Advertisement
Opinion

ಸೃಷ್ಟಿ ನಿಯಮಕ್ಕೆ ವಿರುದ್ಧವಾಗಿ ಸಾಗುತ್ತಿದೆ ಬೇಸಾಯ | ಮಾನವನ ಆಹಾರವೆಲ್ಲವೂ ವಿಷಮಯ |

Share

“ನಮ್ಮ ಪೂರ್ವಜರು ಸುಮಾರು 20ನೇ ಶತಮಾನದ 40ರ ದಶಕದವರೆಗೆ ಸೃಷ್ಟಿ ದೇವತೆಯು ತೋರಿಸಿಕೊಟ್ಟಂತೆ ರೈತರು(Farmer) ಬೇಸಾಯ ಪದ್ದತಿಗಳನ್ನು ಅಂದರೆ ಸಾವಯವ ಬೇಸಾಯ ಪದ್ದತಿಗಳನ್ನು(Organic Farming System) ಅನುಸರಿಸುತ್ತಿದ್ದರು. ಆದರೆ ಇತರ ದಿನಗಳಲ್ಲಿ ಮಾನವರು(Human)) ಸೃಷ್ಟಿ ನಿಯಮಕ್ಕೆ ವಿರುದ್ಧವಾಗಿ ನಡೆದು ಸಜೀವಿಗಳು (ಸಸ್ಯಗಳು, ಪ್ರಾಣಿಗಳು) ಬದುಕಿ, ಬಾಳಿ, ಸುಖ, ಶಾಂತಿ, ಸಂತೃಪ್ತಿ ಪಡೆಯಲು ಬೇಕಾದ ನೆಲ, ಆಕಾಶ, ಜಲ, ಅಗ್ನಿ, ಮತ್ತು ಗಾಳಿ ಇವುಗಳನ್ನು ಪೂರ್ತಿ ಮಾಲಿನ್ಯವಾಗುವಂತೆ(Pollution)ವರ್ತಿಸುತ್ತಿದ್ದಾರೆ. ತತ್ಪರಿಣಾಮವಾಗಿ ಬೇಸಾಯ ಕ್ಷೀಣವಾಗಿದೆ.

ಪರಿಸರವನ್ನು ಮಾಲಿನ್ಯಗೊಳಿಸುವಲ್ಲಿ ಬೇಸಾಯದಲ್ಲಿ ರಾಸಾಯನಿಕ ಗೊಬ್ಬರಗಳನ್ನು ಹಾಗೂ ಬೆಳೆಗಳಿಗೆ ಹಾನಿ ಉಂಟು ಮಾಡುವ ಪಿಡುಗುಗಳನ್ನು ನಾಶ ಮಾಡಲು ವಿಷಕಾರಿ ರಾಸಾಯನಿಕ ಪಿಡುಗುನಾಶಕಗಳನ್ನು ಹೆಚ್ಚು ಹೆಚ್ಚು ಉಪಯೋಗ ಮಾಡಿದುದೇ ಇದಕ್ಕೆ ಪ್ರಮುಖ ಅಂಶವಾಗಿದೆ. ರಾಸಾಯನಿಕ ಗೊಬ್ಬರಗಳು ಹಾಗೂ ವಿಷಕಾರಿ ರಾಸಾಯನಿಕ ಪಿಡುಗುನಾಶಕಗಳನ್ನು ಉಪಯೋಗ ಮಾಡುತ್ತಿರುವುದರಿಂದ ಮಾನವನ ಆಹಾರಕ್ಕಾಗಿ ಬಳಸುವ ಹಣ್ಣುಗಳು, ತರಕಾರಿಗಳು, ತೃಣಧಾನ್ಯಗಳು, ಬೇಳೆಕಾಳುಗಳು, ಎಣ್ಣೆಕಾಳುಗಳು ವಿಷಮಯವಾಗಿವೆ. ಈಗಿನ ಕಾಲಕ್ಕೆ ಒಂದರ್ಥದಲ್ಲಿ ಮಾನವನ ಆಹಾರವೆಲ್ಲವೂ ವಿಷಮಯವಾಗಿವೆ.”

ಪೋಷಕಾಂಶಗಳಾದ ಇಂಗಾಲ, ಆಮ್ಲಜನಕ ಮತ್ತು ಜಲಜನಕಗಳನ್ನು ಈಗಾಗಲೇ ಹೇಳಿದಂತೆ ಸಸ್ಯಗಳು ವಾತಾವರಣದಿಂದಲೇ ( ಗಾಳಿ ಮತ್ತು ನೀರಿನಿಂದ) ಪಡೆಯುತ್ತವೆ. ಇನ್ನುಳಿದ 13 ಪೋಷಕಾಂಶಗಳನ್ನು ಸಸ್ಯಗಳು ತಮ್ಮ ಬೇರಿನ ಮುಖಾಂತರ ಮಣ್ಣಿನಿಂದ ಪಡೆಯುತ್ತವೆ.”

“ತಿಪ್ಪೆ ಗುಂಡಿಯ ಮೇಲೆ ಬಿಸಿಲು, ಮಳೆ, ಗಾಳಿಗಳ ದುಷ್ಪರಿಣಾಮವನ್ನು ತಪ್ಪಿಸಲು ಬಹಳ ವೆಚ್ಚ ಮಾಡದೆ, ಒಂದು ಚಪ್ಪರವನ್ನು ಹಾಕುವುದು ಒಳಿತು. ಯಾಕೆಂದರೆ ತಿಪ್ಪೆ ಗುಂಡಿಯ ಮೇಲೆ ಮಳೆ, ಬಿಸಿಲು ಬಿದ್ದರೆ, ಆ ತಿಪ್ಪೆ ಗುಂಡಿಯಲ್ಲಿರುವ ಸಾರಜನಕವು ನೈಟ್ರೇಟ್ ಆಗಿ ಹಾರಿಹೋಗುವ ಸಂಭವವಿರುತ್ತದೆ.” ” ಮೃಗ ಪಂಚಕ ಮಳೆಗಾಲದ ಮೃಗಶಿರಾ, ಆರಿದ್ರಾ, ಪುನರ್ವಸು, ಪುಷ್ಯ, ಮತ್ತು ಆಶ್ಲೇಷಾ ಈ 5 ಮಳೆಗಳ ಅವಧಿಗೆ ಮುಂಗಾರು ಹಂಗಾಮು ಎಂದು ಕರೆಯುತ್ತಾರೆ.
ಮಘ ಪಂಚಕ ಮಳೆಗಳಾದ ಮಘಾ, ಉತ್ತರೆ, ಹಸ್ತ, ಚಿತ್ತ, ಮತ್ತು ಸ್ವಾತಿ ಈ 5 ಮಳೆಗಳ ಅವಧಿಗೆ ಹಿಂಗಾರು ಹಂಗಾಮು ಎಂದು ಕರೆಯುತ್ತಾರೆ. ”

ಬರಹ :
ಪ್ರೊ. ಎಸ್ ಎಸ್ ಕಟಗಿಹಳ್ಳಿಮಠ
,  ಸಾವಯವ ಕೃಷಿ, (ಒಂದು ಅಧ್ಯಯನ)
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

10 seconds ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

14 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

14 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

14 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

15 hours ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

1 day ago