ಕೇಂದ್ರ ಸರ್ಕಾರದ ಫಸಲ್ ಭೀಮಾ ಯೋಜನೆಯಡಿ ಅತಿ ಹೆಚ್ಚು ಬೆಳೆ ವಿಮೆ ಪಡೆದ ಜಿಲ್ಲೆಗಳ ಪಟ್ಟಿಯಲ್ಲಿ ರಾಜ್ಯದ ಕಲಬುರಗಿ ಹಾಗೂ ಗದಗ ಜಿಲ್ಲೆಗಳು ಮೊದಲ ಸ್ಥಾನದಲ್ಲಿವೆ. ಕಳೆದ ವರ್ಷ ಹಂಗಾಮಿ ಮುಂಗಾರಿನಿಂದ ಉಂಟಾದ ಬೆಳೆ ಹಾನಿಯಿಂದ ಇಲ್ಲಿನ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ತೊಗರಿ,ಹತ್ತಿ,ಭತ್ತ,ರಾಗಿ, ಮೆಕ್ಕೆಜೋಳ, ಸೋಯಾಬಿನ್, ನೆಲಗಡಲೆ ಸೇರಿದಂತೆ ವಿವಿಧ ಬೆಳೆಗಳಿಗೆ ಬೆಳೆವಿಮೆ ಮಾಡಿಸಿದ ಫಲವಾಗಿ ಇದೀಗ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಫಸಲ್ ಭೀಮಾ ಯೋಜನೆಯಡಿ ರಾಜ್ಯಕ್ಕೆ 14ಸಾವಿರದ 48 ಕೋಟಿ ಹಣ ಬಿಡುಗಡೆಯಾಗಿದ್ದು, ಈ ಭಾಗದ ರೈತರು ಯೋಜನೆಯ ಹೆಚ್ಚು ಫಲಾನುಭವಿಗಳಾಗಿದ್ದಾರೆ.
2ಲಕ್ಷದ 18ಸಾವಿರದ 868 ರೈತರ, 2ಕೋಟಿ 57ಲಕ್ಷದ 962 ಹೆಕ್ಟೇರ್ ಭೂಮಿ ಫಸಲ್ ಭೀಮಾ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿದ್ದು, 68 ಕೋಟಿ 57 ಲಕ್ಷ ಹಣ ಜಿಲ್ಲೆಗೆ ಬಿಡುಗಡೆಯಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಸಮದ್ ಪಟೇಲ್ ಹೇಳಿದ್ದಾರೆ. ಅತಿವೃಷ್ಠಿ ಹಾಗೂ ಅನಾವೃಷ್ಟಿ ಎರಡರಿಂದಲೂ ನಮ್ಮ ಭಾಗದ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ. ವಿಮಾ ಯೋಜನೆ ಮಾಡಿಸುವುದರ ಫಲವಾಗಿ ಭಿತ್ತನೆಯಿಂದ ಕಟಾವಿನವರೆಗೂ ಬೆಳೆವಿಮೆ ದೊರೆಯಲಿದೆ ಎಂದು ಹೇಳುತ್ತಾರೆ ರೈತ ವಿಶ್ವನಾಥ್ ಪೂಜಾರಿ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…