆಗಳಿಗೆ ನೀರು ತುಂಬಿಸುವ ಚಿಂತನೆ

ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು…

10 hours ago

ದೇಶದ ಉತ್ಪನ್ನಗಳನ್ನು ಬಳಸಲು ರೈತರ ಸಂಕಲ್ಪ

ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ…

10 hours ago

ಹವಾಮಾನ ವರದಿ | 15-08-2025 | ಸದ್ಯ ಸಾಮಾನ್ಯ ಮಳೆ, ಆ.20 ರ ನಂತರ ಮಳೆ ಕಡಿಮೆ

ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…

1 day ago

ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!

ಗ್ರಾಮೀಣ ಮಟ್ಟದ ಆರ್ಥಿಕ‌ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…

2 days ago