Advertisement
Opinion

ಸೃಷ್ಟಿ ನಿಯಮಕ್ಕೆ ವಿರುದ್ಧವಾಗಿ ಸಾಗುತ್ತಿದೆ ಬೇಸಾಯ | ಮಾನವನ ಆಹಾರವೆಲ್ಲವೂ ವಿಷಮಯ |

Share

“ನಮ್ಮ ಪೂರ್ವಜರು ಸುಮಾರು 20ನೇ ಶತಮಾನದ 40ರ ದಶಕದವರೆಗೆ ಸೃಷ್ಟಿ ದೇವತೆಯು ತೋರಿಸಿಕೊಟ್ಟಂತೆ ರೈತರು(Farmer) ಬೇಸಾಯ ಪದ್ದತಿಗಳನ್ನು ಅಂದರೆ ಸಾವಯವ ಬೇಸಾಯ ಪದ್ದತಿಗಳನ್ನು(Organic Farming System) ಅನುಸರಿಸುತ್ತಿದ್ದರು. ಆದರೆ ಇತರ ದಿನಗಳಲ್ಲಿ ಮಾನವರು(Human)) ಸೃಷ್ಟಿ ನಿಯಮಕ್ಕೆ ವಿರುದ್ಧವಾಗಿ ನಡೆದು ಸಜೀವಿಗಳು (ಸಸ್ಯಗಳು, ಪ್ರಾಣಿಗಳು) ಬದುಕಿ, ಬಾಳಿ, ಸುಖ, ಶಾಂತಿ, ಸಂತೃಪ್ತಿ ಪಡೆಯಲು ಬೇಕಾದ ನೆಲ, ಆಕಾಶ, ಜಲ, ಅಗ್ನಿ, ಮತ್ತು ಗಾಳಿ ಇವುಗಳನ್ನು ಪೂರ್ತಿ ಮಾಲಿನ್ಯವಾಗುವಂತೆ(Pollution)ವರ್ತಿಸುತ್ತಿದ್ದಾರೆ. ತತ್ಪರಿಣಾಮವಾಗಿ ಬೇಸಾಯ ಕ್ಷೀಣವಾಗಿದೆ.

ಪರಿಸರವನ್ನು ಮಾಲಿನ್ಯಗೊಳಿಸುವಲ್ಲಿ ಬೇಸಾಯದಲ್ಲಿ ರಾಸಾಯನಿಕ ಗೊಬ್ಬರಗಳನ್ನು ಹಾಗೂ ಬೆಳೆಗಳಿಗೆ ಹಾನಿ ಉಂಟು ಮಾಡುವ ಪಿಡುಗುಗಳನ್ನು ನಾಶ ಮಾಡಲು ವಿಷಕಾರಿ ರಾಸಾಯನಿಕ ಪಿಡುಗುನಾಶಕಗಳನ್ನು ಹೆಚ್ಚು ಹೆಚ್ಚು ಉಪಯೋಗ ಮಾಡಿದುದೇ ಇದಕ್ಕೆ ಪ್ರಮುಖ ಅಂಶವಾಗಿದೆ. ರಾಸಾಯನಿಕ ಗೊಬ್ಬರಗಳು ಹಾಗೂ ವಿಷಕಾರಿ ರಾಸಾಯನಿಕ ಪಿಡುಗುನಾಶಕಗಳನ್ನು ಉಪಯೋಗ ಮಾಡುತ್ತಿರುವುದರಿಂದ ಮಾನವನ ಆಹಾರಕ್ಕಾಗಿ ಬಳಸುವ ಹಣ್ಣುಗಳು, ತರಕಾರಿಗಳು, ತೃಣಧಾನ್ಯಗಳು, ಬೇಳೆಕಾಳುಗಳು, ಎಣ್ಣೆಕಾಳುಗಳು ವಿಷಮಯವಾಗಿವೆ. ಈಗಿನ ಕಾಲಕ್ಕೆ ಒಂದರ್ಥದಲ್ಲಿ ಮಾನವನ ಆಹಾರವೆಲ್ಲವೂ ವಿಷಮಯವಾಗಿವೆ.”

ಪೋಷಕಾಂಶಗಳಾದ ಇಂಗಾಲ, ಆಮ್ಲಜನಕ ಮತ್ತು ಜಲಜನಕಗಳನ್ನು ಈಗಾಗಲೇ ಹೇಳಿದಂತೆ ಸಸ್ಯಗಳು ವಾತಾವರಣದಿಂದಲೇ ( ಗಾಳಿ ಮತ್ತು ನೀರಿನಿಂದ) ಪಡೆಯುತ್ತವೆ. ಇನ್ನುಳಿದ 13 ಪೋಷಕಾಂಶಗಳನ್ನು ಸಸ್ಯಗಳು ತಮ್ಮ ಬೇರಿನ ಮುಖಾಂತರ ಮಣ್ಣಿನಿಂದ ಪಡೆಯುತ್ತವೆ.”

“ತಿಪ್ಪೆ ಗುಂಡಿಯ ಮೇಲೆ ಬಿಸಿಲು, ಮಳೆ, ಗಾಳಿಗಳ ದುಷ್ಪರಿಣಾಮವನ್ನು ತಪ್ಪಿಸಲು ಬಹಳ ವೆಚ್ಚ ಮಾಡದೆ, ಒಂದು ಚಪ್ಪರವನ್ನು ಹಾಕುವುದು ಒಳಿತು. ಯಾಕೆಂದರೆ ತಿಪ್ಪೆ ಗುಂಡಿಯ ಮೇಲೆ ಮಳೆ, ಬಿಸಿಲು ಬಿದ್ದರೆ, ಆ ತಿಪ್ಪೆ ಗುಂಡಿಯಲ್ಲಿರುವ ಸಾರಜನಕವು ನೈಟ್ರೇಟ್ ಆಗಿ ಹಾರಿಹೋಗುವ ಸಂಭವವಿರುತ್ತದೆ.” ” ಮೃಗ ಪಂಚಕ ಮಳೆಗಾಲದ ಮೃಗಶಿರಾ, ಆರಿದ್ರಾ, ಪುನರ್ವಸು, ಪುಷ್ಯ, ಮತ್ತು ಆಶ್ಲೇಷಾ ಈ 5 ಮಳೆಗಳ ಅವಧಿಗೆ ಮುಂಗಾರು ಹಂಗಾಮು ಎಂದು ಕರೆಯುತ್ತಾರೆ.
ಮಘ ಪಂಚಕ ಮಳೆಗಳಾದ ಮಘಾ, ಉತ್ತರೆ, ಹಸ್ತ, ಚಿತ್ತ, ಮತ್ತು ಸ್ವಾತಿ ಈ 5 ಮಳೆಗಳ ಅವಧಿಗೆ ಹಿಂಗಾರು ಹಂಗಾಮು ಎಂದು ಕರೆಯುತ್ತಾರೆ. ”

ಬರಹ :
ಪ್ರೊ. ಎಸ್ ಎಸ್ ಕಟಗಿಹಳ್ಳಿಮಠ
,  ಸಾವಯವ ಕೃಷಿ, (ಒಂದು ಅಧ್ಯಯನ)
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

2 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

11 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

18 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago